67 ವರ್ಷದ ಆತ, 24 ವರ್ಷದ ಆಕೆ ಮದುವೆ, ರಕ್ಷಣೆ ನೀಡಲು 'ಹೈ' ಸೂಚನೆ
67 ವರ್ಷದ ಶಂಷೇರ್ ಸಿಂಗ್ ಹಾಗೂ 24 ವರ್ಷದ ನವ್ ಪ್ರೀತ್ ಕೌರ್ ಈಚೆಗೆ ಮದುವೆ ಆಗಿದ್ದು, ಅವರ ಸ್ವಾತಂತ್ರ್ಯ ಹಾಗೂ ಜೀವಕ್ಕೆ ರಕ್ಷಣೆ ಒದಗಿಸಬೇಕು ಎಂದು ಪಂಜಾಬ್ ಮತ್ತು ಹರಿಯಾಣ ಹೈ ಕೋರ್ಟ್ ಪೊಲೀಸರಿಗೆ ಸೂಚನೆ ನೀಡಿದೆ. ಧುರಿ ಉಪವಿಭಾಗದ ಬಲಿಯಾನ್ ಹಳ್ಳಿಯವರು ಶಂಷೇರ್ ಹಾಗೂ ನವ್ ಪ್ರೀತ್ ಚಂಡೀಗಢದ ಗುರ್ ದ್ವಾರ್ ನಲ್ಲಿ ಜನವರಿಯಲ್ಲಿ ವಿವಾಹವಾಗಿದ್ದರು.
ಅವರ ಮದುವೆ ಫೋಟೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದವು. ತಮ್ಮ ಕುಟುಂಬಗಳು ಹಾಗೂ ಸಂಬಂಧಿಕರಿಂದ ಬೆದರಿಕೆ ಬರುತ್ತಿದೆ, ತಮಗೆ ಭದ್ರತೆ ಒದಗಿಸಬೇಕು ಎಂದು ಹೈ ಕೋರ್ಟ್ ಮೊರೆ ಹೋಗಿದ್ದರು.
"ಇದು ಅಪರೂಪದ ಮದುವೆ. ಈ ಸಂಬಂಧಕ್ಕೆ ಕುಟುಂಬದವರ ಸಮ್ಮತಿ ಇರಲಿಲ್ಲ. ಆದ್ದರಿಂದ ಜೋಡಿ ಹೈಕೋರ್ಟ್ ಮೆಟ್ಟಿಲೇರಿದರು. ತಮ್ಮ ಕುಟುಂಬ ಹಾಗೂ ಸಂಬಂಧಿಕರಿಂದ ಜೀವಕ್ಕೆ ಅಪಾಯವಿದೆ ಎಂಬುದು ಅವರ ಅಹವಾಲಾಗಿತ್ತು. ಫೆಬ್ರವರಿ ನಾಲ್ಕರಂದು ಕೊರ್ಟ್ ನಿಂದ ಪೊಲೀಸರಿಗೆ ನಿರ್ದೇಶನ ನೀಡಲಾಗಿದೆ. ಅವರ ಸುರಕ್ಷತೆಗೆ ಕ್ರಮ ತೆಗೆದುಕೊಳ್ಳಲು ಸೂಚಿಸಲಾಗಿದೆ" ಎಂದು ವಕೀಲರು ಹೇಳಿದ್ದಾರೆ.

ಯಾವುದೇ ಹೇಳಿಕೆ ನೀಡಲು ಈ ಜೋಡಿ ನಿರಾಕರಿಸಿದ್ದಾರೆ. ಆದರೆ ಈ ಮದುವೆ ಕಾನೂನಾತ್ಮಕವಾಗಿದೆ ಎಂದು ವಕೀಲರಿ ಹೇಳಿದ್ದಾರೆ. ಅವರು ವಯಸ್ಕರರು. ಮದುವೆ ಬಗ್ಗೆ ತೀರ್ಮಾನಿಸಲು ಹಕ್ಕಿದೆ. ಇಬ್ಬರಿಗೂ ಬೇರೆ ಜೀವಂತ ಸಂಗಾತಿ ಇಲ್ಲವಾದ್ದರಿಂದ ಮದುವೆ ಕಾನೂನುಬದ್ಧವಾಗಿದೆ ಎಂದು ವಕೀಲರು ತಿಳಿಸಿದ್ದಾರೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications