ಅಮೃತಸರ ದಾಳಿ: ಶಂಕಿತರ ಅಸ್ಪಷ್ಟ ಚಿತ್ರ ಕ್ಯಾಮರಾದಲ್ಲಿ ಸೆರೆ
ಅಮೃತಸರ, ನವೆಂಬರ್ 19: ಪಂಜಾಬಿನ ಅಮೃತಸರದ ರಾಜಸಾನ್ಸಿಯ ನಿರಹಂಕಾರಿ ಭಯನ್ ಪ್ರಾರ್ಥನಾ ಮಂದಿರದ ಮೇಲೆ ನಡೆದ ಬಾಂಬ್ ದಾಳಿಗೆ ಸಂಬಂಧಿಸಿದಂತೆ ಇಬ್ಬರು ಶಂಕಿತ ಅಸ್ಪಷ್ಟ ಚಿತ್ರವೊಂದು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಈ ಚಿತ್ರವನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ. ಕೆಲವು ಮಾಹಿತಿಯ ಪ್ರಕಾರ ಈ ದಾಳಿಯಲ್ಲಿ ಸ್ಥಳೀಯರದೇ ಕೈವಾಡವಿರಬಹುದು ಎನ್ನಲಾಗುತ್ತಿದೆ.
ಇಬ್ಬರು ಬೈಕ್ ನಲ್ಲಿ ಬರುತ್ತಿರುವ ಈ ಚಿತ್ರ ಅಸ್ಪಷ್ಟವಾಗಿದ್ದು, ಬೈಕ್ ಸಂಖ್ಯೆಯನ್ನಾಗಲೀ, ಶಂಕಿತರ ಮುಖವನ್ನಾಗಲೀ ಪತ್ತೆ ಹಚ್ಚುವುದಕ್ಕೆ ಸಾಧ್ಯವಾಗುತ್ತಿಲ್ಲ.

ಸ್ಥಳೀಯ ಯುವಕರೇ ಈ ಕೃತ್ಯ ಎಸಗಿರಬಹುದು ಎನ್ನಲಾಗಿದ್ದು, ಭಾನುವಾರ ಆಶ್ರಮದ ಆವರಣದಲ್ಲಿ ಕಾರ್ಯಕ್ರಮವಿದೆ ಎಂದು ಬಲ್ಲವರೇ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ದಾಳಿಗೂ ಮುನ್ನ ಆಶ್ರಮದ ಆವರಣದಲ್ಲಿ ಆರೋಪಿಗಳು ಹಲವು ಬಾರಿ ಓಡಾಡಿ, ಸಮೀಕ್ಷೆ ನಡೆಸಿದ್ದಿರಬಹುದು ಎನ್ನಲಾಗಿದ್ದು, ಆಶ್ರಮದ ಆವರಣದ ಸಿಸಿಟಿವಿ ಫೂಟೇಜ್ ಗಳ ಮೂಲಕ ಮಾಹಿತಿ ಕಲೆಹಾಕಲಾಗುತ್ತಿದೆ.
ಖಾಲಿಸ್ಥಾನಿ ಚಳವಳಿಯ ಬೆಂಬಲಿಗರಿಂದಲೇ ಈ ಕೃತ್ಯ ನಡೆದಿರಬಹುದು ಎಂದೂ ಶಂಕಿಸಲಾಗಿದೆ.
ಭಾನುವಾರ ನಡೆದ ಈ ಘಟನೆಯಲ್ಲಿ ಮೂವರು ಮೃತಪಟ್ಟಿದ್ದು, 20 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದರು.
ಮೃತರ ಕುಟುಂಬಕ್ಕೆ 5 ಲಕ್ಷ ರೂ.ಪರಿಹಾರ ಘೋಷಿಸಿದ ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್, ಗ್ರೆನೇಡ್ ದಾಳಿಕೋರರ ಸುಳಿವು ನೀಡಿದವರಿಗೆ 50 ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications