ಅಮೃತಸರ ದಾಳಿ: ಶಂಕಿತರ ಅಸ್ಪಷ್ಟ ಚಿತ್ರ ಕ್ಯಾಮರಾದಲ್ಲಿ ಸೆರೆ
ಅಮೃತಸರ, ನವೆಂಬರ್ 19: ಪಂಜಾಬಿನ ಅಮೃತಸರದ ರಾಜಸಾನ್ಸಿಯ ನಿರಹಂಕಾರಿ ಭಯನ್ ಪ್ರಾರ್ಥನಾ ಮಂದಿರದ ಮೇಲೆ ನಡೆದ ಬಾಂಬ್ ದಾಳಿಗೆ ಸಂಬಂಧಿಸಿದಂತೆ ಇಬ್ಬರು ಶಂಕಿತ ಅಸ್ಪಷ್ಟ ಚಿತ್ರವೊಂದು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಈ ಚಿತ್ರವನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ. ಕೆಲವು ಮಾಹಿತಿಯ ಪ್ರಕಾರ ಈ ದಾಳಿಯಲ್ಲಿ ಸ್ಥಳೀಯರದೇ ಕೈವಾಡವಿರಬಹುದು ಎನ್ನಲಾಗುತ್ತಿದೆ.
ಇಬ್ಬರು ಬೈಕ್ ನಲ್ಲಿ ಬರುತ್ತಿರುವ ಈ ಚಿತ್ರ ಅಸ್ಪಷ್ಟವಾಗಿದ್ದು, ಬೈಕ್ ಸಂಖ್ಯೆಯನ್ನಾಗಲೀ, ಶಂಕಿತರ ಮುಖವನ್ನಾಗಲೀ ಪತ್ತೆ ಹಚ್ಚುವುದಕ್ಕೆ ಸಾಧ್ಯವಾಗುತ್ತಿಲ್ಲ.

ಸ್ಥಳೀಯ ಯುವಕರೇ ಈ ಕೃತ್ಯ ಎಸಗಿರಬಹುದು ಎನ್ನಲಾಗಿದ್ದು, ಭಾನುವಾರ ಆಶ್ರಮದ ಆವರಣದಲ್ಲಿ ಕಾರ್ಯಕ್ರಮವಿದೆ ಎಂದು ಬಲ್ಲವರೇ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ದಾಳಿಗೂ ಮುನ್ನ ಆಶ್ರಮದ ಆವರಣದಲ್ಲಿ ಆರೋಪಿಗಳು ಹಲವು ಬಾರಿ ಓಡಾಡಿ, ಸಮೀಕ್ಷೆ ನಡೆಸಿದ್ದಿರಬಹುದು ಎನ್ನಲಾಗಿದ್ದು, ಆಶ್ರಮದ ಆವರಣದ ಸಿಸಿಟಿವಿ ಫೂಟೇಜ್ ಗಳ ಮೂಲಕ ಮಾಹಿತಿ ಕಲೆಹಾಕಲಾಗುತ್ತಿದೆ.
ಖಾಲಿಸ್ಥಾನಿ ಚಳವಳಿಯ ಬೆಂಬಲಿಗರಿಂದಲೇ ಈ ಕೃತ್ಯ ನಡೆದಿರಬಹುದು ಎಂದೂ ಶಂಕಿಸಲಾಗಿದೆ.
ಭಾನುವಾರ ನಡೆದ ಈ ಘಟನೆಯಲ್ಲಿ ಮೂವರು ಮೃತಪಟ್ಟಿದ್ದು, 20 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದರು.
ಮೃತರ ಕುಟುಂಬಕ್ಕೆ 5 ಲಕ್ಷ ರೂ.ಪರಿಹಾರ ಘೋಷಿಸಿದ ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್, ಗ್ರೆನೇಡ್ ದಾಳಿಕೋರರ ಸುಳಿವು ನೀಡಿದವರಿಗೆ 50 ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications