ಲುಧಿಯಾನ ಜೈಲಿನಲ್ಲಿ ಭಾರೀ ಹೊಡೆದಾಟ; ಕೈದಿ ಸಾವು, 35 ಮಂದಿಗೆ ಗಾಯ
ಲುಧಿಯಾನ (ಪಂಜಾಬ್), ಜೂನ್ 27: ಲುಧಿಯಾನದ ಸೆಂಟ್ರಲ್ ಜೈಲಿನಲ್ಲಿ ಗುರುವಾರ ಗ್ಯಾಂಗ್ ಸ್ಟರ್ ಗಳ ಎರಡು ಗುಂಪಿನ ಮಧ್ಯೆ ಹೊಡೆದಾಟ ನಡೆದು, ಒಬ್ಬ ಮೃತಪಟ್ಟು, ಮೂವತ್ತೈದು ಮಂದಿ ಗಾಯಗೊಂಡಿದ್ದಾರೆ. ಸನ್ನಿವೇಶವನ್ನು ಹತೋಟಿಗೆ ತರುವ ಸಲುವಾಗಿ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.
ಈ ಘಟನೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಗಾಯಗೊಂಡಿದ್ದಾರೆ. ಈ ಘಟನೆ ಬಗ್ಗೆ ತನಿಖೆ ನಡೆಸಿ, ವರದಿ ನೀಡುವಂತೆ ಲುಧಿಯಾನದ ಡೆಪ್ಯೂಟಿ ಕಮಿಷನರ್ ಗೆ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅದೇಶ ನೀಡಿದ್ದಾರೆ ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಡ್ರಗ್ ಕೇಸಿನ ಕೈದಿಯೊಬ್ಬ ಗುರುವಾರ ಪಟಿಯಾಲ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ನಂತರ ಸಮಸ್ಯೆ ಆರಂಭವಾಯಿತು. ಡಿಸಿಪಿ ಅಶ್ವನಿ ಕಪೂರ್ ಮಾತನಾಡಿ, ಸನ್ನಿ ಸೂದ್ ಅಸ್ವಸ್ಥನಾಗಿದ್ದ ಎಂದು ಬುಧವಾರ ಪಟಿಯಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಆತ ಗುರುವಾರ ಮೃತಪಟ್ಟಿದ್ದ.

ಸನ್ನಿ ಸೂದ್ ಸಾವನ್ನಪ್ಪಿದ ಸುದ್ದಿ ಗೊತ್ತಾಗುತ್ತಿದ್ದಂತೆ ಆತನ ಸಹಚರ ಗ್ಯಾಂಗ್ ಸ್ಟರ್ ಗಳು ಇತರ ಕೈದಿಗಳೊಂದಿಗೆ ರೊಳ್ಳೆ ತೆಗೆದಿದ್ದಾರೆ. ಸೂದ್ ನನ್ನು ಪೊಲೀಸರು 'ಕೊಲೆ ಮಾಡಿದ್ದಾರೆ' ಎಂದು ಆರೋಪ ಮಾಡಿದ್ದಾರೆ.
ಕಪೂರ್ ಹೇಳುವ ಪ್ರಕಾರ, ಸನ್ನಿವೇಶವನ್ನು ಹತೋಟಿಗೆ ತರಲು ಗಾಳಿಯಲ್ಲಿ ಗುಂಡು ಹಾರಿಸಿದಾಗ ಪರಿಸ್ಥಿತಿ ವಿಕೋಪಕ್ಕೆ ಹೋಗಿದೆ. ಬಡಿದಾಟದ ವೇಳೆ ಒಬ್ಬ ಮೃತಪಟ್ಟು, ಎಸಿಪಿಯೊಬ್ಬರು ಸೇರಿದಂತೆ ಮೂವತ್ತೈದು ಮಂದಿ ಗಾಯಗೊಂಡಿದ್ದಾರೆ ಎಂದು ಅಶ್ವನಿ ಕಪೂರ್ ತಿಳಿಸಿದ್ದಾರೆ.
ಕಲ್ಲು ತೂರಾಟ ನಡೆಸುವ ಜತೆಗೆ, ಜೈಲು ಸೂಪರಿಂಟೆಂಡೆಂಟ್ ರ ಅಧಿಕೃತ ವಾಹನ ಹಾಗೂ ಜೈಲು ಅಡುಗೆ ಮನೆಯ ಒಂದು ಭಾಗಕ್ಕೆ ಬೆಂಕಿ ಹೊತ್ತಿಸಲಾಗಿದೆ. ಅಗ್ನಿಶಾಮಕ ದಳದ ಅಧಿಕಾರಿಗಳು, ಜೈಲು ಅಧಿಕಾರಿಗಳು ನೀಡಿರುವ ಮಾಹಿತಿ ಅನ್ವಯ, ಗಲಭೆಕೋರರ ಸಂಖ್ಯೆ ಮುನ್ನೂರರಷ್ಟಿದ್ದರು. ಜೈಲಿನ ಮುಖ್ಯ ದ್ವಾರವನ್ನು ಮುರಿಯಲು ಕೂಡ ಯತ್ನಿಸಿದ್ದಾರೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ಕೈದಿಯನ್ನು ಅಜಿತ್ ಬಾಬಾ ಎಂದು ಗುರುತಿಸಲಾಗಿದೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications