ಪಾಕಿಸ್ತಾನದಿಂದ ಹಾರಿಬಂದ ಪಾರಿವಾಳದ ವಿರುದ್ಧ ಎಫ್ಐಆರ್ ದಾಖಲು
ಅಮೃತಸರ, ಏಪ್ರಿಲ್ 22: ಪಾಕಿಸ್ತಾನದಿಂದ ಹಾರಿಬಂದಿದ್ದ ಪಾರಿವಾಳದ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಪಾರಿವಾಳದ ಬಾಯಲ್ಲಿ ಬಿಳಿಯ ಕಾಗದವಿದ್ದಿದ್ದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಪಾಕಿಸ್ತಾನದಿಂದ ಭಾರತದ ಗಡಿಯೊಳಗೆ ಒಳನುಸುಳವವರನ್ನು ಹಿಡಿದು ಪ್ರಕರಣ ದಾಖಲಿಸುವುದು ಬಿಎಸ್ ಎಫ್ ಕೆಲಸ,ಆದರೆ ಈ ಬಾರಿ ಗಡಿ ಭದ್ರತಾ ಪಡೆ ವಿಚಿತ್ರ ಆಗಂತುಕನನ್ನು ಬಂಧಿಸಿದ್ದು, ಆ ಆಗಂತುಕ ಬೇರಾರು ಅಲ್ಲ ಪಾರಿವಾಳ. ಪಾಕಿಸ್ತಾನದಿಂದ ಭಾರತದೊಳಗೆ ಹಾರಿ ಬಂದಿರುವ ಪಾರಿವಾಳದ ವಿರುದ್ಧ ಗೂಢಚಾರಿಕೆ ನಡೆಸಿದ ಆರೋಪದ ಮೇರೆಗೆ ಎಫ್ ಐಆರ್ ದಾಖಲಿಸುವಂತೆ ಬಿಎಸ್ ಎಫ್ ಅಧಿಕಾರಿಗಳು ಒತ್ತಾಯಿಸಿದ್ದರು.
ಇದೀಗ ಪಾರಿವಾಳದ ಮೇಲೆ ಎಫ್ಐಆರ್ ದಾಖಲಿಸಲಾಗಿದೆ. ಈ ಕುರಿತು ಮಾತನಾಡಿದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಧ್ರುವ್ ದಹಿಯಾ ಅವರು ಮಾತನಾಡಿ, ಬಿಎಸ್ಎಫ್ ಪಾರಿವಾಳದ ವಿರುದ್ಧ ಎಫ್ಐಆರ್ ನೋಂದಾಯಿಸಲು ಒತ್ತಾಯಿಸಲಾಗಿದೆ. ಪಾರಿವಾಳವು ಪಕ್ಷಿಯಾಗಿರುವುದರಿಂದ, ಅದರ ವಿರುದ್ಧ ಎಫ್ಐಆರ್ ದಾಖಲಿಸಬಹುದು ಎಂದು ನಾನು ಭಾವಿಸುವುದಿಲ್ಲ.

ಆದರೆ ಅವರ ಅಭಿಪ್ರಾಯಕ್ಕಾಗಿ ನಾವು ಈ ವಿಷಯವನ್ನು ನಮ್ಮ ಕಾನೂನು ತಜ್ಞರಿಗೆ ಹಸ್ತಾಂತರಿಸಿದ್ದೇವೆ ಎಂದು ಅವರು ಬುಧವಾರ ಹೇಳಿದ್ದರು. ಪಾರಿವಾಳದ ಕಾಲಿಗೆ ಟ್ಯಾಗ್ ಮಾಡಲಾದ ಸಂಖ್ಯೆಯನ್ನು ವಿಶ್ಲೇಷಿಸಲಾಗುತ್ತಿದ್ದು, ಗೂಢಚರ್ಯೆ ಯತ್ನಗಳನ್ನು ಶಂಕಿಸಲಾಗುತ್ತಿದೆ. ಗಡಿ ಪ್ರದೇಶಗಳಲ್ಲಿ ಪಾರಿವಾಳಗಳನ್ನು ಸೆರೆಹಿಡಿಯಲಾಗಿದೆ ಎಂದು ಹೇಳಿದ್ದಾರೆ.
ಕಳೆದ ಶನಿವಾರ ಇಲ್ಲಿನ ರೊರಾವಾಲಾ ಪೋಸ್ಟ್ನಲ್ಲಿರುವ ಗಡಿ ಭದ್ರತಾ ಪಡೆಯ ಜವಾನನ ಭುಜದ ಮೇಲೆ ಶಂಕಿತ ಪಾರಿವಾಳವೊಂದು ತಾನೇ ತಾನಾಗಿ ಬಂದು ಕೂತಿದೆ. ಈ ಪಾರಿವಾಳದ ಕಾಲಿನಲ್ಲಿ ಸಣ್ಣ ಪೇಪರ್ ತುಂಡನ್ನು ಕಟ್ಟಲಾಗಿತ್ತು.
ಈ ಪೇಪರ್ ನಲ್ಲಿ ಕೆಲ ಸಂಪರ್ಕ ಸಂಖ್ಯೆಗಳನ್ನು ನಮೂದಿಸಲಾಗಿತ್ತು. ಈ ಪಾರಿವಾಳ ಗಡಿಯುದ್ದಕ್ಕೂ ಹಾರಾಟ ನಡೆಸಿತ್ತು. ಹೀಗಾಗಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಬಿಎಸ್ಎಫ್ ಸಿಬ್ಬಂದಿ ಲಿಖಿತ ಬೇಡಿಕೆಯೊಂದಿಗೆ ಪಕ್ಷಿಯನ್ನು ಪೊಲೀಸರಿಗೆ ಹಸ್ತಾಂತರಿಸಿದ್ದಾರೆ ಎಂದು ಬಿಎಸ್ಎಫ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications