'ಕಡಿಮೆಯೆಂದರೂ 100 ಸರ್ಜಿಕಲ್ ಸ್ಟ್ರೈಕ್ ಮಾಡಿದ್ದೆವು, ಯಾವಾಗ ಗೊತ್ತಾ...'
ಪಟಿಯಾಲ, ಮೇ 09: ನಾವು ಕಡಿಮೆ ಎಂದರೂ ನೂರು ಸರ್ಜಿಕಲ್ ಸ್ತ್ರೈಕ್ ಮಾಡಿದ್ದೆವು. ಆದರೆ ಅದಕ್ಕೆ ಸರ್ಜಿಕಲ್ ಸ್ಟ್ರೈಕ್ ಎಂದು ಹೆಸರಿಟ್ಟಿರಲಿಲ್ಲ. ಅದನ್ನು ಹೇಳಿಕೊಂಡಿರಲಿಲ್ಲ ಎಂದು ಪಂಜಾಬ್ ಮುಖ್ಯಮಂತ್ರಿ ಕ್ಯಾ.ಅಮರೀಂದರ್ ಸಿಂಗ್ ಹೇಳಿದರು.
ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡುತ್ತಿದ್ದ ಅವರು, "ಪ್ರಧಾನಿ ನರೇಂದ್ರ ಮೋದಿ ಅವರು ಇತಿಹಾಸದ ಪಾಠಗಳನ್ನು ತಿಳಿದುಕೊಂಡರೆ ಒಳ್ಳೆಯದು" ಎಂದರು.
"ಬಿಜೆಪಿಗೆ ಇತಿಹಾಸ ಜ್ಞಾನವಿಲ್ಲ. ಯಾರಿಗೆ ಭಾರತೀಯ ಸೇನೆಯ ಇತಿಹಾಸ ಗೊತ್ತಿದೆಯೋ ಅವರಿಗೆಲ್ಲ ಸರ್ಜಿಕಲ್ ಸ್ಟ್ರೈಕ್ ನೂರಾರು ಭಾರಿ ನಡೆದಿದೆ ಎಂಬುದು ಗೊತ್ತು. 1964 ರಿಂದ 1967 ರವರೆಗೆ ಸುಮಾರು 100 ಕ್ಕೂ ಹೆಚ್ಚು ಬಾರಿ ಮಿಲಿಟರಿ ಕಾರ್ಯಾಚರಣೆ ನಡೆದಿದೆ. ಅಂಥ ಕಾರ್ಯಾಚರಣೆಗಳಿಗೇ ಇವರು(ಬಿಜೆಪಿ) 'ಸರ್ಜಿಕಲ್ ಸ್ಟ್ರೈಕ್' ಎಂದು ಹೆಸರಿಟ್ಟಿದ್ದಾರೆ. ನಾವು ಅದನ್ನು ಕ್ರಾಸ್ ಬಾರ್ಡರ್ ಸ್ಟ್ರೈಕ್ ಎಂದು ಕರೆಯುತ್ತಿದ್ದೆವು. ನಾವು ಇಂಥ ದಾಳಿ ಮಾಡಿದ್ದೇವೆ ಎಂದು ಎಂದಿಗೂ ಹೇಳಿಕೊಳ್ಳುತ್ತಿರಲಿಲ್ಲ. ಸೇನೆಯ ಗೌಪ್ಯತೆಯನ್ನು ಕಾಪಾಡುವುದು ನಮ್ಮ ಕರ್ತವ್ಯ ಎಂದು ನಾವು ನಂಬಿದ್ದೆವು" ಎಂದು ಅಮರೀಂದರ್ ಸಿಂಗ್ ಹೇಳಿದರು.

ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಅವರು 1960 ರಲ್ಲಿ ಸಿಖ್ ರೆಜಿಮೆಂಟಿನಲ್ಲಿ ಕಾರ್ಯ ನಿರ್ವಹಿಸಿದ್ದರು.
ಫೆಬ್ರವರಿ 14 ರ ಪುಲ್ವಾಮಾ ದಾಳಿಯ ನಂತರ ಕೇಂದ್ರ ಸರ್ಕಾರದ ಪ್ರತಿ ನಡೆಯುವ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡೇ ಮಾಡಿದ್ದು ಎಂದು ಅಮರೀಂದರ್ ಹೇಳಿದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications