'ಕಡಿಮೆಯೆಂದರೂ 100 ಸರ್ಜಿಕಲ್ ಸ್ಟ್ರೈಕ್ ಮಾಡಿದ್ದೆವು, ಯಾವಾಗ ಗೊತ್ತಾ...'
ಪಟಿಯಾಲ, ಮೇ 09: ನಾವು ಕಡಿಮೆ ಎಂದರೂ ನೂರು ಸರ್ಜಿಕಲ್ ಸ್ತ್ರೈಕ್ ಮಾಡಿದ್ದೆವು. ಆದರೆ ಅದಕ್ಕೆ ಸರ್ಜಿಕಲ್ ಸ್ಟ್ರೈಕ್ ಎಂದು ಹೆಸರಿಟ್ಟಿರಲಿಲ್ಲ. ಅದನ್ನು ಹೇಳಿಕೊಂಡಿರಲಿಲ್ಲ ಎಂದು ಪಂಜಾಬ್ ಮುಖ್ಯಮಂತ್ರಿ ಕ್ಯಾ.ಅಮರೀಂದರ್ ಸಿಂಗ್ ಹೇಳಿದರು.
ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡುತ್ತಿದ್ದ ಅವರು, "ಪ್ರಧಾನಿ ನರೇಂದ್ರ ಮೋದಿ ಅವರು ಇತಿಹಾಸದ ಪಾಠಗಳನ್ನು ತಿಳಿದುಕೊಂಡರೆ ಒಳ್ಳೆಯದು" ಎಂದರು.
"ಬಿಜೆಪಿಗೆ ಇತಿಹಾಸ ಜ್ಞಾನವಿಲ್ಲ. ಯಾರಿಗೆ ಭಾರತೀಯ ಸೇನೆಯ ಇತಿಹಾಸ ಗೊತ್ತಿದೆಯೋ ಅವರಿಗೆಲ್ಲ ಸರ್ಜಿಕಲ್ ಸ್ಟ್ರೈಕ್ ನೂರಾರು ಭಾರಿ ನಡೆದಿದೆ ಎಂಬುದು ಗೊತ್ತು. 1964 ರಿಂದ 1967 ರವರೆಗೆ ಸುಮಾರು 100 ಕ್ಕೂ ಹೆಚ್ಚು ಬಾರಿ ಮಿಲಿಟರಿ ಕಾರ್ಯಾಚರಣೆ ನಡೆದಿದೆ. ಅಂಥ ಕಾರ್ಯಾಚರಣೆಗಳಿಗೇ ಇವರು(ಬಿಜೆಪಿ) 'ಸರ್ಜಿಕಲ್ ಸ್ಟ್ರೈಕ್' ಎಂದು ಹೆಸರಿಟ್ಟಿದ್ದಾರೆ. ನಾವು ಅದನ್ನು ಕ್ರಾಸ್ ಬಾರ್ಡರ್ ಸ್ಟ್ರೈಕ್ ಎಂದು ಕರೆಯುತ್ತಿದ್ದೆವು. ನಾವು ಇಂಥ ದಾಳಿ ಮಾಡಿದ್ದೇವೆ ಎಂದು ಎಂದಿಗೂ ಹೇಳಿಕೊಳ್ಳುತ್ತಿರಲಿಲ್ಲ. ಸೇನೆಯ ಗೌಪ್ಯತೆಯನ್ನು ಕಾಪಾಡುವುದು ನಮ್ಮ ಕರ್ತವ್ಯ ಎಂದು ನಾವು ನಂಬಿದ್ದೆವು" ಎಂದು ಅಮರೀಂದರ್ ಸಿಂಗ್ ಹೇಳಿದರು.

ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಅವರು 1960 ರಲ್ಲಿ ಸಿಖ್ ರೆಜಿಮೆಂಟಿನಲ್ಲಿ ಕಾರ್ಯ ನಿರ್ವಹಿಸಿದ್ದರು.
ಫೆಬ್ರವರಿ 14 ರ ಪುಲ್ವಾಮಾ ದಾಳಿಯ ನಂತರ ಕೇಂದ್ರ ಸರ್ಕಾರದ ಪ್ರತಿ ನಡೆಯುವ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡೇ ಮಾಡಿದ್ದು ಎಂದು ಅಮರೀಂದರ್ ಹೇಳಿದರು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications