Breaking: ಇಬ್ಬರು ಅಧಿಕಾರಿಗಳಿಗೆ ಗುಂಡು ಹಾರಿಸಿದ ಯೋಧ
ಚಂಡೀಗಢ, ಜೂನ್ 27: ಪಂಜಾಬ್ನ ಪಠಾಣ್ಕೋಟ್ ಜಿಲ್ಲೆಯಲ್ಲಿ ಸೋಮವಾರ ನಡೆದ ಗುಂಡಿನ ದಾಳಿನ ನಡೆದಿದೆ. ಈ ಗುಂಡಿನ ದಾಳಿಯಲ್ಲಿ ಇಬ್ಬರು ಸೇನಾ ಅಧಿಕಾರಿಗಳು ಹತ್ಯೆಗೀಡಾಗಿದ್ದಾರೆ.
ಭಾರತೀಯ ಸೇನೆಗೆ ಸೇರಿರುವ ಯೋಧನಿಂದಲೇ ಇಬ್ಬರು ಅಧಿಕಾರಿಗಳ ಹತ್ಯೆಯಾಗಿದೆ. ತನ್ನ ಇಬ್ಬರು ಸಹೋದ್ಯೋಗಿಗಳನ್ನು ಯೋಧ ಗುಂಡಿಕ್ಕಿ ಕೊಂದಿರುವ ಘಟನೆ ನಡೆದಿದೆ. ಈ ಸೇನಾ ಸಿಬ್ಬಂದಿ ಅವರು ಮಿರ್ಥಲ್ ಕಂಟೋನ್ಮೆಂಟ್ನಲ್ಲಿದ್ದರು.
पठानकोट में सेना के जवान ने मारी गोली . सो रहे 2 अधिकारियों को मारी गोली, दोनों की मौत, वारदात को अंजाम देकर आरोपी जवान मौके से फरार, हत्या के कारणों का अभी तक नहीं हुआ खुलासा... #Pathankot #IndianArmy
— Harsh Agrawal (@HarshAgrawal__) June 27, 2022
ಮೃತ ಸಶಸ್ತ್ರ ಪಡೆಗಳ ಇಬ್ಬರು ಅಧಿಕಾರಿಗಳು ಮಲಗಿ ನಿದ್ರಿಸುತ್ತಿದ್ದ ವೇಳೆಯಲ್ಲಿ ಗುಂಡಿನ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಘಟನೆ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಕೊಲೆಗೆ ಕಾರಣಗಳು ಇನ್ನೂ ಬಹಿರಂಗವಾಗಿಲ್ಲ.

ಘಟನೆ ವಿವರ: ಇಂದು ಮುಂಜಾನೆ 2.30 ರ ಸುಮಾರಿಗೆ ಮಿರ್ಥಾಲ್ನಲ್ಲಿರುವ 15ನೇ ಗಾರ್ಡ್ ಸೇನಾ ಸಂಕೀರ್ಣದಲ್ಲಿ ಸೇನಾ ಸಿಬ್ಬಂದಿಗಳ ನಡುವೆ ಸಣ್ಣದಾಗಿ ಮಾತಿನ ಚಕಮಕಿ ಆರಂಭವಾಗಿದೆ. ಮಾತುಕತೆ ವಿಕೋಪಕ್ಕೆ ತಿರುಗಿದ ನಂತರ ಸಹೋದ್ಯೋಗಿಯೊಬ್ಬರು ಗುಂಡಿಕ್ಕಿ ಇಬ್ಬರು ಸೈನಿಕರನ್ನು ಕೊಂದಿದ್ದಾರೆ.
ಗುಂಡು ಹಾರಿಸಿದ ಸಿಪಾಯಿಯನ್ನು ಜಾರ್ಖಂಡ್ ಮೂಲದ 22 ವರ್ಷ ವಯಸ್ಸಿನ ಲೋಕೇಶ್ ಕುಮಾರ್ ಎಂದು ಗುರುತಿಸಲಾಗಿದೆ. ಪಶ್ಚಿಮ ಬಂಗಾಳದ ಗೌರಿ ಶಂಕರ್ ಮತ್ತು ಮಹಾರಾಷ್ಟ್ರದ ಸೂರ್ಯಕಾಂತ್ ಅವರನ್ನು ಲೋಕೇಶ್ ಅವರು INSAS ರೈಫಲ್ನಿಂದ ಗುಂಡಿಕ್ಕಿ ಕೊಂದಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ. ಈ ಆಯುಧವು ಸಶಸ್ತ್ರ ಪಡೆಗಳ ಪ್ರಮಾಣಿತ ಪದಾತಿ ಶಸ್ತ್ರವಾಗಿದೆ.
ಘಟನೆ ನಡೆದಾಗ ಮೂವರೂ ಗಸ್ತು ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಇಬ್ಬರು ಸಿಬ್ಬಂದಿಯನ್ನು ಹತ್ಯೆಗೈದ ಆರೋಪದ ಮೇಲೆ ಲೋಕೇಶ್ನನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸ್ ತಂಡದಿಂದ ವೈದ್ಯಕೀಯ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದು, ನಾಳೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಅಧಿಕಾರಿ ತಿಳಿಸಿದ್ದಾರೆ.
ಘಟನೆ ಬಳಿಕ ಆತಂಕಗೊಂಡಿದ್ದ ಲೋಕೇಶ್, ನಗರದಿಂದ ಪರಾರಿಯಾಗಲು ಪ್ರಯತ್ನಿಸುತ್ತಿದ್ದ, ಪೊಲೀಸರು ಬೆಳಗ್ಗೆ 4.30 ರ ಸುಮಾರಿಗೆ ಆತನನ್ನು ಹಿಡಿದಿದ್ದಾರೆ ಎಂದು ಅಧಿಕಾರಿಗಳು ಹೇಳಿದರು
ನಂಗಲ್ ಭೂರ್ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 302 ಐಪಿಸಿ (ಕೊಲೆ) ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ.
-
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ












Click it and Unblock the Notifications