ಅನೈತಿಕ ಸಂಬಂಧ ಹೊಂದಿದ್ದ ಶಂಕೆ, ನಟಿಯನ್ನು ಕೊಂದ ಪತಿ
ಅಮೃತ್ ಸರ್, ಫೆಬ್ರವರಿ 15: ಪಂಜಾಬಿ ನಟಿಯೊಬ್ಬರ ಬರ್ಬರ ಹತ್ಯೆಯಾಗಿದೆ. ಆಕೆಯ ಪತಿಯ ಮೇಲೆ ಕೊಲೆ ಆರೋಪ ಕೇಳಿ ಬಂದಿದೆ. ಅನೈತಿಕ ಸಂಬಂಧ ಹೊಂದಿರಬಹುದು ಎಂಬ ಶಂಕೆಯಿಂದ ಪತ್ನಿಯನ್ನು ಕೊಲ್ಲಲು ಉತ್ತರಾಖಂಡ್ ನ ನೈನಿತಾಲ್ ಜಿಲ್ಲೆಯ ಹಳೆ ಗೆಳೆಯನ ನೆರವನ್ನು ಪಡೆದಿದ್ದ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.
ಮೃತ ಮಹಿಳೆಯನ್ನು 29 ವರ್ಷ ವಯಸ್ಸಿನ ಅನಿತಾ ಸಿಂಗ್ ಎಂದು ಗುರುತಿಸಲಾಗಿದೆ. ಆಕೆಯನ್ನು ಆಕೆಯ ಪತಿ ರವೀಂದ್ರ ಪಾಲ್ ಸಿಂಗ್ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ನೈನಿತಾಲ್ ಹಿರಿಯ ಎಸ್ಪಿ ಎಸ್ಕೆ ಮೀನಾ ಹೇಳಿದ್ದಾರೆ.
ಪಂಜಾಬ್ ನ ಫಿರೋಜೆಪುರ್ ನ ನಿವಾಸಿಯಾಗಿರುವ ರವೀಂದ್ರ ಪಾಲ್ ಅವರು ತಮ್ಮ ಪತ್ನಿ ಅನಿತಾರನ್ನು ಕಾಲಧುಂಗಿಗೆ ಕರೆದುಕೊಂಡು ಬಂದಿದ್ದಾನೆ. ನನ್ನ ಗೆಳೆಯ ಕುಲದೀಪ್ ಗೆ ಬಾಲಿವುಡ್ ನಲ್ಲಿ ಒಳ್ಳೆ ಸಂಪರ್ಕವಿದೆ, ನಿನ್ನ ವೃತ್ತಿ ಬದುಕಿಗೆ ನೆರವಾಗುತ್ತಾನೆ ಎಂದಿದ್ದಾನೆ.

ದೆಹಲಿ ಮೂಲದ ಕುಲದೀಪ್ ಹಾಗೂ ರವೀಂದ್ರ ಪಾಲ್ ಜೊತೆಗೂಡಿ ಅನಿತಾ ರೆಸ್ಟೊರೆಂಟ್ ಗೆ ತೆರಳಿದ್ದಾರೆ. ತಂಪು ಪಾನೀಯದಲ್ಲಿ ನಶೆ ಏರುವ ಪುಡಿ ಹಾಕಿ, ಪ್ರಜ್ಞೆ ತಪ್ಪುವಂತೆ ಮಾಡಲಾಗಿದೆ. ನಂತರ ಅನಿತಾಳ ಕತ್ತು ಸೀಳಲಾಗಿದೆ. ಮೃತದೇಹವನ್ನು ಸುಟ್ಟು ಹಾಕಲಾಗಿದ್ದು, ಯಾವುದೆ ಸಾಕ್ಷ್ಯ ಸಿಗದಂತೆ ಎಚ್ಚರವಹಿಸಿದ್ದಾರೆ.
ಆದರೆ, ರೆಸ್ಟೋರೆಂಟ್ ಗೆ ಹೋಗಿ ಬಂದಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದರ ನೆರವಿನಿಂದ ಪೊಲೀಸರು ಕಾಲಧುಂಗಿ ಅರಣ್ಯ ಪ್ರದೇಶದಲ್ಲಿ ಹುಡುಕಾಟ ನಡೆಸಿದಾಗ ಹೆಣ ಸುಟ್ಟಿರುವ ಕುರುಹುಗಳು ಪತ್ತೆಯಾಗಿದೆ. ಆರೋಪಿಗಳನ್ನು ಬಂಧಿಸಿ, ನ್ಯಾಯಾಲಯದ ಮುಂದೆ ಹಾಜರುಪಡಿಸಿ, ಜೈಲಿಗೆ ಕಳಿಸಲಾಗಿದೆ.
"ಅನಿತಾ ಮೇಲೆ ಸಂಶಯ ಮೂಡಿದ್ದರಿಂದ ರವೀಂದ್ರ ಕೊಲೆ ಸಂಚು ರೂಪಿಸಿದ್ದ, ನಾನು ಅವನಿಗೆ ನೆರವಾದೆ" ಎಂದು ವಿಚಾರಣೆ ವೇಳೆ ಕುಲದೀಪ್ ತಪ್ಪೊಪ್ಪಿಕೊಂಡಿದ್ದಾನೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications