ಪಾಕಿಸ್ತಾನಕ್ಕೆ ಹೋಗೋದಿಲ್ಲ ಎಂದ ರವಿಶಂಕರ್ ಗುರೂಜಿ
ಅಮೃತಸರ್, ನವೆಂಬರ್.08: ಪಾಕಿಸ್ತಾನದ ನರಿಬುದ್ಧಿ ಇಡೀ ವಿಶ್ವಕ್ಕೆ ಗೊತ್ತಿದೆ. ಒಂದು ಕಡೆ ಸ್ನೇಹಹಸ್ತ ಚಾಚುವ ಪಾಕಿಸ್ತಾನ್, ಇನ್ನೊಂದಡೆ ಕಡೆಯಿಂದ ದಾಳಿಗೆ ಸಂಚು ರೂಪಿಸುತ್ತಿರುತ್ತದೆ. ಇದನ್ನು ಅರಿತ ನೆರೆ ರಾಷ್ಟ್ರಗಳು ಪಾಕ್ ಜೊತೆ ವ್ಯವಹರಿಸುವ ಸಂದರ್ಭದಲ್ಲಿ ಎಚ್ಚರಿಕೆ ವಹಿಸಿರುತ್ತವೆ. ಅಂಥದ್ದೆ ಒಂದು ನಡೆಯನ್ನು ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕರಾಗಿರುವ ರವಿಶಂಕರ್ ಗುರೂಜಿ ತೋರಿದ್ದಾರೆ.
ಭಾರತ ಹಾಗೂ ಪಾಕಿಸ್ತಾನದ ನಡುವೆ ಸಂಘರ್ಷಕ್ಕೆ ಕಾರಣವಾಗಿದ್ದ ಸಿಖ್ ರ ಪವಿತ್ರ ಕ್ಷೇತ್ರ ಕರ್ತಾಪುರ್ ಕಾರಿಡಾರ್ ಯೋಜನೆ ನವೆಂಬರ್.09ರಂದು ಉದ್ಘಾಟನೆಗೊಳ್ಳಲಿದೆ. ಈ ಸುಸಂದರ್ಭದಲ್ಲಿ ಉಪಸ್ಥಿತಿ ವಹಿಸುವಂತೆ ಪಾಕಿಸ್ತಾನ ಸ್ವಾಗತ ಕೋರಿತ್ತು. ನೆರೆ ರಾಷ್ಟ್ರದ ಈ ಮನವಿಯನ್ನು ರವಿಶಂಕರ್ ಗುರೂಜಿ, ನಾಜೂಕಾಗಿ ತಿರಸ್ಕರಿಸಿದ್ದಾರೆ.
ಕರ್ತಾರ್ ಪುರ ಕಾರಿಡಾರ್ ಒಪ್ಪಂದಕ್ಕೆ ಭಾರತ-ಪಾಕ್ ಸಹಿ: ಏನೆಲ್ಲಾ ಉಪಯೋಗ?
ಕರ್ತಾಪುರ್ ಕಾರಿಡಾರ್ ಉದ್ಘಾಟನೆ ಕಾರ್ಯಕ್ರಮಕ್ಕೆ ತೆರಳಲು ರವಿಶಂಕರ್ ಗುರೂಜಿ ಹಿಂದೇಟು ಹಾಕಿದ್ದಾರೆ. ತಮ್ಮ ವೈಯಕ್ತಿಕ ಕಾರಣಗಳಿಂದ ಕಾರ್ಯಕ್ರಮಕ್ಕೆ ಆಗಮಿಸಲು ಸಾಧ್ಯವಿಲ್ಲ ಎಂದು ಪಾಕಿಸ್ತಾನಕ್ಕೆ ಸಂದೇಶ ರವಾನಿಸಿದ್ದಾರೆ.
Recommended Video

ಸಿಖ್ ರ ಪವಿತ್ರ ಕ್ಷೇತ್ರವಾಗಿರುವ ಪಂಜಾಬ್ ನ ಗುರುದಾಸ್ ಪುರ್ ಜಿಲ್ಲೆಯ ಡೇರಾ ಬಾಬಾ ನಾನಕ್ ದೇವಸ್ಥಾನದಿಂದ ಪಾಕಿಸ್ತಾನದ ಕರ್ತಾಪುರ್ ನಲ್ಲಿರುವ ಗುರು ನಾನಕ್ ರ ಜನ್ಮಸ್ಥಳ ದರ್ಬಾರ್ ಸಾಹೀಬ್ ಗೆ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಕರ್ತಾಪುರ್ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ. ಈ ಯೋಜನೆಯಿಂದ ವೀಸಾ ಇಲ್ಲದೇ ಭಾರತೀಯ ಯಾತ್ರಿಕರು ಪ್ರಯಾಣ ಬೆಳೆಸಲು ಅವಕಾಶ ಮಾಡಿಕೊಟ್ಟಂತೆ ಆಗುತ್ತದೆ. ಆದರೆ, ಅಗತ್ಯ ಪಾಸ್ ಪೋರ್ಟ್ ದಾಖಲೆಗಳನ್ನು ಯಾತ್ರಿಕರು ಹೊಂದಬೇಕಿದೆ.

ಎರಡು ದೇಶಗಳ ನಡುವೆ ನಿರ್ಮಿಸಿರುವ ಕರ್ತಾಪುರ್ ಯೋಜನೆಗೆ ನವೆಂಬರ್.09ರಂದು ಚಾಲನೆ ಸಿಗಲಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ, ಭಾರತದ ಭಾಗದಲ್ಲಿ ಕರ್ತಾಪುರ್ ಯೋಜನೆಯನ್ನು ನಾಳೆ ಉದ್ಘಾಟನೆ ಮಾಡಲಿದ್ದಾರೆ. ಈ ವೇಳೆ ಕೇಂದ್ರ ಸಚಿವ ಹರ್ ದೀಪ್ ಪುರಿ, ಹರ್ಸಿಮ್ರತ್ ಕೌರ್ ಬಾದಲ್, ಉಪಸ್ಥಿತಿ ವಹಿಸಲಿದ್ದಾರೆ.
-
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಇರಾನ್ ಅಧ್ಯಕ್ಷರ ಜೊತೆ ಪ್ರಧಾನಿ ಮೋದಿ ಮಾತುಕತೆ: ಜಾಗತಿಕ ಪೂರೈಕೆ ವ್ಯತ್ಯಯದ ಬಗ್ಗೆ ಆತಂಕ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ












Click it and Unblock the Notifications