ಸನ್ನಿ ಡಿಯೋಲ್ ಸಂಸದ ಸ್ಥಾನಕ್ಕೆ ಕುತ್ತು, ಆಯೋಗದ ಅಂತಿಮ ವರದಿ ಔಟ್
ಅಮೃತ್ ಸರ್, ಜುಲೈ 07: ಹಿಂದಿ ಚಿತ್ರರಂಗದ ಹಿರಿಯ ನಟ, ಗುರ್ ದಾಸ್ಪುರದ ಬಿಜೆಪಿ ಸಂಸದ ಸನ್ನಿ ಡಿಯೋಲ್ ಅವರಿಗೆ ತಮ್ಮ ಸಂಸತ್ ಸ್ಥಾನ ಕಳೆದುಕೊಳ್ಳುವ ಭೀತಿ ಎದುರಾಗಿದೆ.
ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಚುನಾವಣಾ ಪ್ರಚಾರಕ್ಕೆ ಬಳಸಿದ ಮೊತ್ತ ಮಿತಿ ಮೀರಿದ್ದರಿಂದ ಸನ್ನಿ ಡಿಯೋಲ್ ಗೆ ಚುನಾವಣಾ ಆಯೋಗವು ಕಳೆದ ತಿಂಗಳು ನೋಟಿಸ್ ನೀಡಿತ್ತು. ಈ ಬಗ್ಗೆ ಉತ್ತರಿಸಲು ಸನ್ನಿ ಡಿಯೋಲ್ ಗೆ ಸೂಚಿಸಲಾಗಿತ್ತು. ಈಗ ಈ ಕುರಿತಂತೆ ಅಂತಿಮ ವರದಿಯನ್ನು ಚುನಾವಣಾ ಆಯೋಗ ತಯಾರಿಸಿದೆ.
ಅಭ್ಯರ್ಥಿಗೆ ಚುನಾವಣಾ ಖರ್ಚು ವೆಚ್ಚದ ಮಿತಿ 70 ಲಕ್ಷ ರು ಎಂದು ಆಯೋಗ ನಿಗದಿ ಪಡಿಸಲಾಗಿತ್ತು. ಆದರೆ, ಸನ್ನಿ ಡಿಯೋಲ್ ಅವರು ನಿಗದಿತ ಮೊತ್ತಕ್ಕಿಂತ ಹೆಚ್ಚು ಖರ್ಚು ಮಾಡಿರುವ ಬಗ್ಗೆ ಮಾಹಿತಿ ಸಿಕ್ಕಿದ್ದರಿಂದ ಈ ಬಗ್ಗೆ ಪ್ರಶ್ನಿಸಿ ನೋಟಿಸ್ ಕಳಿಸಲಾಗಿತ್ತು. ಈ ಬಗ್ಗೆ ಅವರಿಂದ ಬಂದಿರುವ ಉತ್ತರವನ್ನು ಸೇರಿಸಿ, ಅಂತಿಮ ವರದಿಯನ್ನು ತಯಾರಿಸಲಾಗಿದ್ದು, ಕೇಂದ್ರ ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗಿದೆ ಎಂದು ಗುರ್ ದಾಸ್ಪುರ್ ಜಿಲ್ಲಾಧಿಕಾರಿ ವಿಪುಲ್ ಉಜ್ವಲ್ ಅವರು ಹೇಳಿದ್ದಾರೆ.

ಸನ್ನಿ ಡಿಯೋಲ್ ಅವರ ಚುನಾವಣಾ ಖರ್ಚು ವೆಚ್ಚ 86 ಲಕ್ಷ ರುಗೂ ಅಧಿಕವಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಫ್ಯಾನ್ ಆಫ್ ಸನ್ನಿ ಡಿಯೋಲ್ ಎಂಬ ಫೇಸ್ ಬುಕ್ ಪುಟದ ಮೂಲಕ ಚುನಾವಣಾ ಪ್ರಚಾರ ನಡೆಸಿದ್ದರ ಬಗ್ಗೆ ಈ ಮುಂಚೆ ಪ್ರಶ್ನಿಸಲಾಗಿತ್ತು.
ಆದರೆ, ತನಿಖೆ ನಂತರ ಸನ್ನಿ ಡಿಯೋಲ್ ಅವರು 78,51,592 ರು ಖರ್ಚು ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಇದು ಆಯೋಗ ನಿಗದಿಪಡಿಸಿರುವ ಮೊತ್ತಕ್ಕಿಂತ 8.51 ಲಕ್ಷ ರು ಅಧಿಕವಾಗಿದೆ ಹೀಗಾಗಿ, ಈ ಬಗ್ಗೆ ಕೇಂದ್ರ ಚುನಾವಣಾ ಆಯೋಗ ಅಂತಿಮ ನಿರ್ಧಾರ ಕೈಗೊಳ್ಳಲಿದೆ.
ಲೋಕಸಭೆ ಚುನಾವಣೆ 2019ರಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿದ್ದ 59 ವರ್ಷ ವಯಸ್ಸಿನ ಸನ್ನಿ ಡಿಯೋಲ್ ಅವರು ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಜಖಾರ್ ಅವರನ್ನು 82,459 ಮತಗಳಿಂದ ಸೋಲಿಸಿ ಮೊದಲ ಪ್ರಯತ್ನದಲ್ಲೇ ಸಂಸದರಾಗಿ ಆಯ್ಕೆಯಾದರು. ಈ ಕ್ಷೇತ್ರದಲ್ಲಿ 1998,1999,2004 ಹಾಗೂ 2014ರಲ್ಲಿ ದಿವಂಗತ ವಿನೋದ್ ಖನ್ನಾ ಅವರು ಆಯ್ಕೆಯಾಗಿದ್ದರು. (ಪಿಟಿಐ)
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications