ಬಾಗಲಕೋಟೆಯ ಮುಚಖಂಡಿ ಕೆರೆಗೆ ವೈಭವದ ಕಾಲ!
ಬಾಗಲಕೋಟೆ, ಅಕ್ಟೋಬರ್ 16 : ಅದು 20 ವರ್ಷಗಳ ಕಾಲ ನಿರ್ಲಕ್ಷಕ್ಕೆ ಒಳಗಾಗಿದ್ದ ಕೆರೆ. ಆ ಕೆರೆಗೆ ನೀರು ಅನ್ನೋದು ಅಪರಿಚಿತವಾಗಿತ್ತು. ಇಪ್ಪತ್ತು ವರ್ಷದಿಂದ ಆ ಕೆರೆ ಹನಿ ನೀರಿಲ್ಲದೆ ತನ್ನಿಂದ ಯಾರಿಗೂ ಉಪಕಾರವಿಲ್ಲದೆ ಬಂಜೆಯಂತಾಗಿತ್ತು. ಆದರೆ, ಈಗ ಆ ಕೆರೆ ತನ್ನ ಮೈ ತುಂಬಾ ನೀರು ತುಂಬಿಕೊಂಡು ಕಂಗೊಳಿಸುತ್ತಿದೆ.
ಅಂದಹಾಗೆ ಇದು ಮುಳುಗಡೆ ನಗರಿ ಬಾಗಲಕೋಟೆಗೆ ಹೊಂದಿಕೊಂಡಿರುವ ಮುಚಖಂಡಿ ಕೆರೆ. ದಿನಾಲೂ ಕೆರೆಯ ಒಡಲಲ್ಲಿ ಚಿಣ್ಣರು, ಯುವಕರು ಮಸ್ತಿ ಮಾಡುತ್ತಿದ್ದಾರೆ. ಇದೆಲ್ಲಕ್ಕಿಂತ ಹೆಚ್ಚಾಗಿ ಕೆರೆ ಪ್ರವಾಸಿ ತಾಣವಾಗಲಿಕ್ಕೆ 10 ಕೋಟಿ ಹಣ ಮಂಜೂರಾಗಿದೆ. ಕೆರೆ ಕೈಲಾಸವಾಸಿ ಶಿವನ ತಾಣವಾಗಲಿದೆ.
ಸುತ್ತಮುತ್ತಲಿನ 10 ಹಳ್ಳಿಗಳ ಅಂತರ್ಜಲಕ್ಕೆ ಆಧಾರವಾಗಿದೆ ಮುಚಖಂಡಿ ಕೆರೆ. ಈ ಕೆರೆಯನ್ನು ಪ್ರವಾಸಿ ತಾಣವಾಗಿ ಮಾಡಲು ನೀಲ ನಕ್ಷೆ ಸಿದ್ಧವಾಗಿದೆ. ಕೆರೆ ಪಕ್ಕದಲ್ಲಿರುವ ಬೆಟ್ಟದ ಮೇಲೆ ಬೃಹತ್ ಶಿವನಮೂರ್ತಿ, ಪಕ್ಕದಲ್ಲಿ ಉದ್ಯಾನವನ, ಕೆರೆಯಲ್ಲಿ ಬೋಟಿಂಗ್ ವ್ಯವಸ್ಥೆ ಸೇರಿದಂತೆ ವಿವಿಧ ಸೌಲಭ್ಯ ಕಲ್ಪಿಸಲಾಗುತ್ತದೆ.
ಕೆರೆ ಪ್ರವಾಸಿ ತಾಣವಾದರೆ ಪಕ್ಕದಲ್ಲೇ ಇರುವ ವೀರಭದ್ರೇಶ್ವರ ದೇವಸ್ಥಾನಕ್ಕೂ ಹೆಚ್ಚಿನ ಜನರು ಬರಲಿದ್ದಾರೆ. ಈ ಕೆರೆಗೆ 12.50 ಕೋಟಿ ವೆಚ್ಚದಲ್ಲಿ ನೀರು ಹರಿಸಲಾಗಿದೆ. ಬಾಗಲಕೋಟೆ ಶಾಸಕ ಎಚ್.ವೈ.ಮೇಟಿ ಅವರ ಪ್ರಯತ್ನದ ಫಲವಾಗಿ ಇಂದು ಕೆರೆಗೆ ನೀರು ಹರಿದುಬಂದಿದೆ...

1982ರಲ್ಲಿ ನಿರ್ಮಾಣಗೊಂಡ ಕೆರೆ
ಮುಚಖಂಡಿ ಕೆರೆ 1882ರಲ್ಲಿ ಬ್ರಿಟಿಷರು ನಿರ್ಮಾಣ ಮಾಡಿದ ಕೆರೆ ಇದು. ಬಾಗಲಕೋಟೆ ಸೇರಿದಂತೆ ಸುತ್ತ ಹತ್ತಾರು ಹಳ್ಳಿಗಳಿಗೆ ಕುಡಿಯುವ ನೀರು, ಕೃಷಿ ಮತ್ತು ಜಾನುವಾರುಗಳಿಗೆ ನೀರನ್ನು ಒದಗಿಸುವ ಕೆರೆ ಇದಾಗಿತ್ತು. ಒಟ್ಟು 720 ಎಕರೆ ವಿಸ್ತೀರ್ಣದ ಕೆರೆ ಎರಡು ದಶಕಗಳ ಕಾಲ ನೀರಿಲ್ಲದೆ ಬರಡಾಗಿತ್ತು.

12 ಕೋಟಿ ವೆಚ್ಚದಲ್ಲಿ ಕೆರೆ ತುಂಬಿಸಲಾಗುತ್ತಿದೆ
ಬರಿದಾದ ಕೆರೆಯನ್ನು ಸಾಕಷ್ಟು ಪ್ರಮಾಣದಲ್ಲಿ ಒತ್ತುವರಿ ಕೂಡ ಮಾಡಲಾಗಿತ್ತು. ಆದರೆ, ಸದ್ಯ 12 ಕೋಟಿ ವೆಚ್ಚದಲ್ಲಿ ಕೆರೆಗೆ ನೀರು ಹರಿಸುವ ಕಾರ್ಯ ಪ್ರಗತಿಯಲ್ಲಿದೆ. ಆಲಮಟ್ಟಿ ಹಿನ್ನೀರಿನಿಂದ ಪೈಪ್ ಲೈನ್ ಮೂಲಕ ಕೆರೆಗೆ ನೀರನ್ನು ಹರಿಸಲಾಗುತ್ತಿದೆ. ಜೊತೆಗೆ ಇತ್ತೀಚೆಗೆ ಸುರಿದ ಧಾರಾಕಾರ ಮಳೆಯಿಂದ ಕೆರೆ ಮೈತುಬಿಕೊಂಡಿದೆ.

ಪ್ರವಾಸಿಗರನ್ನು ಸೆಳೆಯುತ್ತಿದೆ ಕೆರೆ
ಪೈಪ್ ಲೈನ್ ಮೂಲಕ ಬರುವ ನೀರು ಜಲಪಾತ ಸೃಷ್ಟಿಸಿದೆ. ಇದರಿಂದ ಈ ಜಲಧಾರೆಯಲ್ಲಿ ಮೈ ತಣಿಸಲು ದಿನಾಲು ಚಿಣ್ಣರು, ಯುವಕರು ಕೆರೆಗೆ ಭೇಟಿ ನೀಡುತ್ತಿದ್ದಾರೆ. ರಜೆ ದಿನಗಳನ್ನು ಇಲ್ಲಿ ಕಳೆಯುತ್ತಿದ್ದು, ಈಗಾಗಲೇ ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿದೆ. ಸರ್ಕಾರದಿಂದ 10 ಕೋಟಿ ಹಣ ಮಂಜೂರಾಗಿದ್ದಕ್ಕೆ ಬಾಗಲಕೋಟೆ ಜನರು ಹರ್ಷ ವ್ಯಕ್ತಪಡಿಸಿದ್ದಾರೆ.

ಸುಂದರ ಪ್ರವಾಸಿ ತಾಣವಾಗಲಿದೆ
ಒಟ್ಟಾರೆ ಎರಡು ದಶಕಗಳ ಕಾಲ ನೀರು ಕಾಣದ ಕೆರೆ ಇಂದು ತುಂಬಿ ತುಳುಕುವಂತಾಗಿದೆ. ಜೊತೆಗೆ 10 ಕೋಟಿ ವೆಚ್ಚದಲ್ಲಿ ಪ್ರವಾಸಿ ತಾಣವಾಗಲು ಸಿದ್ಧವಾಗುತ್ತಿದೆ. ಇಷ್ಟು ದಿನ ಯಾರೂ ತಿರುಗಿ ನೋಡದ ಕೆರೆ ಈಗ ಎಲ್ಲರನ್ನು ತನ್ನತ್ತ ಸೆಳೆಯುತ್ತಿದೆ.
-
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ












Click it and Unblock the Notifications