ಮುಧೋಳ: 10 ವರ್ಷದ ಮಗುವಿಗೆ ಪೂರ್ತಿ ಟಿಕೆಟ್ ಹಣ ಪಡೆದ KSRTC ಕಂಡಕ್ಟರ್-ಮುಂದಾಗಿದ್ದೇನು?
ಮುಧೋಳ, ಜನವರಿ, 11: ಸಾಮಾನ್ಯವಾಗಿ ಕೆಎಸ್ಅರ್ಟಿಸಿ ಬಸ್ ಸೇರಿದಂತೆ ಇನ್ನಿತರೆ ಬಸ್ಗಳಲ್ಲೂ ಸಹ 12 ವರ್ಷ ಮೆಲ್ಪಟ್ಟ ಮಕ್ಕಳಿಗೆ ಅಷ್ಟೇ ಫುಲ್ ಟಿಕೆಟ್ ಹಣ ಪಡೆಯಬಹುದು. ಆದರೆ ಇದೀಗ 12 ವರ್ಷದೊಳಗಿನ ಬಾಲಕನಿಗೆ ಪೂರ್ಣ ಟಿಕೆಟ್ ಪಡೆದ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದ್ದು, ಕೆಎಸ್ಆರ್ಟಿಸಿ ಕಂಡಕ್ಟರ್ಗೆ ಹೆಚ್ಚುವರಿಯಾಗಿ ಶೇಕಡಾ 9ರಷ್ಟು ಬಡ್ಡಿಯೊಂದಿಗೆ ಎರಡು ತಿಂಗಳಲ್ಲಿ ಪಾವತಿ ಮಾಡುವಂತೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ.
ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಅನಂತಪುರ ಗ್ರಾಮದ ನಿವಾಸಿ ದೀಪಾ ಹಿರೇಮಠ ಅವರು ಪುತ್ರನೊಂದಿಗೆ ಕಳೆದ ವರ್ಷ ಜುಲೈ 1ರಂದು ಮುಧೋಳದಿಂದ ವಿಜಯಪುರಕ್ಕೆ ಹೊರಟಿದ್ದರು. ಪುತ್ರನಿಗೆ 10 ವರ್ಷ 11 ತಿಂಗಳು ಆಗಿದ್ದು, ಅರ್ಧ ಟಿಕೆಟ್ ನೀಡಿ ಎಂದು ದೀಪಾ ಎನ್ನುವವರು ಕಂಡಕ್ಟರ್ಗೆ ಕೇಳಿದರು. ಆದರೆ 12 ವರ್ಷ ಮೇಲ್ಪಟ್ಟಿದ್ದಾನೆ, ಪೂರ್ಣ ಟಿಕೆಟ್ ಪಡೆಯಬೇಕು ಎಂದು ಕಂಡಕ್ಟರ್ ಕೇಳಿದ್ದರು.

ಈ ವೇಳೆ ಜನ್ಮ ದಾಖಲೆಯ ಆಧಾರ್ ಕಾರ್ಡ್ ತೋರಿಸಿದರೂ ಒಪ್ಪದ ಅವರು, ಬಸ್ನಿಂದ ಕೆಳಗೆ ಇಳಿಯಿರಿ ಎಂದರು. ಆಗ ಅವರು ಯಾವುದೇ ದಾರಿಯಿಲ್ಲದೆ ಪೂರ್ಣ ಟಿಕೆಟ್ ಪಡೆದೇ ಪ್ರಯಾಣ ಮಾಡಿದರು. ಬಳಿಕ ಈ ವಿಚಾರವನ್ನು ಡಿಪೋ ವ್ಯವಸ್ಥಾಪಕರ ಗಮನಕ್ಕೆ ತಂದು, ಕಂಡಕ್ಟರ್ ವಿರುದ್ಧ ಕ್ರಮ ಕೈಗೊಂಡು, ಟಿಕೆಟ್ ಹಣ ವಾಪಸ್ ಕೊಡಬೇಕೆಂದು ಕೋರಿದರು. ಅಧಿಕಾರಿಗಳು ಕ್ರಮ ಕೈಗೊಳ್ಳಲಿಲ್ಲ. ವಕೀಲರಿಂದ ನೋಟಿಸ್ ಕಳುಹಿಸಿದರೂ ಸ್ಪಂದಿಸದ ಹಿನ್ನೆಲೆ ಆಯೋಗಕ್ಕೆ ದೂರು ಸಲ್ಲಿಸಿದರು.
ಕೆಎಸ್ಆರ್ಟಿಸಿ ನಿಯಾಮಾವಳಿ ಉಲ್ಲಂಘಿಸಿ ಪೂರ್ಣ ಟಿಕೆಟ್ ಕೊಟ್ಟು ಸೇವಾ ನ್ಯೂನ್ಯತೆ ಮತ್ತು ಅನುಚಿತ ವ್ಯಾಪಾರ ಮಾಡಿದ್ದು ಸಾಬೀತಾಗಿದೆ. ದೂರುದಾರರಿಂದ ಹೆಚ್ಚುವರಿಯಾಗಿ ಪಡೆದ 50 ರೂಪಾಯಿ ಅನ್ನು ಬಡ್ಡಿ ಸಮೇತ ನೀಡಬೇಕು. ಜೊತೆಗೆ ಮಾನಸಿಕ ಹಿಂಸೆ ಅನುಭವಿಸಿರುವುದರಿಂದ ವಿಶೇಷ ಪರಿಹಾರವಾಗಿ 2 ಸಾವಿರ ರೂಪಾಯಿ, ಪ್ರಕರಣದ ವೆಚ್ಚಕ್ಕಾಗಿ 1 ಸಾವಿರ ರೂಪಾಯಿ ನೀಡಬೇಕು ಎಂದು ಆಯೋಗದ ಅಧ್ಯಕ್ಷ ಡಿ.ವೈ.ಬಸಾಪುರ, ಸದಸ್ಯರಾದ ಸಿ.ಎಚ್.ಸಮಿಉನ್ನಿಸಾ ಅಬ್ರಾರ್, ಕಮಲಕಿಶೋರ್ ಅವರನ್ನೊಳಗೊಂಡ ಪೀಠ ಆದೇಶಿಸಿದೆ ಎಂದು ಪ್ರಜಾವಾಣಿಯಲ್ಲಿ ವರದಿಯಾಗಿದೆ.
-
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ












Click it and Unblock the Notifications