ಬಾಗಲಕೋಟೆ ಜಿಲ್ಲಾ ವೈದ್ಯಾಧಿಕಾರಿ ಖುರ್ಚಿಗಾಗಿ ಮತ್ತೆ ಕಾಳಗ, ಅಳಿಯನಿಗೆ ಗಿಫ್ಟ್ ಕೊಟ್ರಾ ಕೈ ಶಾಸಕ ಮೇಟಿ?
ಬಾಗಲಕೋಟೆ, ಆಗಸ್ಟ್, 22: ಜಿಲ್ಲಾ ವೈದ್ಯಾಧಿಕಾರಿ ಖುರ್ಚಿಗಾಗಿ ಕಿತ್ತಾಟ, ದೊಡ್ಡ ಹೈಡ್ರಾಮಮೇ ನಡೆದಿದೆ. ಈ ಪ್ರಹಸನದಲ್ಲಿ ಎಚ್.ವೈ.ಮೇಟಿ ತಮ್ಮ ಅಳಿಯನ ಮೇಲೆ ಪ್ರೀತಿ ತೋರಿದರಾ ಎಂಬ ಅನುಮಾನ ವ್ಯಕ್ತವಾಗಿದೆ. ಬಾಗಲಕೋಟೆ ಜಿಲ್ಲಾ ಆರೋಗ್ಯ ಅಧಿಕಾರಿ ಕಚೇರಿಯಲ್ಲಿಯೇ ಈ ಹೈಡ್ರಾಮಾ ನಡೆದಿದ್ದು, ಬಾಗಲಕೋಟೆ ಕಾಂಗ್ರೆಸ್ ಶಾಸಕ ಎಚ್.ವೈ ಮೇಟಿ ಅಳಿಯ ಡಾ. ರಾಜಕುಮಾರ ಯರಗಲ್ ಹಾಗೂ ಡಾ.ಜಯಶ್ರಿ ಎಮ್ಮಿ ಮಧ್ಯೆ ನೇರಾನೇರ ಕಿತ್ತಾಟ ನಡೆದಿದೆ. ಡಾ. ರಾಜಕುಮಾರ ಯರಗಲ್ ಅವರು ಬಾಗಲಕೋಟೆ ಡಿಎಚ್ಒ ನೇಮಕ ಆದೇಶ ಹಿಡಿದು ಬಾಗಲಕೋಟೆ ಕಚೇರಿಗೆ ಬಂದಿದ್ದಾರೆ.
ಆದರೆ ಅದಕ್ಕೆ, ಈಗಾಗಲೇ ಇಲ್ಲಿ ಸೇವೆ ಸಲ್ಲಿಸುತ್ತಿರುವ ಡಾ.ಜಯಶ್ರಿ ಎಮ್ಮಿ ಕೆಎಟಿ ಯಿಂದ ತಡೆಯಾಜ್ಞೆ ತಂದಿದ್ದಾರೆ. ಈ ಹಿನ್ನೆಲೆಯಲ್ಲಿ ಇಬ್ಬರೂ ಕಚೇರಿಯಲ್ಲಿ ವಾಗ್ವಾದ ನಡೆಸಿದ್ದಾರೆ. ಹಾಜರಾತಿ ಹಾಕಲು ಮುಂದಾದ ಜಯಶ್ರೀ ಎಮ್ಮಿ ಅವರಿಗೆ ಅವಕಾಶ ನೀಡಿಲ್ಲ. ರಾಜಕುಮಾರ ಯರಗಲ್ ಹಾಜರಾತಿ ಪುಸ್ತಕವನ್ನು ಕಸಿದುಕೊಂಡಿದ್ದಾರೆ.

ಇದಕ್ಕೆ ಕಂಡು ಡಿಎಚ್ಒ ಕಚೇರಿಯಲ್ಲಿ ಜಯಶ್ರಿ ಎಮ್ಮಿ ಕಣ್ಣೀರು ಹಾಕಿದ್ದಾರೆ. ನಾನು ಸರ್ಕಾರದ ಆದೇಶದ ಪ್ರಕಾರ ಅಧಿಕಾರ ವಹಿಸಿಕೊಂಡಿದ್ದೇನೆ ಎಂದು ರಾಜಕುಮಾರ ಯರಗಲ್ ವಾದ ಮುಂದಿಟ್ಟಿದ್ದಾರೆ. ನಾನು ಕೆಎಟಿಯಿಂದ ತಡೆಯಾಜ್ಞೆ ತಂದಿದ್ದೇನೆ ಎಂದು ಜಯಶ್ರೀ ಎಮ್ಮಿ ಪ್ರತಿ ವಾದ ಮಾಡಿದ್ದಾರೆ.
ಜಯಶ್ರಿ ಎಮ್ಮಿ ಇದುವರೆಗೂ ಬಾಗಲಕೋಟೆ ಡಿಹೆಚ್ಒ ಆಗಿದ್ದವರು. ರಾಜಕುಮಾರ ಯರಗಲ್ ವಿಜಯಪುರ ಡಿಹೆಚ್ಒ ಹುದ್ದೆಯಿಂದ ಬಾಗಲಕೋಟೆ ವರ್ಗಾವಣೆ ಮಾಡಿಸಿಕೊಂಡು ಬಂದಿದ್ದಾರೆ. ಆದರೆ ವಿಜಯಪುರ ಡಿಹೆಚ್ಒ ಹುದ್ದೆಯಿಂದ ರಿಲೀವ್ ಲೆಟರ್ ಪಡೆಯದೆ, ಬಾಗಲಕೋಟೆ ಜಿಲ್ಲಾ ಪಂಚಾಯತಿ ಸಿಇಒ ಅವರಿಂದ ಮೊಮೆಂಟ್ ಆರ್ಡರ್ ಪಡೆಯದೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ.
ನೀವು (ರಾಜಕುಮಾರ ಯರಗಲ್) ರಿಲೀವ್ ಲೆಟರ್ ಕೊಡದೆ ನಿಯಮಾನುಸಾರ ಅಧಿಕಾರವಹಿಸಿಕೊಂಡಿಲ್ಲ ಎಂದು ಜಯಶ್ರೀ ಎಮ್ಮಿ ವಾದಕ್ಕೆ ಇಳಿದಿದ್ದಾರೆ. ಮತ್ತೊಂದೆಡೆ ನಾನು ಸರ್ಕಾರಕ್ಕೆ ಎಲ್ಲ ರಿಲೀವ್ ಲೆಟರ್ ಕಳಿಸಿದ್ದೇನೆ. ಪ್ರಿನ್ಸಿಪಾಲ್ ಸೆಕ್ರೆಟರಿಗೆ ಎಲ್ಲ ಕಳಿಸಿದ್ದೇನೆ ಎಂದು ಯರಗಲ್ ವಾದ ಮಾಡುತ್ತಿದ್ದಾರೆ. ಅಲ್ಲದೆ ಸರ್ಕಾರದಿಂದ ಆದೇಶ ಪಡೆದುಕೊಂಡು ಬನ್ನಿ ಎಂದು ಯರಗಲ್ ಜಯಶ್ರೀಗೆ ತಿರುಗೇಟು ನಿಡಿದ್ದಾರೆ.
ಈ ಮಧ್ಯೆ, ಸದ್ಯದ ಬೆಳವಣಿಗೆ ಮತ್ತು ಈ ಹಿಂದಿನ ವಿದ್ಯಮಾನಗಳನ್ನು ಗಮನಿಸಿದ ಹೆಚ್.ವೈ. ಮೇಟಿ ಮತ್ತೊಮ್ಮೆ ಅಳಿಯನ ಮೇಲೆ ಪ್ರೀತಿ ತೋರಿದರಾ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. ಆರು ವರ್ಷದ ಹಿಂದೆ ಮೇಟಿ ಶಾಸಕರಾಗಿದ್ದಾಗ ಯರಗಲ್ ಇದೇ ಬಾಗಲಕೋಟೆ ಡಿಹೆಚ್ಓ ಆಗಿ ಕಾರ್ಯನಿರ್ವಹಿಸಿದ್ದರು. ಆಗಲೂ ತಮ್ಮ ವರ್ಗಾವಣೆಯಾದಾಗ ತಡೆಯಾಜ್ಞಾ ತಂದಿದ್ದರು.
ಆಗ ಡಿಹೆಚ್ಒ ಆಗಿ ಬಂದಿದ್ದ ಜಗದೀಶ್ ನುಚ್ಚಿನ ವಿರುದ್ದ ಕೆಎಟಿಯಿಂದ ತಡೆಯಾಜ್ಞೆ ತಂದಿದ್ದರು ಇದೇ ಡಾ. ಯರಗಲ್. ಆ ವೇಳೆ ಜಗದೀಶ್ ನುಚ್ಚಿನಗೆ ಖುರ್ಚಿ ಬಿಡದೆ ಸತಾಯಿಸಿದ್ದರು. ಆಗಲೂ ಯರಗಲ್ ಹಾಗೂ ಜಗದೀಶ್ ನುಚ್ಚಿನ ಮಧ್ಯೆ ಖುರ್ಚಿ ಕಿತ್ತಾಟ ನಡೆದಿತ್ತು. ಅದಕ್ಕೂ ಹಿಂದೆ ಡಾ. ಯರಗಲ್ ಬಾಗಲಕೋಟೆ ಡಿಹೆಚ್ಒ ಆದಾಗ ಸಿಬ್ಬಂದಿ ನೇಮಕಾತಿ ಆಕ್ರಮದಲ್ಲಿ ನಡೆದಿತ್ತು. ಹಣದ ಡೀಲಿಂಗ್ನಲ್ಲಿ ರಾಜಕುಮಾರ ಯರಗಲ್ ಅತ್ಯಾಪ್ತರ ಮೂಲಕ ಸಿಬ್ಬಂದಿ ನೇಮಕಾತಿಗಾಗಿ ಹಣ ಪಡೆಯುವ ಬಣ್ಣ ಬಯಲಾಗಿತ್ತು.
ನಂತರ ರಾಜಕುಮಾರ ಯರಗಲ್ ಬಾಗಲಕೋಟೆಯಿಂದ ವರ್ಗಾವಣೆಯಾಗಿದ್ದರು. ಅಲ್ಲದೆ ಬಳಿಕ ಕೊಪ್ಪಳ, ವಿಜಯಪುರದಲ್ಲಿ ಡಿಹೆಚ್ಒ ಆಗಿ ಕೆಲಸ ಮಾಡಿದ್ದಾರೆ. ಇದೀಗ ಮಾವ ಮೇಟಿ ಶಾಸಕರಾಗುತ್ತಿದ್ದಂತೆ ಮತ್ತೆ ಬಾಗಲಕೋಟೆ ಡಿಹೆಚ್ಒ ಆಗಿ ಬಂದಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ












Click it and Unblock the Notifications