ಜಮಖಂಡಿಯಲ್ಲಿ ಗೆಲುವು ನನ್ನದೇ: ಸಿದ್ದು ನ್ಯಾಮಗೌಡ ಪುತ್ರ ವಿಶ್ವಾಸ
ಬೆಂಗಳೂರು, ಅಕ್ಟೋಬರ್ 9: ಜಮಖಂಡಿ ವಿಧಾನಸಭಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ತಮ್ಮ ತಂದೆ ಸಿದ್ದು ನ್ಯಾಮಗೌಡರ ಅಭಿವೃದ್ಧಿ ಕಾರ್ಯಗಳ ಶ್ರೀರಕ್ಷೆಯಿಂದಾಗಿ ಗೆಲ್ಲುತ್ತೇನೆ ಎಂದು ಶಾಸಕ ದಿವಂಗತ ಸಿದ್ದು ನ್ಯಾಮಗೌಡ ಅವರ ಪುತ್ರ ಆನಂದ್ ನ್ಯಾಮಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಕಾಂಗ್ರೆಸ್ ರಾಜ್ಯ ಉಸ್ತುವಾರ ಕೆಸಿ ವೇಣುಗೋಪಾಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜಮಖಂಡಿ ಕಾಂಗ್ರೆಸ್ ಅಭ್ಯರ್ಥಿ ಎಂದು ಘೋಷಣೆಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ಟೋಬರ್ 6ರಂದು ಜಮಖಂಡಿಯಲ್ಲಿ ತಾವು ನಾಮಪತ್ರ ಸಲ್ಲಿಸಲಿದ್ದು, ಮಾಜಿ ಮುಖ್ಯಮಂತ್ರಿ ಎಕುಮಾರಸ್ವಾಮಿ ಸೇರಿದಂತೆ ಎಲ್ಲಾ ಗಳು ಕಾಂಗ್ರೆಸ್ ಮುಖಂಡರು ಪಾಲ್ಗೊಳ್ಳಲಿದ್ದಾರೆ.
ನಮ್ಮ ತಂದೆ ದಿವಂಗತ ಸಿದ್ದು ನ್ಯಾಮಗೌಡರು ಕಳೆದ ನಾಲ್ಕು ದಶಕಗಳಿಂದ ಜಮಖಂಡಿ ಕ್ಷೇತ್ರ ಹಾಗೂ ಬಾಗಲಕೋಟೆ ಜಿಲ್ಲೆಯಲ್ಲಿ ಕೈಗೊಂಡ ಅಭಿವೃದ್ಧಿ ಕಾಮಗಾರಿಗಳು ಹಾಗೂ ಜನಪರ ಕೆಲಸ ತಮ್ಮ ನೆರವಿಗೆ ಬರಲಿದೆ ಎಂದು ಭಾವಿಸಿದ್ದೇನೆ.

ಜಮಖಂಡಿ ಕ್ಷೇತ್ರದ ಜನತೆ ತಮ್ಮ ಮೇಲೆ ವಿಶ್ವಾಸ ಇಟ್ಟಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ನನ್ನ ವಿರುದ್ಧ ಯಾರೇ ಅಭ್ಯರ್ಥಿಯಾದರೂ ಗೆಲುವು ನನ್ನದೇ, ಕ್ಷೇತ್ರದ ಜನತೆ ನನ್ನ ಕುಟುಂಬದ ಜತೆಗಿದ್ದಾರೆ ಎಂದು ವಿಶ್ವಾಸದಿಂದ ನುಡಿದರು.ಸಿದ್ದು ನ್ಯಾಮಗೌಡ ಅವರು ಕಾರು ಅಪಘಾತದಲ್ಲಿ ನಿಧನಹೊಂದಿದ್ದರು.












Click it and Unblock the Notifications