ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೃತ ರೈತನ ಕುಟುಂಬಕ್ಕೆ ತನ್ನ ಸ್ವಂತ ಹಣ ಕೊಟ್ಟ ಸಿದ್ದರಾಮಯ್ಯ

By ಬಾಗಲಕೋಟೆ ಪ್ರತಿನಿಧಿ
|
Google Oneindia Kannada News

ಬಾಗಲಕೋಟೆ, ಜೂನ್.11: ಬಾದಾಮಿ ತಾಲೂಕಿನ ಲಖಮಾಪೂರ ಗ್ರಾಮದಲ್ಲಿ ಹೊಲದಲ್ಲಿ ಕೆಲಸ‌ ಮಾಡುವಾಗ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ದಿಂದ ಮೃತಪಟ್ಟಿದ್ದ ರೈತನ ಕುಟುಂಬಕ್ಕೆ ಬಾದಾಮಿ ಶಾಸಕ ಸಿದ್ದರಾಮಯ್ಯ ಸಾಂತ್ವನ ಹೇಳಿದರು.

ರೈತ ಸಿದ್ದಪ್ಪ ಫಕ್ಕಿರಪ್ಪ ಆಲದಕಟ್ಟಿ ಕಬ್ಬಿನಹೊಲಕ್ಕೆ ನೀರು ಹಾಯಿಸಲು ಹೋಗಿ ಆಚಾತುರ್ಯವಾಗಿ ವಿದ್ಯುತ್ ಅವಘಡ ಸ್ಪರ್ಶದಿಂದ ಸಾವನ್ನಪ್ಪಿದ್ದರು. ರೈತನ ಮನೆಗೆ ಸೋಮವಾರ ಭೇಟಿ ನೀಡಿದ ಮಾಜಿ ಸಿಎಂ, ಶಾಸಕ ಸಿದ್ದರಾಮಯ್ಯ ತಮ್ಮ ಸ್ವಂತ ಹಣ 50 ಸಾವಿರ ರೂಪಾಯಿಗಳನ್ನು ನೀಡಿದರು.

ದುಬಾರಿ ಕಾರ್ ಬಳಿಕ ಹೈಟೆಕ್ ರೂಂ ಗಿಟ್ಟಿಸಿದ ಸಿದ್ದರಾಮಯ್ಯ ದುಬಾರಿ ಕಾರ್ ಬಳಿಕ ಹೈಟೆಕ್ ರೂಂ ಗಿಟ್ಟಿಸಿದ ಸಿದ್ದರಾಮಯ್ಯ

ಸರ್ಕಾರದಿಂದ 5 ಲಕ್ಷ ರೂ.ಗಳನ್ನು ನೀಡುವುದಾಗಿಯೂ ಭರವಸೆ ನೀಡಿದರು. ಮೃತನ ಪತ್ನಿಗೆ ಸರ್ಕಾರದಿಂದ ಪಿಂಚಣಿ ವ್ಯವಸ್ಥೆ ಕಲ್ಪಿಸಲಾಗುವುದಾಗಿ ಭರವಸೆ ನೀಡಿದರು.

Badami MLA Siddaramaiah paid compensation to the deceased farmer family

ಮೃತ ರೈತನ ಮಕ್ಕಳಿಗೆ ಸರ್ಕಾರದಿಂದ ಉಚಿತ ಶಿಕ್ಷಣ ವ್ಯವಸ್ಥೆ ಕಲ್ಪಿಸಲು ಸಂಬಂಧ ಪಟ್ಟ ಅಧಿಕಾರಿಗಳಿಗೆ ಸ್ಥಳದಲ್ಲೇ ಸೂಚಿಸಿದರು.

ಬಾದಾಮಿಯಿಂದ ಶಾಸಕರಾಗಿ ಆಯ್ಕೆಯಾಗಿರುವ ಸಿದ್ದರಾಮಯ್ಯ ಕಳೆದ ಗುರುವಾರದಿಂದ ಬಾದಾಮಿ ಪ್ರವಾಸ ಕೈಗೊಂಡಿದ್ದಾರೆ. ಕ್ಷೇತ್ರದ ಜನತೆಯ ಕಷ್ಟಗಳಿಗೆ ಸ್ಪಂದಿಸುತ್ತಿದ್ದಾರೆ.

2018ರ ವಿಧಾನಸಭಾ ಚುನಾವಣೆಯಲ್ಲಿ ಮೈಸೂರಿನ ಚಾಮುಂಡೇಶ್ವರಿ ಹಾಗೂ ಬಾಗಲಕೋಟೆಯ ಬಾದಾಮಿಯಿಂದ ಸಿದ್ದರಾಮಯ್ಯ ಸ್ಪರ್ಧಿಸಿದ್ದರು. ಚಾಮುಂಡೇಶ್ವರಿಯಲ್ಲಿ ಜೆಡಿಎಸ್ ನ ಜಿ.ಟಿ. ದೇವೇಗೌಡ ಮುಂದೆ ಪರಾಭವಗೊಂಡರೆ, ಬಾದಾಮಿಯಲ್ಲಿ ಬಿಜೆಪಿಯ ಶ್ರೀರಾಮುಲುರನ್ನು ಸೋಲಿಸಿದ್ದರು.

English summary
Badami MLA Siddaramaiah paid compensation to the deceased farmer family. Farmer died while working in a farm in Lakhamapura village in Badami taluk.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X