Karnataka Elections: ಸಿದ್ದರಾಮಯ್ಯ ಗೆದ್ದಿದ್ದ ಬಾದಾಮಿಯಲ್ಲಿ ಈ ಬಾರಿ ತ್ರಿಕೋನ ಸ್ಪರ್ಧೆ- ಇನ್ಸೈಡ್ ಸ್ಟೋರಿ
ಬಾದಾಮಿ, ಏಪ್ರಿಲ್ 28: ವಿಶ್ವವಿಖ್ಯಾತ ಬಾದಾಮಿ ಕ್ಷೇತ್ರವು ಕಳೆದ ಬಾರಿಯ ಕರ್ನಾಟಕ ವಿಧಾನಸಭೆ ಚುಣಾವಣೆಯಲ್ಲಿ ರಾಜ್ಯ ಅತ್ಯಂತ ಪ್ರತಿಷ್ಠಿತ ಕಣವಾಗಿ ಮಾರ್ಪಟ್ಟಿತ್ತು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ನಿಂದ ಕಣಕ್ಕಿಳಿದಿದ್ದರು. ಬಿಜೆಪಿ ನಾಯಕ, ಸಚಿವ ಶ್ರೀರಾಮುಲು ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸಿದ್ದರು. ಇದೇ ಕ್ಷೇತ್ರದಲ್ಲಿ ಈ ಬಾರಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿರುವುದು ಕಂಡುಬಂದಿದೆ.
ಚಾಲುಕ್ಯರ ನಾಡಾದ ಬಾದಾಮಿಯಲ್ಲಿಯು ಬಾಗಲಕೋಟೆ ಜಿಲ್ಲೆಯ ತಾಲ್ಲೂಕು ಕೇಂದ್ರವಾಗಿದೆ. ಇದು ಕ್ಷೇತ್ರವು ಬಾಗಲಕೋಟೆ ಲೋಕಸಭಾ ಕ್ಷೇತ್ರದ ಭಾಗವಾಗಿದೆ. ಕ್ಷೇತ್ರದಲ್ಲಿ ಸಾಮಾನ್ಯ ಮತದಾರರು, ಅನಿವಾಸಿ ಭಾರತೀಯರು ಮತ್ತು ಸೇವಾ ಮತದಾರರು ಸೇರಿ ಒಟ್ಟು 2,14,834 ಮತದಾರರಿದ್ದಾರೆ. ಸಾಮಾನ್ಯ ಮತದಾರರಲ್ಲಿ 1,08,524 ಪುರುಷರು, 1,06,294 ಮಹಿಳೆಯರು ಮತ್ತು 16 ಇತರರು ಇದ್ದಾರೆ. ಕ್ಷೇತ್ರದಲ್ಲಿ ಮತದಾರರ ಲಿಂಗ ಅನುಪಾತ 97.95 ರಷ್ಟಿದ್ದು, ಅಂದಾಜು ಸಾಕ್ಷರತೆ ಪ್ರಮಾಣ ಶೇ 69 ರಷ್ಟಿದೆ.

2018 ರಲ್ಲಿ ಸಿದ್ದರಾಮಯ್ಯ ಗೆಲುವು
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಈ ಕ್ಷೇತ್ರದಿಂದ ಗೆಲುವು ಸಾಧಿಸಿದ್ದರು. 67,599 ಮತಗಳನ್ನು ತೆಗೆದುಕೊಂಡಿದ್ದರೆ. ಇವರ ವಿರುದ್ಧ ಕಣಕ್ಕಿಳಿದಿದ್ದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಶ್ರೀರಾಮುಲು 65,903 ಮತಗಳನ್ನು ತಮ್ಮದಾಗಿಸಿಕೊಂಡಿದ್ದರು. ಜೆಡಿಎಸ್ನಿಂದ ಸ್ಪರ್ಧಿಸಿದ್ದ ಹಣಮಂತ ಮಾವಿನಮರದ್ ಕೇವಲ 24484 ಮತಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದರು.
2013 ರ ಕರ್ನಾಟಕ ಅಸೆಂಬ್ಲಿ ಚುನಾವಣೆಯಲ್ಲಿ 15,113 ಮತಗಳ (10.87%) ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಬಿಬಿ ಚಿಮ್ಮನಕಟ್ಟಿ ಅವರು ಬಾದಾಮಿ ಕ್ಷೇತ್ರದಲ್ಲಿ ಜಯಗಳಿಸಿದರು. ಒಟ್ಟು ಚಲಾವಣೆಯಾದ ಮತಗಳಲ್ಲಿ ಕಾಂಗ್ರೆಸ್ ಶೇ 41.31 ಮತಗಳನ್ನು ತನ್ನದಾಗಿಸಿಕೊಂಡಿತ್ತು. 2013 ರಲ್ಲಿ ಈ ಕ್ಷೇತ್ರದಲ್ಲಿ ಶೇ 70.71 ರಷ್ಟು ಮತದಾನವಾಗಿತ್ತು.
ಈ ಬಾರಿ ಪ್ರಮುಖ ಅಭ್ಯರ್ಥಿಗಳು
ಬಿಜೆಪಿ ಶಾಂತಗೌಡ ಪಾಟೀಲ ಅವರನ್ನು ಕಣಕ್ಕಿಳಿಸಿದ್ದು, ಕಾಂಗ್ರೆಸ್ ಭೀಮಸೇನ್ ಚಿಮ್ಮಣ್ಣಕಟ್ಟಿ ಅವರಿಗೆ ಟಿಕೆಟ್ ನೀಡಿದೆ. ಹನುಮಂತಪ್ಪ ಮಾವಿನಮರದ ಅವರು ಜೆಡಿಎಸ್ ಟಿಕೆಟ್ನಲ್ಲಿ ಸ್ಪರ್ಧಿಸಿದ್ದಾರೆ. ಬಿಜೆಪಿ ಹೊಸ ಮುಖಕ್ಕೆ ಮಣೆ ಹಾಕಿದೆ. ಕಾಂಗ್ರೆಸ್ ಅಭ್ಯರ್ಥಿ ಭೀಮಸೇನ್ ಚಿಮ್ಮನಕಟ್ಟಿ ಅವರು ಮಾಜಿ ಸಚಿವ ಬಿಬಿ ಚಿಮ್ಮನಕಟ್ಟಿ ಅವರ ಪುತ್ರರಾಗಿದ್ದಾರೆ. ಈ ಇಬ್ಬರಿಗೂ ಪೈಪೋಟಿ ನೀಡಲಿರುವ ಹನುಮಂತಪ್ಪ ಮಾವಿನಮರದ ಅವರು ಕಳೆದ ಬಾರಿಯೂ ಜೆಡಿಎಸ್ನಿಂದಲೇ ಕಣಕ್ಕಿಳಿದಿದ್ದರು.
ಬಿಜೆಪಿ ಹೊಸ ಮುಖಕ್ಕೆ ಮಣೆ ಹಾಕಿರುವುದರಿಂದ ಬಂಡಾಯವನ್ನು ಎದುರಿಸುತ್ತಿದೆ. ಬಿಜೆಪಿ ಟಿಕೆಟ್ಗಾಗಿ ಭಾರೀ ಪೈಪೋಟಿ ನಡೆಸಿದ್ದ ಮಾಜಿ ಶಾಸಕ ಎಂಎಂ ಪಟ್ಟಣಶೆಟ್ಟಿ ಅವರಿಗೆ ಬಿಜೆಪಿ ಟಿಕೆಟ್ ನೀಡಿಲ್ಲ. ಇದು ಅಸಾಮಾಧಾನಕ್ಕೆ ಕಾರಣವಾಗಿದೆ.
ಜೆಡಿಎಸ್ನಿಂದ ಸ್ಪರ್ಧಿಸಿರುವ ಹನುಮಂತಪ್ಪ ಮಾವಿನಮರದ ಅವರು ಕಳೆದ ಬಾರಿ ಸೋತರೂ ಸಹಿತ ಐದು ವರ್ಷಗಳ ಕಾಲ ಕ್ಷೇತ್ರದ ಜನತೆಯೊಂದಿಗೆ ಒಡನಾಟ ಇಟ್ಟುಕೊಂಡಿದ್ದಾರೆ. ಹಳ್ಳಿಗಳಿಗೆ ಹೋಗಿ ತಲುಪುವ ಪ್ರಯತ್ನ ಮಾಡಿದ್ದಾರೆ. ಹೀಗಾಗಿ, ಮತದಾರರು ಅವರನ್ನು ಪ್ರಬಲ ಅಭ್ಯರ್ಥಿ ಎಂದು ನಂಬಿದ್ದಾರೆ.
ಬಿಬಿ ಚಿಮ್ಮನಕಟ್ಟಿ ಅವರ ಮಗ ಭೀಮಸೇನ ಚಿಮ್ಮನಕಟ್ಟಿ ಅವರಿಗೆ ಸಮುದಾಯದ ಬೆಂಬಲವಿದೆ. ಬಾದಾಮಿ ಕ್ಷೇತ್ರದಲ್ಲಿ ಕುರುಬ ಸಮುದಾಯದ ವೋಟುಗಳು ಅಧಿಕವಾಗಿದೆ. ಮೇಲಾಗಿ, ಅವರ ತಂದೆ ಮಾಜಿ ಸಚಿವರಾಗಿ ಹೆಸರು ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಭೀಮಸೇನ ಚಿಮ್ಮನಕಟ್ಟಿ ಪ್ರಬಲ ಅಭ್ಯರ್ಥಿಯಾಗಿ ಹೊರಹೊಮ್ಮಿದ್ದಾರೆ.
ಕರ್ನಾಟಕದಲ್ಲಿ ಮೇ 10 ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13 ರಂದು ಫಲಿತಾಂಶ ಹೊರಬರಲಿದೆ. ರಾಜ್ಯದಲ್ಲಿ ಅಧಿಕಾರ ಉಳಿಸಿಕೊಳ್ಳಲು ಬಿಜೆಪಿ ಹವಣಿಸುತ್ತಿದ್ದರೆ, ಕೇಸರಿ ಪಕ್ಷವನ್ನು ಅಧಿಕಾರದಿಂದ ಕೆಳಗಿಳಿಸಲು ಕಾಂಗ್ರೆಸ್ ಮತ್ತು ಜೆಡಿಎಸ್ ಪ್ರಯತ್ನಿಸುತ್ತಿವೆ.
-
'ವಂತಾರ'ಕ್ಕೆ ಒಂದು ವರ್ಷ: ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ -
Bengaluru: ಗೊರಗುಂಟೆಪಾಳ್ಯದ ಟ್ರಾಫಿಕ್ಗೆ ಸಿಗಲಿದ್ಯಾ ಮುಕ್ತಿ? ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು 'ಸುರಂಗ ರಸ್ತೆ' ಪ್ರಸ್ತಾಪ -
Horoscope March 4: ಈ ರಾಶಿಯವರಿಗೆ ವೃತ್ತಿಯಲ್ಲಿ ಸುಧಾರಣೆ, ಆರೋಗ್ಯ ಕಾಳಜಿ ಮುಖ್ಯ, ದಿನ ಭವಿಷ್ಯ ಇಲ್ಲಿದೆ -
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ -
ಅನಧಿಕೃತವಾಗಿ ಪ್ರವೇಶಿಸಿದರೆ ಗುಂಡು ಹಾರಿಸಲಾಗುವುದು: ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಹುಟ್ಟುಹಾಕಿದ ವಾಯುಪಡೆಯ ಸೂಚನಾ ಫಲಕ -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Toxic release postponed: ಯಶ್ ಅಭಿಮಾನಿಗಳಿಗೆ ಆಘಾತ: "ಟಾಕ್ಸಿಕ್" ಸಿನಿಮಾ ಬಿಡುಗಡೆ ದಿಢೀರ್ ಮುಂದೂಡಿಕೆ -
ಕರ್ನಾಟಕ ವಿದ್ಯುತ್ ನಿಗಮ ಬೆಳಕಿನ ಸಂಸ್ಥೆಗೆ ಕತ್ತಲೆಯ ಛಾಯೆ: ಸರ್ಕಾರಿ ನಿರ್ಲಕ್ಷದ ಒಳನೋಟ -
ಕೃಷಿಕರಿಗೆ ವರದಾನವಾದ ಶೈಲಜಾ ವಿಠಲ್ ಆವಿಷ್ಕರಿಸಿದ 35 ಕೃಷಿ ಯಂತ್ರೋಪಕರಣ, ಸಣ್ಣ ರೈತರಿಗೆ ದೊಡ್ಡ ಲಾಭ -
Elnaaz Norouzi: ಭಾರತದಲ್ಲೇ ನೆಲೆಸಿದ್ದಾರೆ ಇರಾನ್ ಸುಂದರಿ, ಮತ್ತೆ ಅಲ್ಲಿಗೆ ಕಾಲಿಟ್ಟರೆ ನನ್ನ ಕೊಲ್ತಾರೆ ಎಂದ ನಟಿ ಎಲ್ನಾಜ್ -
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Rashmika: ಹೈದರಾಬಾದ್ನಲ್ಲಿ ರಶ್ಮಿಕಾ-ವಿಜಯ್ ಅರತಕ್ಷತೆ: ನವದಂಪತಿಗೆ ಡಿಕೆ ಶಿವಕುಮಾರ್ ವಿಶ್












Click it and Unblock the Notifications