ಗುಳೇದಗುಡ್ಡದಲ್ಲಿ ಅವಳಿ ಕರುಗಳಿಗೆ ರಾಮ-ಲಕ್ಷ್ಮಣ ಎಂದು ನಾಮಕರಣ
ಬಾಗಲಕೋಟೆ, ಅಕ್ಟೋಬರ್, 17: ದೇವಸ್ಥಾನದ ಹಸುವೊಂದು ಅವಳಿ ಕರುಗಳಿಗೆ ಜನ್ಮ ನೀಡಿದ ಕಾರಣ, ಸಂಭ್ರಮದಿಂದ ಭಕ್ತಾದಿಗಳು ಕರುಗಳಿಗೆ ತೊಟ್ಟಿಲು ಶಾಸ್ತ್ರ ಮಾಡಿ ಸಂಭ್ರಮಿಸಿದರು. ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ಪಟ್ಟಣದ ತ್ರಯಂಬಕೇಶ್ವರ ದೇವಸ್ಥಾನದಲ್ಲಿ ಕರುಗಳ ನಾಮಕರಣ ಮಾಡಲಾಗಿದೆ.
ಗಂಡು ಕರುಗಳಿಗೆ ನಾಮಕರಣ
ಈ ಸಂದರ್ಭದಲ್ಲಿ ಸೇರಿದ್ದ ನೂರಾರು ಜನರು ಎರಡೂ ಗಂಡು ಕರುಗಳಿಗಳಿಗೆ ಅದ್ದೂರಿಯಾಗಿ ನಾಮಕರಣ ಮಾಡಿದರು. ಕರುಗಳನ್ನು ತೊಟ್ಟಿಲಿನಲ್ಲಿ ತೂಗಿ, ಭಕ್ತರು ನಾಮಕರಣ ಮಾಡಿದ್ದಾರೆ. ಹಾಗೆಯೇ ಕರುಗಳಿಗೆ ರಾಮ-ಲಕ್ಷ್ಮಣ ಎದು ಹೆಸರಿಡುವ ಮೂಲಕ ಸಂಭ್ರಮಿಸಿದರು. ಎರಡು ಗಂಡು ಕರುಗಳಿಗೆ ಜನ್ಮ ನೀಡಿರುವ ಆಕಳನ್ನು ಈ ಹಿಂದೆ ತ್ರಯಂಬಕೇಶ್ವರ ದೇವಸ್ಥಾನಕ್ಕೆ ದೇವರ ಹಸುವಾಗಿ ಬಿಡಲಾಗಿತ್ತು. ದೇವಸ್ಥಾನದ ಹಸು ಐದು ದಿನಗಳ ಹಿಂದೆ ಅವಳಿ ಗಂಡು ಕರುಗಳಿಗೆ ಜನ್ಮ ನೀಡಿತ್ತು. ದೇವಸ್ಥಾನದ ಹಸು ಅವಳಿ ಕರುಗಳಿಗೆ ಜನ್ಮ ನೀಡಿದ್ದರಿಂದ ಭಕ್ತರಲ್ಲಿ ಸಂಭ್ರಮ ಮನೆ ಮಾಡಿತ್ತು. ಹುಟ್ಟಿದ ಐದನೇ ದಿನಕ್ಕೆ ಅದ್ದೂರಿಯಾಗಿ ತೊಟ್ಟಿಲು ಕಾರ್ಯ ಮಾಡಿದ ಭಕ್ತರು, ಕರುಗಳನ್ನು ತೊಟ್ಟಲುಗಳಿಗೆ ಹಾಕಿ ತೂಗಿದರು. ಸದ್ಯ ಅವಳಿ ಕರುಗಳಿಗೆ ರಾಮ-ಲಕ್ಷ್ಮಣ ಎಂದು ನಾಮಕರಣ ಮಾಡಿದ್ದು, ನಾಮಕರಣ ಹಿನ್ನೆಲೆ ದೇವಸ್ಥಾನದಲ್ಲಿ ಭಕ್ತರಿಗೆ ಪ್ರಸಾದ ವ್ಯವಸ್ಥೆಯನ್ನು ಮಾಡಲಾಗಿತ್ತು.

ಭಕ್ತಾದಿಗಳಿಗೆ ಪ್ರಸಾದದ ವ್ಯವಸ್ಥೆ
ಸಾಮಾನ್ಯವಾಗಿ ಯಾರಾದರೂ ಮನುಷ್ಯರ ಹುಟ್ಟುಹಬ್ಬ ಇದ್ದರೆ ಪಾರ್ಟಿಗಳನ್ನು ಮಾಡಿ ಸಂಭ್ರಮಿಸುವ ಪ್ರತೀತಿ ಈಗಾಲೂ ಜಾರಿಯಲ್ಲಿದೆ. ಪಬ್, ಬಾರ್, ಹೋಟೆಲ್ಗಳಿಗೆ ಹೋಗಿ ಸಂಭ್ರಮಿಸುವವರು ಒಂದು ಕಡೆ ಆದರೆ, ಮತ್ತೊಂದೆಡೆ ಸಿಂಪಲ್ ಆಗಿ ಮನೆಗಳಲ್ಲಿಯೇ ಕುಟುಂಬದವರ ಜೊತೆಗೆ ತಮ್ಮ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಳ್ಳುತ್ತಾರೆ. ಆದರೆ ಪ್ರಾಣಿಗಳಿಗೂ ಸಹ ಕೆಲವೆಡೆ ಹುಟ್ಟುಹಬ್ಬವನ್ನು ಮಾಡುತ್ತಾರೆ. ಇದೀಗ ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ಪಟ್ಟಣದಲ್ಲಿ ಒಂದು ಹಸು ಎರಡು ಅವಳಿ ಗಂಡು ಕರುಗಳಿಗೆ ಜನ್ಮ ನೀಡಿತ್ತು. ತ್ರಯಂಬಕೇಶ್ವರ ದೇವಸ್ಥಾನದಲ್ಲಿ ಕರುಗಳ ನಾಮಕರಣ ಕಾರ್ಯಕ್ರಮವನ್ನು ಭಕ್ತರು ಅದ್ಧೂರಿಯಾಗಿ ಆಚರಣೆ ಮಾಡಿದ್ದು, ಭಕ್ತಾದಿಗಳಿಗೆ ಪ್ರಸಾದದ ವ್ಯವಸ್ಥೆಯನ್ನು ಮಾಡಿರುವುದು ಗಮನ ಸೆಳೆದಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications