20 ರೂ.ಗೆ ಜಗಳ; ಗ್ರಾಹಕನ ಎದೆಗೆ ಕತ್ತರಿ ಚುಚ್ಚಿ ಹತ್ಯೆ ಮಾಡಿದ ಕ್ಷೌರಿಕ
ಬಾಗಲಕೋಟೆ, ಮೇ 27: ಸಲೂನ್ನಲ್ಲಿ ತಲೆಗೆ ಕಲರ್ ಹಚ್ಚುವ ದರದ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲ್ಲೂಕಿನ ಆಸಂಗಿ ಗ್ರಾಮದ ಪ್ರಜ್ವಲ್ ಜೆಂಟ್ಸ್ ಪಾರ್ಲರ್ನಲ್ಲಿ ಘಟನೆ ನಡೆದಿದ್ದು, ಕ್ಷೌರಿಕ ಕತ್ತರಿಯಿಂದ ಇರಿದ ಪರಿಣಾಮ ತೀವ್ರ ರಕ್ತಸ್ರಾವವಾಗಿ ಗ್ರಾಹಕ ಸಾವನ್ನಪ್ಪಿದ್ದಾನೆ.
22 ವರ್ಷದ ಸಾಗರ ಅವಟಿ ಕ್ಷೌರಿಕನಿಂದ ಕೊಲೆಗೀಡಾಗಿರುವ ಯುವಕ ಎಂದು ತಿಳಿದುಬಂದಿದೆ. ಸದಾಶಿವ ನಾವಿ ಕೊಲೆ ಮಾಡಿದ ಯುವಕ ಕ್ಷೌರಿಕನಾಗಿದ್ದು ಆಸಂಗಿ ಗ್ರಾಮದಲ್ಲಿ ಪ್ರಜ್ವಲ್ ಜೆಂಟ್ಸ್ ಪಾರ್ಲರ್ನಲ್ಲಿ ಕೆಲಸ ಮಾಡುತ್ತಿದ್ದ, ನಿನ್ನೆಸಂಜೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯಕಂಡಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಕಲರ್ ಹಚ್ಚುವ ವಿಚಾರಕ್ಕೆ ಜಗಳ ಶುರು; ಗುರುವಾರ ಸಂಜೆ ಪ್ರಜ್ವಲ್ ಜೆಂಟ್ಸ್ ಪಾರ್ಲರ್ನಲ್ಲಿ ಸಾಗರ ಎಂಬ ಯುವಕ ತಲೆಗೆ ಕಲರ್ ಹಚ್ಚಿಸುವುದಕ್ಕೆ ಬಂದಿದ್ದ. ಸಲೂನ್ ಮಾಲೀಕ ಲಕ್ಷ್ಮಣ ಕೊಲೆಯಾದ ಸಾಗರ ತಲೆಗೆ ಕಲರ್ ಹಚ್ಚುವುದಕ್ಕೆ ಮುಂದಾಗಿದ್ದರು. ಕಲರ್ ಹಚ್ಚುವುದಕ್ಕೆ 20 ರೂಪಾಯಿ ಕೊಡುವುದಾಗಿ ಸಾಗರ ತಿಳಿಸಿದ್ದಾನೆ. ಈ ವೇಳೆ ಮತ್ತೊಬ್ಬ ಗ್ರಾಹಕನಿಗೆ ಕಟಿಂಗ್ ಮಾಡುತ್ತಿದ್ದ ಸದಾಶಿವ ನಾವಿ ಕೋಪಗೊಂಡು ಸಾಗರನೊಂದಿಗೆ ತಕರಾರು ತೆಗೆದಿದ್ದಾನೆ.

ಸಾಗರ ಕ್ಷೌರಿಕ ಯುವಕ ಸದಾಶಿವ ನಾವಿಯನ್ನು ಅವಮಾನ ಮಾಡಿ ಕಾಡಿಸುತ್ತಿದ್ದನಂತೆ. ಗುರುವಾರ ಕೂಡ ಕೆಲ ಹೊತ್ತು ಕಾಡಿಸಿದ್ದನಂತೆ ಎಂದು ಹೇಳಲಾಗಿದ್ದು, ಸದಾಶಿವ ತನ್ನ ಹಳೆಯ ಕೋಪವನ್ನು ಮನದಲ್ಲಿಟ್ಟುಕೊಂಡು ಜಗಳಕ್ಕೆ ಇಳಿದಿದ್ದಾನೆ.
ಈ ಮಾತಿನ ಚಕಮಕಿ ವಿಕೋಪಕ್ಕೆ ತೆರಳಿ ಸದಾಶಿವ ತನ್ನ ಕೈಯಲ್ಲಿದ್ದ ಕತ್ತರಿಯಿಂದ ಸಾಗರನ ಎದೆ ಭಾಗಕ್ಕೆ ಚುಚ್ಚಿದ್ದಾನೆ. ಕೂಡಲೇ ಸಾಗರನನ್ನು ಅವಟಿಯ ಸಮೀಪದ ಜಮಖಂಡಿ ನಗರದ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಿದರಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.

ಮುಗಿಲು ಮುಟ್ಟಿದ ಆಕ್ರಂದನ; ಕ್ಷುಲ್ಲಕ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಸಾಗರನ್ನು ಕಳೆದುಕೊಂಡ ಆತನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನು ಸುದ್ದಿ ತಿಳಿದು ಸ್ಥಳಕ್ಕೆ ಬನಹಟ್ಟಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕುರಿತು ಬನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ಆರೋಪಿ ಸದಾಶಿವನನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಮೃತಪಟ್ಟಿರುವ ಸಾಗರ ಉತ್ತಮ ಕಬ್ಬಡ್ಡಿ ಹಾಗೂ ಕ್ರಿಕೆಟ್ ಆಟಗಾರನಾಗಿದ್ದನು. ಈ ಘಟನೆಯಿಂದ ಇಡೀ ಆಸಂಗಿ ಗ್ರಾಮದಲ್ಲಿ ನೀರವ ಮೌನ ಮನೆ ಮಾಡಿದೆ. ಈ ಘಟನೆ ಕುಚೇಷ್ಟೆಯಲ್ಲಿ ತೊಡಗುವ ಗೆಳೆಯರಿಗೆ ಎಚ್ಚರಿಕೆಯಾಗಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications