17 ತಿಂಗಳ ನಂತರ ತೆರೆದ ಬಸವಣ್ಣನ ಐಕ್ಯ ಮಂಟಪ; ಭಕ್ತರಲ್ಲಿ ಸಂತಸ
ಬಾಗಲಕೋಟೆ, ಅಕ್ಟೋಬರ್ 5: ಬಾಗಲಕೋಟೆಯಲ್ಲಿನ ಬಸವಣ್ಣನ ಐಕ್ಯ ಮಂಟಪಕ್ಕೆ ಬರೋಬ್ಬರಿ 17 ತಿಂಗಳ ಬಳಿಕ ಭಕ್ತರಿಗೆ ಅವಕಾಶವನ್ನು ಕಲ್ಪಿಸಿಕೊಡಲಾಗಿದೆ. ಅಕ್ಟೋಬರ್ 3ರಿಂದ ದರ್ಶನಕ್ಕೆ ಅವಕಾಶ ಕಲ್ಪಿಸುವ ಮೂಲಕ ಮಂಡಳಿಯ ಅಧಿಕಾರಿಗಳು ಭಕ್ತರ ಬೇಡಿಕೆಯನ್ನು ಈಡೇರಿಸಿದ್ದಾರೆ.
ಕೆಲವು ದುರಸ್ತಿ ಕಾರ್ಯದ ಹಿನ್ನೆಲೆಯಲ್ಲಿ 2019 ಮೇ 22ರಿಂದಲೇ ಬಸವಣ್ಣನ ಐಕ್ಯ ಸ್ಥಳದ ದರ್ಶನಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಆರು ತಿಂಗಳಲ್ಲಿ ಮುಗಿಯಬೇಕಿದ್ದ ಕಾರ್ಯ ಪ್ರವಾಹ, ಕೊರೊನಾ ಭೀತಿ, ಆಯುಕ್ತರ ವರ್ಗಾವಣೆ ಮುಂತಾದ ಕಾರಣಗಳಿಂದ 17 ತಿಂಗಳ ಬಳಿಕ ಆರಂಭಗೊಂಡಿದೆ. ಇದೀಗ ಮಂಟಪಕ್ಕೆ ಅವಕಾಶ ನೀಡಿರುವುದು ಭಕ್ತರ ಸಂತಸಕ್ಕೆ ಕಾರಣವಾಗಿದೆ.
2020 ಜೂನ್ 6ರಂದು ಮಂಡಳಿಯ ತಾಂತ್ರಿಕ ಸಲಹಾ ಸಮಿತಿ ಬಸವಣ್ಣನ ಐಕ್ಯ ಮಂಟಪ ದರ್ಶನ ಪ್ರವೇಶಕ್ಕೆ ಅವಕಾಶ ಕೊಟ್ಟಿತ್ತು. ಆದರೆ ಕೊರೊನಾ ಸೋಂಕಿನ ಕಾರಣದಿಂದಾಗಿ ನಿರ್ಬಂಧವು ಮತ್ತೆ ಮುಂದುವರೆದಿತ್ತು. ಮತ್ತೆ 4 ತಿಂಗಳು ಬೀಗ ಹಾಕಿ ಪ್ರವೇಶಕ್ಕೆ ಅವಕಾಶ ಕೊಟ್ಟಿರಲಿಲ್ಲ. ನಿತ್ಯ ಕ್ಷೇತ್ರದ ದರ್ಶನಕ್ಕೆ ಬಂದ ಭಕ್ತರು ಸಂಗಮನಾಥನ ದರ್ಶನ ಪಡೆದು ಐಕ್ಯ ಮಂಟಪ ದರ್ಶನ ಇಲ್ಲದೆ ನಿರಾಸೆಯಿಂದ ತೆರಳುತ್ತಿದ್ದರು.

ಇದೀಗ ದರ್ಶನಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದ್ದು, ದರ್ಶನದ ಅವಧಿಯನ್ನು ಬೆಳಿಗ್ಗೆ 6ರಿಂದ ರಾತ್ರಿ 8ರವರೆಗೆ ಹೆಚ್ಚಿಸಬೇಕು ಎಂಬ ಬೇಡಿಕೆಯೂ ಕೇಳಿಬಂದಿದೆ. ಈ ನಡುವೆ ಐಕ್ಯ ಮಂಟಪದ ಕೆಲವು ಸ್ಥಳದಲ್ಲಿ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ, 87 ಲಕ್ಷ ರೂ. ವೆಚ್ಚದಲ್ಲಿ ದುರಸ್ತಿ ಕಾರ್ಯ ನಡೆದಿದ್ದು, ಇದರ ಗುಣಮಟ್ಟವನ್ನು ಪರಿಶೀಲಿಸಬೇಕು ಎಂಬ ಮಾತುಗಳೂ ಕೇಳಿಬಂದಿವೆ.
Recommended Video
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications