ಬಾಗಲಕೋಟೆಯಲ್ಲಿ ಬಿಜೆಪಿ ಕಾರ್ಯಕರ್ತರ ವಿಜಯೋತ್ಸವ
ಬಾಗಲಕೋಟೆ ಮೇ.17 : ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಿದ ಹಿನ್ನಲೆಯಲ್ಲಿ ಬಾಗಲಕೋಟೆ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.
ಶಿವಾನಂದ ಜಿನ್ನಿಂಗ್ ದಲ್ಲಿರುವ ಪಕ್ಷದ ಕಾರ್ಯಾಲಯದಿಂದ ಆರಂಭಗೊಂಡ ವಿಜಯೋತ್ಸವದ ಮೆರವಣಿಗೆ ನಗರದ ಬಸವೇಶ್ವರ ವೃತ್ತಕ್ಕೆ ಆಗಮಿಸಿತು. ನಂತರ ಕಾರ್ಯಕರ್ತರು ಪಕ್ಷದ ಪರವಾಗಿ ಜೈಕಾರ ಕೂಗಿದರು.
ಚುನಾವಣೆ : ಬಾಗಲಕೋಟೆಯಲ್ಲಿ ಗೆದ್ದವರು, ಸೋತವರ ವಿವರ
ಬಿಜೆಪಿ ಅಧಿಕಾರಕ್ಕೆ ಬಂದಿದ್ದಕ್ಕೆ ಭಾರಿ ಪ್ರಮಾಣದಲ್ಲಿ ಪಟಾಕಿ ಸಿಡಿಸಿ, ಪರಸ್ಪರ ಸಿಹಿ ಹಂಚುವ ಮೂಲಕ ಸಂಭ್ರಮಿಸಲಾಯಿತು. ನಂತರ ಮಾತನಾಡಿದ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ರೇವಣಕರ , ರಾಜ್ಯದ ಜನರು ಬಿಜೆಪಿಗೆ ಬೆಂಬಲ ನೀಡಿದ್ದಾರೆ. 104 ಸ್ಥಾನ ಪಡೆದು ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.
ಆದರೆ, ಕಾಂಗ್ರೆಸ್ ಪಕ್ಷ ವಾಮಮಾರ್ಗದ ಮೂಲಕ ಅಧಿಕಾರದಲ್ಲಿ ಉಳಿಯಲು ಬರೀ 38 ಸ್ಥಾನ ಪಡೆದಿರುವ ಜೆಡಿಎಸ್ ಜೊತೆ ಕೈಜೋಡಿಸಲು ಮುಂದಾಗಿದೆ. ಎರಡು ಪಕ್ಷ ಅನೈತಿಕ ಒಪ್ಪಂದ ಮಾಡಿಕೊಂಡಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.