ಜಮಖಂಡಿ ಉಪ ಚುನಾವಣೆ : ಬಿಜೆಪಿ, ಕಾಂಗ್ರೆಸ್ನಿಂದ ಅನುಕಂಪದ ಅಸ್ತ್ರ!
Recommended Video

ಜಮಖಂಡಿ, ಅಕ್ಟೋಬರ್ 28 : ಜಮಖಂಡಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳು ಅನುಕಂಪದ ಅಲೆಯಲ್ಲಿ ಗೆಲುವು ಸಾಧಿಸುವ ತಂತ್ರ ರೂಪಿಸಿವೆ. ನವೆಂಬರ್ 3ರಂದು ಉಪ ಚುನಾವಣೆ ನಡೆಯಲಿದೆ.
ಜಮಖಂಡಿ ಕ್ಷೇತ್ರಕ್ಕೆ ಇದು 2ನೇ ಉಪ ಚುನಾವಣೆಯಾಗಿದೆ. ಕಾಂಗ್ರೆಸ್ನ ಆನಂದ್ ನ್ಯಾಮಗೌಡ, ಬಿಜೆಪಿಯ ಶ್ರೀಕಾಂತ್ ಕುಲಕರ್ಣಿ ಸೇರಿ 7 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆದರೆ, ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಪ್ರಬಲ ಪೈಪೋಟಿ ನಿರೀಕ್ಷೆ ಮಾಡಲಾಗಿದೆ.
2018ರ ಚುನಾವಣೆಯಲ್ಲಿ ಕಾಂಗ್ರೆಸ್ನ ಸಿದ್ದು ನ್ಯಾಮಗೌಡ ಅವರು 49,245 ಮತಗಳನ್ನು ಪಡೆದು ಜಯಗಳಿಸಿದ್ದರು. ಆದರೆ, ಚುನಾವಣೆ ನಡೆದ ಕೆಲವೇ ದಿನಗಳಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಅವರು ಮೃತಪಟ್ಟಿದ್ದು, ಉಪ ಚುನಾವಣೆ ಎದುರಾಗಿದೆ.
ಸಿದ್ದು ನ್ಯಾಮಗೌಡ ಪುತ್ರ ಆನಂದ್ ನ್ಯಾಮಗೌಡ ಅವರಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಿದೆ. ಅನುಕಂಪದ ಅಲೆಯಲ್ಲಿ ಗೆಲುವು ಸಾಧಿಸುವ ನಿರೀಕ್ಷೆಯಲ್ಲಿದೆ. ಬಿಜೆಪಿಯ ಶ್ರೀಕಾಂತ್ ಕುಲಕರ್ಣಿ ಅವರು ಸತತ 2 ಚುನಾವಣೆಯಲ್ಲಿ ಸೋತಿದ್ದು, ಆ ಅನುಕಂಪದ ಆಧಾರದಲ್ಲಿ ಗೆಲ್ಲುವ ನಿರೀಕ್ಷೆ ಹೊಂದಿದ್ದಾರೆ.....

ಅನುಕಂಪದ ಅಸ್ತ್ರ
ಸಿದ್ದು ನ್ಯಾಮಗೌಡ ಪುತ್ರ ಆನಂದ್ ನ್ಯಾಮಗೌಡ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಿರುವ ಕಾಂಗ್ರೆಸ್ ಅನುಕಂಪದ ಅಸ್ತ್ರ ಪ್ರಯೋಗ ಮಾಡುತ್ತಿದೆ. ಅಪ್ಪನನ್ನು ಕಳೆದುಕೊಂಡ ಮಗ ಎಂದು ಪ್ರಚಾರದಲ್ಲಿ ಪದೇ ಪದೇ ಹೇಳುತ್ತಿದ್ದು, ಉಪ ಚುನಾವಣೆಯಲ್ಲಿ ಗೆಲ್ಲಲು ಅನುಕಂಪದ ಅಸ್ತ್ರವನ್ನು ಪ್ರಯೋಗ ಮಾಡುತ್ತಿದೆ.

ಸೋಲಿನ ಅನುಕಂಪ
ಮತ್ತೊಂದು ಕಡೆ ಬಿಜೆಪಿಯೂ ಅನುಕಂಪದ ಅಸ್ತ್ರ ಪ್ರಯೋಗ ಮಾಡುತ್ತಿದೆ. ಶ್ರೀಕಾಂತ್ ಕುಲಕರ್ಣಿ ಅವರು 2008ರಲ್ಲಿ ಮೊದಲ ಬಾರಿಗೆ ಕ್ಷೇತ್ರದಲ್ಲಿ ಗೆದ್ದು ಶಾಸಕರಾಗಿದ್ದರು. ಆದರೆ, 2013, 2018ರ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿದ್ದಾರೆ. ಆದ್ದರಿಂದ, ಬಿಜೆಪಿ ಈ ಬಾರಿ ಅಭ್ಯರ್ಥಿ ಗೆಲ್ಲಿಸಿ ಎಂದು ಅನುಕಂಪ ಮುಂದಿಟ್ಟುಕೊಂಡು ಪ್ರಚಾರ ನಡೆಸುತ್ತಿದೆ.

ಬಂಡಾಯದಿಂದಾಗಿ ಸೋಲು
ಕಾಂಗ್ರೆಸ್ ಮತ್ತು ಬಿಜೆಪಿಗೆ ಆಂತರಿಕ ಭಿನ್ನಮತ ಆಂತಕ ತಂದಿತ್ತು. 2018ರ ಮೇನಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿಯ ಸಂಗಮೇಶ್ ನಿರಾಣಿ, ಕಾಂಗ್ರೆಸ್ನ ಶ್ರೀಶೈಲ ದಳವಾಯಿ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದು ಎರಡೂ ಪಕ್ಷಗಳಿಗೆ ತಲೆನೋವು ತಂದಿದ್ದರು. ಆದರೆ, ಈ ಬಾರಿ ಇಬ್ಬರ ಜೊತೆಗೂ ಮಾತುಕತೆ ನಡೆಸಿದ್ದು, ಬಂಡಾಯದ ಬಿಸಿ ತಟ್ಟುವುದಿಲ್ಲ ಎಂಬ ನಿರೀಕ್ಷೆ ಇದೆ.

ಒಟ್ಟು ಮತದಾರರು
ಜಮಖಂಡಿ ಕ್ಷೇತ್ರದಲ್ಲಿ ಗಾಣಿಗ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಪಂಚಮಸಾಲಿ ಲಿಂಗಾಯತರು, ಕುರುಬರು, ಮುಸ್ಲಿಂಮರು ನಿರ್ಣಾಯಕರಾಗಿದ್ದಾರೆ.
ಕ್ಷೇತ್ರದಲ್ಲಿ 198957 ಮತದಾರರು ಇದ್ದಾರೆ. ಪುರುಷರು 99883, ಮಹಿಳೆಯರು 98,883, ಇತರೆ 05.
-
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ












Click it and Unblock the Notifications