ಬಿಎಸ್ವೈ ಸದ್ಯಕ್ಕೆ ಬದಲಾವಣೆಯಿಲ್ಲ: ಕಾರಣ ಬಿಚ್ಚಿಟ್ಟ ಸಿದ್ದರಾಮಯ್ಯ
ಬಾಗಲಕೋಟೆ, ಮೇ 28: ಬಿಜೆಪಿಯವರು ಪಕ್ಷದ ಚೌಕಟ್ಟಿನೊಳಗೆ ಜಗಳವಾಡುತ್ತಿಲ್ಲ, ಬೀದಿಬೀದಿಯಲ್ಲಿ ಜಗಳವಾಡುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದರು.
"ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ನೇರವಾಗಿ ಯೋಗೇಶ್ವರ್ ಮೇಲೆ ವಾಗ್ದಾಳಿ ನಡೆಸುತ್ತಾರೆ. ಹಿಂದೆ ಸಚಿವರಾಗಿದ್ದಾಗ ಕೋಟಿ ಕೋಟಿ ಲೂಟಿ ಹೊಡೆದರು ಎಂದು. ಇಂತಹ ಪಕ್ಷದಿಂದ ಏನು ಆಡಳಿತ ನಿರೀಕ್ಷೆ ಮಾಡಲು ಸಾಧ್ಯ"ಎಂದು ಸಿದ್ದರಾಮಯ್ಯ ಬೇಸರ ವ್ಯಕ್ತ ಪಡಿಸಿದರು.
"ನನಗಿರುವ ಮಾಹಿತಿಯ ಪ್ರಕಾರ, ಯಡಿಯೂರಪ್ಪನವರನ್ನು ಸದ್ಯ ಬದಲಾವಣೆ ಮಾಡುವುದಿಲ್ಲ. ಕೊರೊನಾ ಕಾರಣದಿಂದ ಅವರ ವರಿಷ್ಠರು ಸದ್ಯ ಅವರನ್ನೇ ಮುಂದುವರಿಸಲು ಚಿಂತನೆ ನಡೆಸಿರಬಹುದು"ಎಂದು ಸಿದ್ದರಾಮಯ್ಯ ಅಭಿಪ್ರಾಯ ಪಟ್ಟರು.

"ಯಡಿಯೂರಪ್ಪನವರನ್ನು ಬಿಟ್ಟರೆ ಬಿಜೆಪಿಯಲ್ಲಿ ಯಾರೂ ಸಮರ್ಥ ಅಭ್ಯರ್ಥಿಯಿಲ್ಲ. ಅವರನ್ನು ಬದಲಾವಣೆ ಮಾಡದಿರಲು ಅದೂ ಒಂದು ಕಾರಣ. ನನಗೂ ಮತ್ತು ಯಡಿಯೂರಪ್ಪನವರಿಗೂ ವೈಯಕ್ತಿಕ ಸಂಬಂಧ ಉತ್ತಮವಾಗಿಯೇ ಇದೆ"ಎಂದು ಸಿದ್ದರಾಮಯ್ಯ ಹೇಳಿದರು.
"ಮುಖ್ಯಮಂತ್ರಿ ಯಡಿಯೂರಪ್ಪನವರು ಒಳ್ಳೆಯವರೇ, ಆದರೆ ಮುಖ್ಯಮಂತ್ರಿಯಾಗಿ ಅವರು ವೈಫಲ್ಯವನ್ನು ಕಂಡಿದ್ದಾರೆ. ಅವರ ಹೈಕಮಾಂಡ್ ಮತ್ತು ಬಿಜೆಪಿ ಶಾಸಕರಲ್ಲಿ ಕೆಲವರು ಅವರ ಬದಲಾವಣೆಗೆ ಪ್ರಯತ್ನವನ್ನು ಮಾಡುತ್ತಿದ್ದರು"ಎಂದು ಸಿದ್ದರಾಮಯ್ಯ ಹೇಳಿದರು.
ರಮೇಶ್ ಜಾರಕಿಹೊಳಿ ಪ್ರಕರಣದಲ್ಲಿ ಸಂವಿಧಾನದ ಈ ಯಾವ ನಿಯಮಗಳನ್ನು ಪೊಲೀಸ್ ಇಲಾಖೆ ಪಾಲಿಸುತ್ತಿಲ್ಲ. ಬಿಜೆಪಿ ಸರ್ಕಾರ ತಮಗೆ ಬೇಕಾದಂತೆ ಸಂವಿಧಾನದ ನಿಯಮಗಳನ್ನು ತಿರುಚಿಕೊಂಡಿದೆ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತ ಪಡಿಸಿದರು.
-
ಬಜೆಟ್ನಲ್ಲಿ ಅನಿವಾಸಿ ಸಚಿವಾಲಯ ಘೋಷಣೆ ಇಲ್ಲ: ನಿರಾಶೆ ವ್ಯಕ್ತಪಡಿಸಿದ ಡಾ.ರೊನಾಲ್ಡ್ ಕೊಲಾಸೊ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು












Click it and Unblock the Notifications