ಬಿಎಸ್ವೈ ಸದ್ಯಕ್ಕೆ ಬದಲಾವಣೆಯಿಲ್ಲ: ಕಾರಣ ಬಿಚ್ಚಿಟ್ಟ ಸಿದ್ದರಾಮಯ್ಯ
ಬಾಗಲಕೋಟೆ, ಮೇ 28: ಬಿಜೆಪಿಯವರು ಪಕ್ಷದ ಚೌಕಟ್ಟಿನೊಳಗೆ ಜಗಳವಾಡುತ್ತಿಲ್ಲ, ಬೀದಿಬೀದಿಯಲ್ಲಿ ಜಗಳವಾಡುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದರು.
"ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ನೇರವಾಗಿ ಯೋಗೇಶ್ವರ್ ಮೇಲೆ ವಾಗ್ದಾಳಿ ನಡೆಸುತ್ತಾರೆ. ಹಿಂದೆ ಸಚಿವರಾಗಿದ್ದಾಗ ಕೋಟಿ ಕೋಟಿ ಲೂಟಿ ಹೊಡೆದರು ಎಂದು. ಇಂತಹ ಪಕ್ಷದಿಂದ ಏನು ಆಡಳಿತ ನಿರೀಕ್ಷೆ ಮಾಡಲು ಸಾಧ್ಯ"ಎಂದು ಸಿದ್ದರಾಮಯ್ಯ ಬೇಸರ ವ್ಯಕ್ತ ಪಡಿಸಿದರು.
"ನನಗಿರುವ ಮಾಹಿತಿಯ ಪ್ರಕಾರ, ಯಡಿಯೂರಪ್ಪನವರನ್ನು ಸದ್ಯ ಬದಲಾವಣೆ ಮಾಡುವುದಿಲ್ಲ. ಕೊರೊನಾ ಕಾರಣದಿಂದ ಅವರ ವರಿಷ್ಠರು ಸದ್ಯ ಅವರನ್ನೇ ಮುಂದುವರಿಸಲು ಚಿಂತನೆ ನಡೆಸಿರಬಹುದು"ಎಂದು ಸಿದ್ದರಾಮಯ್ಯ ಅಭಿಪ್ರಾಯ ಪಟ್ಟರು.

"ಯಡಿಯೂರಪ್ಪನವರನ್ನು ಬಿಟ್ಟರೆ ಬಿಜೆಪಿಯಲ್ಲಿ ಯಾರೂ ಸಮರ್ಥ ಅಭ್ಯರ್ಥಿಯಿಲ್ಲ. ಅವರನ್ನು ಬದಲಾವಣೆ ಮಾಡದಿರಲು ಅದೂ ಒಂದು ಕಾರಣ. ನನಗೂ ಮತ್ತು ಯಡಿಯೂರಪ್ಪನವರಿಗೂ ವೈಯಕ್ತಿಕ ಸಂಬಂಧ ಉತ್ತಮವಾಗಿಯೇ ಇದೆ"ಎಂದು ಸಿದ್ದರಾಮಯ್ಯ ಹೇಳಿದರು.
"ಮುಖ್ಯಮಂತ್ರಿ ಯಡಿಯೂರಪ್ಪನವರು ಒಳ್ಳೆಯವರೇ, ಆದರೆ ಮುಖ್ಯಮಂತ್ರಿಯಾಗಿ ಅವರು ವೈಫಲ್ಯವನ್ನು ಕಂಡಿದ್ದಾರೆ. ಅವರ ಹೈಕಮಾಂಡ್ ಮತ್ತು ಬಿಜೆಪಿ ಶಾಸಕರಲ್ಲಿ ಕೆಲವರು ಅವರ ಬದಲಾವಣೆಗೆ ಪ್ರಯತ್ನವನ್ನು ಮಾಡುತ್ತಿದ್ದರು"ಎಂದು ಸಿದ್ದರಾಮಯ್ಯ ಹೇಳಿದರು.
ರಮೇಶ್ ಜಾರಕಿಹೊಳಿ ಪ್ರಕರಣದಲ್ಲಿ ಸಂವಿಧಾನದ ಈ ಯಾವ ನಿಯಮಗಳನ್ನು ಪೊಲೀಸ್ ಇಲಾಖೆ ಪಾಲಿಸುತ್ತಿಲ್ಲ. ಬಿಜೆಪಿ ಸರ್ಕಾರ ತಮಗೆ ಬೇಕಾದಂತೆ ಸಂವಿಧಾನದ ನಿಯಮಗಳನ್ನು ತಿರುಚಿಕೊಂಡಿದೆ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತ ಪಡಿಸಿದರು.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ












Click it and Unblock the Notifications