ಬಾದಾಮಿಯಲ್ಲಿ ಸಿದ್ದರಾಮಯ್ಯನ ಸೋಲಿಸಲು ಬಿಜೆಪಿ ಮಾಸ್ಟರ್ ಪ್ಲಾನ್
Recommended Video

ಬಾದಾಮಿ, ಏಪ್ರಿಲ್ 20: ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹಣಿಯಲು ಬಿಜೆಪಿ ಮಾಸ್ಟರ್ ಪ್ಲಾನ್ ಒಂದನ್ನು ಮಾಡಿದೆ. ಮಾಸ್ಟರ್ ಪ್ಲಾನ್ ಹಿಂದಿರುವುದು ಬಿಜೆಪಿ 'ಚಾಣಕ್ಯ' ಅಮಿತ್ ಶಾ.
ಹೌದು, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಈಗಾಗಲೇ ಸೋಲಿನ ವಾಸನೆ ಹಿಡಿದಿರುವ ಸಿದ್ದರಾಮಯ್ಯ ಅವರು ಬಾದಾಮಿಯಿಂದಲೂ ಕಣಕ್ಕಿಳಿಯುವ ಸಾಧ್ಯತೆ ಅತಿ ಹೆಚ್ಚಿದೆ. ಆದರೆ ಅಲ್ಲಿಯೂ ಅವರಿಗೆ ತಕ್ಕ ಎದಿರೇಟು ಕೊಡಲು ಬಿಜೆಪಿ ಸಜ್ಜಾಗುತ್ತಿದೆ.
ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್
ಬಿಜೆಪಿಯ ಹಿರಿಯ ಮುಖಂಡ ವಿಆರ್ಎಲ್ ಸಂಸ್ಥಾಪಕ ವಿಜಯ ಸಂಕೇಶ್ವರ್ ಅವರನ್ನು ಸಿದ್ದರಾಮಯ್ಯ ವಿರುದ್ಧವಾಗಿ ಕಣಕ್ಕಿಳಿಸಲು ಬಿಜೆಪಿ ಯೋಜಿಸಿದೆ ಎಂಬ ಸುದ್ದಿ ಹರಿದಾಡುತ್ತಿದೆ. ರಾಜ್ಯಸಭೆ ಟಿಕೆಟ್ ಗಿಟ್ಟಿಸಲು ವಿಫಲರಾಗಿದ್ದ ಸಂಕೇಶ್ವರ್ ಅವರ ಮನವೊಲಿಸುವ ಪ್ರಯತ್ನಗಳು ಚಾಲ್ತಿಯಲ್ಲಿದೆ. ಸದ್ಯಕ್ಕೆ ವಿಜಯ್ ಸಂಕೇಶ್ವರ್ ಅವರು ಒಪ್ಪಿಗೆಯನ್ನು ಇನ್ನೂ ನೀಡಿಲ್ಲ.

ತಡ ರಾತ್ರಿ ಚರ್ಚೆ
ನಿನ್ನೆ ತಡ ರಾತ್ರಿ ಪಕ್ಷದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆದಿದ್ದು, ಉತ್ತಮ ಜನಬೆಂಬಲ ಹಾಗೂ ರಾಜಕೀಯವಾಗಿ ಪ್ರಾಮಾಣಿಕ ವ್ಯಕ್ತಿತ್ವ ಹೊಂದಿರುವ ವಿಜಯ ಸಂಕೇಶ್ವರ್ ಅವರನ್ನು ಸಿದ್ದರಾಮಯ್ಯ ವಿರುದ್ಧ ಬಾದಾಮಿಯಲ್ಲಿ ಕಣಕ್ಕಿಳಿಸಲು ತೀರ್ಮಾನಿಸಲಾಗಿದೆ ಎಂಬ ಮಾತು ಕೇಳಿಬರುತ್ತಿದೆ. ಈ ಕುರಿತು ಅಧಿಕೃತವಾಗಿ ಮಾಹಿತಿ ಇನ್ನೂ ಹೊರಬೀಳಬೇಕಿದೆ.

ಜವಾಬ್ದಾರಿ ಹೊರಿಸಿರುವ ಶಾ
ವಿಜಯ ಸಂಕೇಶ್ವರ್ ಅವರನ್ನು ಚುನಾವಣೆಗೆ ಸ್ಪರ್ಧಿಸುವಂತೆ ಒಪ್ಪಿಸುವ ಜವಾಬ್ದಾರಿಯನ್ನು ಪ್ರಹ್ಲಾದ್ ಜೋಷಿ, ಜಗದೀಶ್ ಶೆಟ್ಟರ್ ಮತ್ತು ಅನಂತ್ಕುಮಾರ್ ಅವರ ಹೆಗಲಿಗೆ ಅಮಿತ್ ಶಾ ವಹಿಸಿದ್ದಾರೆ. ವಿಜಯ ಸಂಕೇಶ್ವರ್ ಅವರನ್ನು ಯಡಿಯೂರಪ್ಪ ಅವರು ಇಂದು ಭೇಟಿ ಆಗಿ ಚರ್ಚೆ ನಡೆಸುವ ಸಾಧ್ಯತೆ ಇದೆ.

ಸಂಕೇಶ್ವರ್ ಉತ್ತರ ಕರ್ನಾಟಕದವರೇ
ವಿಜಯ ಸಂಕೇಶ್ವರ್ ಅವರು ಉತ್ತರ ಕರ್ನಾಟಕ ಮೂಲದವರಾಗಿದ್ದು, ಸಿದ್ದರಾಮಯ್ಯ ಅವರಿಗಿಂತಲೂ ಕ್ಷೇತ್ರಕ್ಕೆ ಸ್ಥಳೀಯರು ಎನಿಸಿಕೊಳ್ಳಲಿದ್ದಾರೆ, ಜೊತೆಗೆ ಬಾದಾಮಿ ಕ್ಷೇತ್ರದಲ್ಲಿ 65,000 ಲಿಂಗಾಯತ ಮತಗಳಿದ್ದು,ಲಿಂಗಾಯತ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿರುವ ಕಾರಣ ಸಂಕೇಶ್ವರ್ ಅವರು ಸೂಕ್ತ ಅಭ್ಯರ್ಥಿ ಎಂದು ಬಿಜೆಪಿ ಈ ನಿರ್ಣಯಕ್ಕೆ ಬಂದಿದೆ.

ಮುನಿಸು ಶಮನದ ತಂತ್ರವೂ ಆಗಿದೆ
ಕಳೆದ ತಿಂಗಳಷ್ಟೆ ಮುಕ್ತಾಯವಾದ ರಾಜ್ಯಸಭಾ ಚುನಾವಣೆಗೆ ಬಿಜೆಪಿಯಿಂದ ವಿಜಯ ಸಂಕೇಶ್ವರ್ ಅವರ ಹೆಸರು ಜೋರಾಗಿ ಕೇಳಿಬಂದಿತ್ತು. ಈಗ ಬಿಜೆಪಿಯಿಂದ ಆಯ್ಕೆ ಆಗಿರುವ ರಾಜೀವ್ ಚಂದ್ರಶೇಖರ್ ಬದಲಿಗೆ ಸ್ಥಳೀಯರಾದ ವಿಜಯ ಸಂಕೇಶ್ವರ್ ಅವರನ್ನೇ ಆಯ್ಕೆ ಮಾಡಬೇಕು ಎಂಬ ಕೂಗು ಪಕ್ಷದಲ್ಲೇ ಜೋರಾಗಿ ಕೇಳಿ ಬಂದಿತ್ತು ಆದರೆ ಕೊನೆಗೆ ರಾಜ್ಯಸಭಾ ಸೀಟು ರಾಜೀವ್ ಚಂದ್ರಶೇಖರ್ ಪಾಲಾಯಿತು. ಇದೀಗ ವಿಧಾಸಬಾ ಟಿಕೆಟ್ ನೀಡಿದರೆ ವಿಜಯ ಸಂಕೇಶ್ವರ್ ಅವರ ಮುನಿಸು ಕಡಿಮೆ ಮಾಡುವ ತಂತ್ರವೂ ಇದರಲ್ಲಿದೆ.

ಜೆಡಿಎಸ್ನಿಂದ ಬೆಂಬಲ ಸಾಧ್ಯತೆ
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಈಗಾಗಲೇ ಜೆಡಿಎಸ್ನ ಜಿ.ಟಿ.ದೇವೇಗೌಡ ಅವರು ಸಿದ್ದರಾಮಯ್ಯ ಅವರಿಗೆ ಕೈಗೆ ಕೈ, ಭುಜಜ್ಜೆ ಭುಜ ಎಂಬಂತೆ ಎದುರು ನಿಂತಿದ್ದು, ಅಲ್ಲಿ ಬಿಜೆಪಿಯು ಜೆಡಿಎಸ್ಗೆ ಆಂತರಿಕವಾಗಿ ಬೆಂಬಲ ನೀಡುತ್ತಿದೆ ಎಂಬುದು ಗುಟ್ಟೇನೂ ಅಲ್ಲ. ಹಾಗೆಯೇ ಬಾದಾಮಿಯಲ್ಲಿ ವಿಜಯ ಸಂಕೇಶ್ವರ್ ಅವರು ಬಿಜೆಪಿಯಿಂದ ಸ್ಪರ್ಧಿಸಿದರೆ ಇಲ್ಲಿ ಜೆಡಿಎಸ್ ಬಿಜೆಪಿಗೆ ಆಂತರಿಕ ಬೆಂಬಲ ನೀಡುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.

ಬಾದಾಮಿಯ ಲೆಕ್ಕಾಚಾರ
ಸಿದ್ದರಾಮಯ್ಯ ಅವರು ಬಾದಾಮಿಯನ್ನೇ ಆಯ್ಕೆ ಮಾಡಿಕೊಂಡಿರುವ ಹಿಂದೆ ಜಾತಿ ಲೆಕ್ಕಾಚಾರ ಇದೆ. ಇಲ್ಲಿ 65000 ಲಿಂಗಾಯತ ಮತದಾರರು ಇದ್ದರೆ, 48000 ಕುರುಬ ಸಮುದಾಯದ ಮತದಾರರಿದ್ದಾರೆ. ಪರಿಶಿಷ್ಟಜಾತಿ ಮತ್ತು ವರ್ಗದ ಮತದಾರರ ಸಂಖ್ಯೆ 47000 ದಷ್ಟಿದ್ದರೆ, ಮುಸ್ಲಿಂ ಮತಗಳ ಸಂಖ್ಯೆ 11000 ಇದೆ. ನೇಕಾರ ಸಮುದಾಯದ ಮತಗಳು 13000 ಇವೆ, ಇನ್ನು ಇತರೆ ಮತದಾರರ ಸಂಖ್ಯೆ 30000 ಇದೆ. ಲಿಂಗಾಯತ ಹೊರತುಪಡಿಸಿ ಬಹುತೇಕ ಅಹಿಂದ ಮತದಾರರೇ ಹೆಚ್ಚಿಗಿರುವ ಕಾರಣ ಸಿದ್ದರಾಮಯ್ಯ ಅವರು ಬಾದಾಮಿಯನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಸಿದ್ದರಾಮಯ್ಯ ಅವರ ಲೆಕ್ಕಾಚಾರವನ್ನು ವಿಜಯ ಸಂಕೇಶ್ವರ್ ಹೇಗೆ ಉಲ್ಟಾ ಮಾಡುತ್ತಾರೊ ನೋಡಬೇಕು.
-
ಮಾರ್ಚ್ 15ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
KAS ಅಭ್ಯರ್ಥಿಗಳಿಗೆ ಬಿಗ್ ಶಾಕ್ ನೀಡಿದ KPSC: 384 ಗೆಜೆಟೆಡ್ ಪ್ರೊಬೇಷನರ್ಸ್ ಸಂದರ್ಶನ ಮುಂದೂಡಿಕೆ -
ರಾಜ್ಯದಲ್ಲಿ 4,824 ಕೋಟಿ ರೂ. ಕೈಗಾರಿಕಾ ಹೂಡಿಕೆಗೆ ಸರ್ಕಾರ ಅಸ್ತು; 14,525 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ -
ಮಾರ್ಚ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ












Click it and Unblock the Notifications