Bagalkot Election: ಸತತ 5ನೇ ಬಾರಿಗೆ ಗೆಲುವು ಸಾಧಿಸಿದ ಬಿಜೆಪಿ: ಗಜಕೇಸರಿ ಯೋಗಕ್ಕೆ ಸೋಲು
ಬಾಗಲಕೋಟೆ, ಜೂನ್ 04: ಬಾಗಲಕೋಟೆ ಲೋಕಸಭಾ ಚುಣಾವಣೆಯಲ್ಲಿ 2024 ಫಲಿತಾಂಶ ಬಹುತೇಕ ಅಂತಿಮವಾಗಿದ್ದು, ಬಿಜೆಪಿಗೆ ಇಲ್ಲಿ ಭರ್ಜರಿ ಗೆಲುವಾಗಿದೆ. ತಮಗೆ ಗಜಕೇಸರಿ ಯೋಗ ಇದೆ, ನಾನು ಪ್ರಧಾನಿ ಆದರೂ ಆಗಬಹುದು ಎಂದಿದ್ದ ಕಾಂಗ್ರೆಸ್ನ ಗಜಕೇಸರಿ ಯೋಗ ಇರುವ ಅಭ್ಯರ್ಥಿಗೆ ಸೋಲಾಗಿದೆ.
2004ರಿಂದಲೂ ಗದ್ದಿಗೌಡರ ಕುಟುಂ ಬಾಗಲಕೋಟೆಯಲ್ಲಿ ಸತತವಾಗಿ ಹ್ಯಾಟ್ರಿಕ್ ಬಾರಿಸಿಕೊಂಡು ಬಂದಿದೆ. ಈ ಬಾರಿಯು ಬಿಜೆಪಿ ಅಭ್ಯರ್ಥಿ ಪಿಸಿ ಗದ್ದಿಗೌಡರ್ ಅವರು ತಮ್ಮ ವಿಕ್ಟರಿಯನ್ನು ಮುಂದುವರಿಸಿದ್ದಾರೆ. ಬಾಗಲಕೋಟೆಯಲ್ಲಿ ಬಿಜೆಪಿ ಹಿಡಿತ ತಪ್ಪಿಲ್ಲ. ಇಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತ ಎಸ್ ಪಾಟೀಲ್ ಅವರಿಗೆ 4.95 ಲಕ್ಷ ಮತಗಳು ಬಂದಿವೆ. ಇವರ ವಿರುದ್ಧ ಗೆಲುವಿನ ನಗೆ ಬೀರಿರುವ ಪಿಸಿ ಗದ್ದಿಗೌಡರ್ ಅವರಿಗೆ 5.61 ಲಕ್ಷಕ್ಕೂ ಹೆಚ್ಚು ಮತಗಳನ್ನು ಪಡೆದಿದ್ದಾರೆ.

ಬಿಜೆಪಿ ಹಾಲಿ ಸಂಸದ ಪಿಸಿ ಗದ್ದಿಗೌಡರ್ ಅವರು ಬಾಗಲಕೋಟೆಯಲ್ಲಿ 2004ರಿಂದಲೂ ಸತತವಾಗಿ ಗೆಲವು ಸಾಧಿಸಿಕೊಂಡು ಬಂದಿದ್ದಾರೆ. ಅವರು ಬಾಗಲಕೋಟೆಯಲ್ಲಿ ಬಿಜೆಪಿ ಹಿಡಿತ ಸಾಧಿಸುವಲ್ಲಿ ಪ್ರಮುಖ ಕಾರಣಿಕತೃರಾಗಿದ್ದಾರೆ.
ಗಜಕೇಸರಿಗೆ ಯೋಗದ ಅಭ್ಯರ್ಥಿಗೆ ಸೋಲು
ಸಂಯುಕ್ತ ಪಾಟೀಲ್ ಅವರಿಗೆ ಟಿಕೆಟ್ ನೀಡುವ ಮೊದಲು ಕಾಂಗ್ರೆಸ್ನಿಂದ ವೀಣಾ ಕಾಶಪ್ಪನವರ್ ಸಹ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಅವರಿಗೆ ಬಿಟ್ಟು ಸಂಯುಕ್ತಾಗೆ ನೀಡದ್ದೆ ಮುಳುವಾಯಿತಾ ಎಂಬ ಅನುಮಾನ ಕಾಡುತ್ತಿದೆ.
ಅಲ್ಲದೇ ಸಂಯುಕ್ತಾ ಪಾಟೀಲ್ ಅವರು ತಮಗೆ ಗಜಕೇಸರಿ ಯೋಗ ಇದ್ದು, ತಾವು ಪ್ರಧಾನಿ ಬೇಕಾದರೂ ಆಗಬಹುದು ಎಂದು ಮಾಧ್ಯಮಗಳ ಎದುರು ಹೇಳಿಕೆ ಕೊಟ್ಟಿದ್ದರು. ಇದು ಬಿಜೆಪಿ ನಾಯಕರಿಂದ ತೀವ್ರ ಟೀಕೆಗೆ, ಅಪಹಾಸ್ಯಕ್ಕೆ ಗುರಿಯಾಗಿತ್ತು. ಅಂತೂ ಇಂತೂ ಕ್ಷೇತ್ರದಲ್ಲಿ ಕಮಲ ಮತ್ತೆ ಅರಳಿದೆ, ಆಡಳಿತ ಪಕ್ಷ ಕಾಂಗ್ರೆಸ್ಗೆ ಆಘಾತ ಆಗಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications