ಬಾಗಲಕೋಟೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರೆಡ್ಡಿ ಸಮುದಾಯಕ್ಕೆ ಸಚಿವ ಸ್ಥಾನ ಇಲ್ಲ: ರಾಮಲಿಂಗಾ ರೆಡ್ಡಿ ಬೇಸರ

|
Google Oneindia Kannada News

ಬಾಗಲಕೋಟೆ, ಆಗಸ್ಟ್ 24: ರೆಡ್ಡಿ ಸಮುದಾಯದ ಶಾಸಕರಿಗೆ ಬಿಜೆಪಿ ಸಚಿವ ಸಂಪುಟದಲ್ಲಿ ಸ್ಥಾನ ನೀಡದೇ ಇರುವ ಬಗ್ಗೆ ಕಾಂಗ್ರೆಸ್ ಮುಖಂಡ ರಾಮಲಿಂಗಾ ರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಾಗಲಕೋಟೆಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಅವರು, ಬಿಜೆಪಿಯಲ್ಲಿ ಒಂಬತ್ತು ಮಂದಿ ರೆಡ್ಡಿ ಸಮುದಾಯದ ಶಾಸಕರಿದ್ದಾರೆ ಆದರಿಗೆ ಒಬ್ಬರಿಗೂ ಸಚಿವ ಸ್ಥಾನ ನೀಡಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಕತ್ತಿ ವರಸೆಗೆ ಮಣಿದ ಹೈಕಮಾಂಡ್, ಬಿಜೆಪಿಯ ಮತ್ತಿಬ್ಬರಿಗೆ ಸಚಿವ ಸ್ಥಾನ? ಕತ್ತಿ ವರಸೆಗೆ ಮಣಿದ ಹೈಕಮಾಂಡ್, ಬಿಜೆಪಿಯ ಮತ್ತಿಬ್ಬರಿಗೆ ಸಚಿವ ಸ್ಥಾನ?

ರಾಜಕೀಯ ಪಕ್ಷಗಳು ಎಲ್ಲ ಸಮುದಾಯವನ್ನು ಜೊತೆಗೆ ಕೊಂಡೊಯ್ಯುವ ಕಾರ್ಯ ಮಾಡಬೇಕು, ಆದರೆ ಬಿಜೆಪಿಯು ಇದಕ್ಕೆ ವ್ಯತಿರಿಕ್ತವಾಗಿ ಕೆಲಸ ಮಾಡುತ್ತಿದೆ ಎಂದು ಅವರು ಹೇಳಿದರು.

BJP Should Give Minister Post To A Reddy Caste MLA: Ramalinga Reddy

ಮುಂದಿನ ದಿನದಲ್ಲಿ ಮಾಡುವ ಸಂಪುಟ ವಿಸ್ತರಣೆ ಅವಧಿಯಲ್ಲಿ ರೆಡ್ಡಿ ಸಮುದಾಯಕ್ಕೆ ಅವಕಾಶ ನೀಡಬಹುದೇನೋ ಕಾದು ನೋಡಲಿದ್ದೇವೆ ಎಂದು ರಾಮಲಿಂಗಾ ರೆಡ್ಡಿ ಹೇಳಿದರು.

ಪ್ರಸ್ತುತ ರಾಜಕೀಯದ ಬಗ್ಗೆ ಮಾತನಾಡಿದ ಅವರು, ರಾಜಕೀಯವೆಂಬುದು ಸಹ ಕಾಲಚಕ್ರದಂತೆ ಮೇಲೇರಿದ್ದವನು, ಕೆಳಗೆ ಇಳಿಯುತ್ತಾನೆ, ಕೆಳಗೆ ಇದ್ದವ ಮೇಲೆ ಹೋಗುತ್ತಾನೆ ಎಂದು ಅವರು ಹೇಳಿದರು.

ಅತೃಪ್ತ ಶಾಸಕರಿಗೆ ಮಂತ್ರಿಗಿರಿ: ಯಾರಿಗೆ ಒಲಿಯಲಿದೆ ಅದೃಷ್ಟ? ಅತೃಪ್ತ ಶಾಸಕರಿಗೆ ಮಂತ್ರಿಗಿರಿ: ಯಾರಿಗೆ ಒಲಿಯಲಿದೆ ಅದೃಷ್ಟ?

ಸಿದ್ದರಾಮಯ್ಯ-ದೇವೇಗೌಡ ನಡುವಿನ ವಾಗ್ಯುದ್ಧದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮಳೆ ನಿಂತ ಮೇಲೆ ಉದುರುವ ಹನಿಗಳಂತೆ ಅವು, ಮೈತ್ರಿ ಸರ್ಕಾರ ಬೀಳಲು ಬೇರೆ-ಬೇರೆ ಕಾರಣಗಳಿವೆ ಅಗತ್ಯ ಬಂದಾಗ ಅದರ ಬಗ್ಗೆ ಮಾತನಾಡುತ್ತೇನೆ ಎಂದು ಅವರು ಹೇಳಿದರು.

English summary
Congress leader Ramalinga Reddy said BJP neglecting Reddy community by not giving minister post to any Reddy MLAs.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X