ಜಮಖಂಡಿಯಲ್ಲಿ ಕಾಂಗ್ರೆಸ್ಗೆ ಜಯಭೇರಿ: ಅಪ್ಪನನ್ನು ಮೀರಿಸಿದ ಮಗ
ಜಮಖಂಡಿ, ನವೆಂಬರ್ 06: ಜಮಖಂಡಿ ಉಪಚುನಾವಣೆ ಕಣದಲ್ಲಿ ಕಾಂಗ್ರೆಸ್ನ ಆನಂದ್ ನ್ಯಾಮಗೌಡ ಅವರು ಭರ್ಜರಿಯಾಗಿ ಜಯಗಳಿಸಿದ್ದಾರೆ. ಆ ಮೂಲಕ ಅವರ ತಂದೆ ಸಿದ್ದು ನ್ಯಾಮಗೌಡ ಅವರನ್ನು ಅವರು ಮೀರಿಸಿದ್ದಾರೆ.
ಹೌದು, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಸ್ಪರ್ಧಿಸಿದ್ದ ಸಿದ್ದು ನ್ಯಾಮಗೌಡ ಅವರು ಬಿಜೆಪಿಯ ಶ್ರೀಕಾಂತ ಕುಲಕರ್ಣಿ ಅವರನ್ನು ಕೇವಲ 2795 ಮತಗಳ ಅಂತರದಿಂದ ಸೋಲಿಸಿದ್ದರು. ಆ ನಂತರ ಅವರು ಅಪಘಾತವೊಂದರಲ್ಲಿ ಅಕಾಲಿಕ ಮೃತ್ಯಗೆ ಈಡಾದರು ಹಾಗಾಗಿಯೇ ಈ ಉಪಚುನಾವಣೆ ನಡೆದಿತ್ತು.
ಚುನಾವಣೆಯಲ್ಲಿ ಅಪ್ಪನನ್ನು ಮೀರಿಸಿರುವ ಆನಂದ್ ನ್ಯಾಮಗೌಡ 39,484 ಮತಗಳ ಭಾರಿ ಅಂತರದಿಂದ ಸೋಲಿಣಿಸಿದ್ದಾರೆ. ತಂದೆ ಸಿದ್ದು ನ್ಯಾಮಗೌಡಗೆ ಬಹಳಾ ಪೈಪೋಟಿ ನೀಡಿದ್ದ ಬಿಜೆಪಿಯ ಶ್ರೀಕಾಂತ ಕುಲಕರ್ಣಿ ಮಗನ ಮುಂದೆ ಸುಲಭವಾಗಿ ಮಂಡಿ ಊರಿದ್ದಾರೆ.

ಕೆಲಸ ಮಾಡಿದ ಅನುಕಂಪದ ಅಲೆ
ಎರಡೂ ಪಕ್ಷಗಳು ಅನುಕಂಪದ ಅಲೆಯನ್ನೇ ಮುಖ್ಯವಾಗಿಸಿಕೊಂಡು ಕಣಕ್ಕೆ ಇಳಿದಿದ್ದವು. ಕಾಂಗ್ರೆಸ್ಗೆ ಸಿದ್ದು ನ್ಯಾಮಗೌಡ ಅವರ ಅಕಾಲಿಕ ಸಾವಾದರೆ. ಕುಲಕರ್ಣಿ ಅವರಿಗೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದ ಅನುಕಂಪ. ಆದರೆ ಕೊನೆಗೆ ಆನಂದ್ ನ್ಯಾಮಗೌಡ ಅವರ ಕಡೆಗೆ ಕ್ಷೇತ್ರದ ಮತದಾರರು ಕರುಣೆ ತೋರಿದ್ದಾರೆ. ಯುವ ನಾಯಕನ ಕಾರ್ಡ್ ಕೂಡ ಇಲ್ಲಿ ಕೆಲಸ ಮಾಡಿದೆ ಎನ್ನಲಾಗುತ್ತಿದೆ.

ಕೊನೆ ಚುನಾವಣೆ ಎಂದಿದ್ದ ಕುಲಕರ್ಣಿ
ಆನಂದ್ ನ್ಯಾಮಗೌಡ ಅನುಕಂಪದ ಕಾರ್ಡ್ ಮುಂದೆ ಮಾಡುತ್ತಾರೆಂದು ತಿಳಿದಿದ್ದ ಬಿಜೆಪಿಯ ಶ್ರೀಕಾಂತ ಕುಲಕರ್ಣಿ ಅವರು ತಾವು ಸಹ ಇದು ತಮ್ಮ ಕೊನೆಯ ಚುನಾವಣೆ ಎಂದು ಹೇಳಿಕೊಂಡಿದ್ದರು. ಆದರೆ ಚುನಾವಣೆಯಲ್ಲಿ ಸೋಲು ಅನುಭವಿಸುವ ಮೂಲಕ ಅವರ ರಾಜಕೀಯ ಜೀವನ ಬಹುತೇಕ ಅಂತ್ಯವಾಗಿದೆ.

ಅವಕಾಶ ಕೈಚೆಲ್ಲಿಕೊಂಡ ಬಿಜೆಪಿ
ಕಳೆದ ಚುನಾವಣೆಯಲ್ಲಿ ಬಿಜೆಪಿಯ ಶ್ರೀಕಾಂತ ಕುಲಕರ್ಣಿ ಎದುರು ಬಿಜೆಪಿಯ ಬಂಡಾಯ ಅಭ್ಯರ್ಥಿ ಸಂಗಮೇಶ ನಿರಾಣಿ ಸ್ಪರ್ಧಿಸಿದ್ದರು. 24,461 ಮತಗಳನ್ನು ಪಡೆದಿದ್ದ ಅವರು ಬಿಜೆಪಿ ಗೆಲುವಿಗೆ ಅಡ್ಡಗಾಲು ಹಾಕಿದ್ದರು. ಆದರೆ ಈ ಬಾರಿ ಯಡಿಯೂರಪ್ಪ ಅವರು ಸಂಧಾನದ ಮೂಲಕ ಸಂಗಮೇಶ ನಿರಾಣಿ ಅವರು ಬಿಜೆಪಿಗೆ ಕೆಲಸ ಮಾಡುವಂತೆ ಮಾಡಿದ್ದರೂ ಆದರೂ ಸಹ ಬಿಜೆಪಿ ಇಲ್ಲಿ ಸೋಲನ್ನಪ್ಪಿರುವುದು ಸೋಜಿಗ.

ಆನಂದ್ಗೆ ಸಿದ್ದರಾಮಯ್ಯ-ಪರಮೇಶ್ವರ್ ಬಲ
ಆನಂದ್ ನ್ಯಾಮಗೌಡಗೆ ಸಿದ್ದರಾಮಯ್ಯ ಹಾಗೂ ಪರಮೇಶ್ವರ್ ಅವರ ಬಲ ಬಹುವಾಗಿ ಇತ್ತು. ಡಿಸಿಎಂ ಪರಮೇಶ್ವರ್ ಅವರು ಕ್ಷೇತ್ರದ ಉಸ್ತುವಾರಿ ವಹಿಸಿದ್ದರೆ ಸಿದ್ದರಾಮಯ್ಯ ಅವರು ಸ್ಟಾರ್ ಪ್ರಚಾರಕರಾಗಿದ್ದರು. ಸಿದ್ದರಾಮಯ್ಯ ಅವರು ಶಾಸಕರಾಗಿರುವ ಬಾದಾಮಿ ಕ್ಷೇತ್ರದ ನೆರೆಯ ಕ್ಷೇತ್ರ ಜಮಖಂಡಿ ಆಗಿದ್ದ ಕಾರಣ ಸಿದ್ದರಾಮಯ್ಯ ಅವರು ಜಮಖಂಡಿ ಮೇಲೆ ಹೆಚ್ಚಿನ ಆಸ್ಥೆ ತೋರಿ ಪ್ರಚಾರ ಮಾಡಿದ್ದರು. ಅವರ ಶ್ರಮ ವ್ಯರ್ಥವಾಗಿಲ್ಲ.

ಯಾರಿಗೆ ಎಷ್ಟು ಮತ?
ಕಾಂಗ್ರೆಸ್ನ ಆನಂದ್ ನ್ಯಾಮಗೌಡ ಅವರು ಒಟ್ಟು 97,017 ಮತಗಳನ್ನು ಪಡೆದಿದ್ದರೆ ಶ್ರೀಕಾಂತ್ ಕುಲಕರ್ಣಿ ಅವರು 57,537 ಮತಗಳನ್ನು ಗಳಿಸಿಕೊಂಡಿದ್ದಾರೆ. ಆನಂದ್ ನ್ಯಾಮಗೌಡ ಅವರು ಒಟ್ಟು 39,484 ಮತಗಳ ಅಂತರದಿಂದ ಗೆದ್ದಿದ್ದಾರೆ. ಮೊದಲ ಬಾರಿಗೆ ಚುನಾವಣೆಗೆ ನಿಂತಿದ್ದ ಆನಂದ್ ಜಾಕ್ಪಾಟ್ ಹೊಡೆದಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications