Chalukya Utsav: 10 ವರ್ಷಗಳ ನಂತರ ರಾಜ್ಯದಲ್ಲಿ 'ಚಾಲುಕ್ಯ ಉತ್ಸವ'ಕ್ಕೆ ಸರ್ಕಾರ ಸಜ್ಜು
ಬೆಂಗಳೂರು, ಮಾರ್ಚ್ 18: ಒಡಿಶಾ ರಾಜ್ಯದಲ್ಲಿ ಐದು ದಿನಗಳ ಕಾಲ ನಡೆಯುವ ಪ್ರಸಿದ್ಧವಾದ 'ಕೋನಾರ್ಕ್ ಉತ್ಸವ' ಮಾದರಿಯಲ್ಲೇ ಉತ್ತರ ಕರ್ನಾಟಕದಲ್ಲಿ 'ಚಾಲುಕ್ಯ ಉತ್ಸವ'ವನ್ನು ನಡೆಸಲಾಗುವುದು. ಈ ಕುರಿತು ಮಂಗಳವಾರ ಕನ್ನಡ ಮತ್ತು ಸಂಸ್ಕೃತಿ ಸಚಿವ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.
ಚಾಲುಕ್ಯ ಉತ್ಸವ ಆಚರಣೆ ಹಿನ್ನೆಲೆಯಲ್ಲಿ ಸಚಿವ ಶಿವರಾಜ್ ಎಸ್.ತಂಗಡಗಿ ಅವರ ನೇತೃತ್ವದಲ್ಲಿ ಬಾಗಲಕೋಟೆಯ ಜನಪ್ರತಿನಿಧಿಗಳ ಸಭೆ ಮಂಗಳವಾರ ವಿಕಾಸಸೌಧದಲ್ಲಿ ನಡೆಯಿತು. ಬಜೆಟ್ ಮೇಲಿನ ಅಧಿವೇಶನದಲ್ಲಿ ಸಂದರ್ಭದಲ್ಲಿ ಉತ್ತರ ಕರ್ನಾಟಕದ ಪ್ರಸಿದ್ಧ ಉತ್ಸವ ಕುರಿತು ಪ್ರಮುಖ ಸಭೆ ನಡೆಯಿತು.

ಸಭೆಯಲ್ಲಿ ಮಾತನಾಡಿದ ಸಚಿವ ಶಿವರಾಜ್ ತಂಗಡಗಿ ಅವರು, 2015ರ ನಂತರ ಚಾಲುಕ್ಯ ಉತ್ಸವ ಆಚರಣೆ ನಡೆದಿಲ್ಲ. ಇತರ ಉತ್ಸವಗಳಂತೆ ಚಾಲುಕ್ಯ ಉತ್ಸವವೂ ಆಚರಣೆ ಆಗುವ ಬದಲಿಗೆ ಇದನ್ನೊಂದು ರಾಷ್ಟ್ರೀಯ ಕಲೆ ಮತ್ತು ಸಾಂಸ್ಕೃತಿಕ ಉತ್ಸವವನ್ನಾಗಿ ರೂಪಿಸಬೇಕು. ಇಡೀ ರಾಷ್ಟ್ರದ ಗಮನ ಸೆಳೆಯುವಂತೆ ಉತ್ಸವ ಆಚರಣೆಯಾಗಬೇಕು ಎಂದು ಅವರು ಹೇಳಿದರು. ಸದ್ಯ ಯಾವಾಗ ಈ ಉತ್ಸವ ನಡೆಯುತ್ತದೆ. ದಿನಾಂಕ, ಆರಂಭದ ಕುರಿತು ಇನ್ನಷ್ಟೇ ತಿಳಿಯಬೇಕಿದೆ.
ಮೂರು ದಿನಗಳ ಚಾಲುಕ್ಯ ಉತ್ಸವದಲ್ಲಿ ಏನಿರಲಿದೆ?
ಉತ್ಸವದಲ್ಲಿ ಸಂಗೀತ, ನೃತ್ಯ ಹಾಗೂ ಜಾನಪದ ಕಲಾ ವೈಭವಗಳನ್ನು ಪ್ರತಿಬಿಂಬಿಸುವಂತಹ ಕಾರ್ಯಕ್ರಮಗಳು ಆಯೋಜನೆಯಾಗಲಿದೆ. ಒಟ್ಟು ಮೂರು ದಿನಗಳ ಕಾಲ ನಡೆಯುವ ಮಹತ್ವ ಉತ್ಸವ ಇದಾಗಿದೆ. ಈ ಉತ್ಸವಕ್ಕೆ ಬಾದಾಮಿಯಲ್ಲಿ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ. ಎರಡನೇ ದಿನ ಪಟ್ಟದಕಲ್ಲು ಹಾಗೂ ಸಮಾರೋಪ ಸಮಾರಂಭ ಐಹೊಳೆಯಲ್ಲಿ ನಡೆಯಲಿದೆ. ವರ್ಷಾಂತ್ಯಕ್ಕೆ ಉತ್ಸವ ಆಚರಿಸಲು ನಿರ್ಧರಿಸಲಾಗಿದೆ. ಮುಂದಿನ ಸಭೆಯಲ್ಲಿ ದಿನಾಂಕವನ್ನು ನಿಗದಿಪಡಿಸಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು ಎಂದು ಅವರು ವಿವರಿಸಿದರು.
ಶಾಸಕ ವಿಜಯಾನಂದ ಕಾಶಪ್ಪನವರ್ ಮಾತನಾಡಿ, ಇಮ್ಮಡಿ ಪುಲಿಕೇಶಿ ಕರ್ನಾಟಕದ ಚರಿತ್ರೆಯಲ್ಲಿ ತನ್ನ ಶೌರ್ಯ, ಸಾಹಸ ಹಾಗೂ ಕಲಾವಂತಿಕೆ ಮುಂತಾದ ಸಂಗತಿಗಳಿಂದಾಗಿ ಅಜರಾಮರನಾಗಿದ್ದನು. ಇಮ್ಮಡಿ ಪುಲಿಕೇಶಿಯ ಚರಿತ್ರೆಯನ್ನು ಉತ್ಸವದಲ್ಲಿ ಸಾರುವ ಕೆಲಸವಾಗಬೇಕು ಎಂದು ಸಲಹೆ ನೀಡಿದರು.

ಕಳೆದ ಹತ್ತು ವರ್ಷಗಳಿಂದ ಚಾಲುಕ್ಯ ಉತ್ಸವವನ್ನು ಆಚರಣೆ ಮಾಡಿಲ್ಲ. ಬಾಗಲಕೋಟೆ ಜಿಲ್ಲೆ ರಾಜ್ಯದ ಐತಿಹಾಸಿಕ ಪ್ರವಾಸೋದ್ಯಮ ಹಿನ್ನೆಲೆಯುಳ್ಳ ಜಿಲ್ಲೆಯಾಗಿದ್ದು, ಈ ಬಾರಿ ಉತ್ಸವವನ್ನು ರಾಷ್ಟ್ರದ ಗಮನ ಸೆಳೆಯುವಂತೆ ಆಚರಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಇದರ ಜೊತೆಗೆ ಬಸವಣ್ಣನವರ ತತ್ವಗಳನ್ನುನ್ನು ಪಸರಿಸಲಾಗುತ್ತದೆ ಎಂದರು.
ಚಾಲುಕ್ಯ ಉತ್ಸವ ಬಗ್ಗೆ ನಿಮಗೆ ಗೊತ್ತೆ?
ಉತ್ತರ ಕರ್ನಾಟಕದ ಐತಿಹಾಸಿಕ ನಗರಗಳಾದ ಬಾದಾಮಿ ಮತ್ತು ಐಹೊಳೆಯಲ್ಲಿ ನಡೆಯುವ ವಾರ್ಷಿಕ ಸಾಂಸ್ಕೃತಿಕ ಮತ್ತು ಪರಂಪರೆಯ ಉತ್ಸವವೇ 'ಚಾಲುಕ್ಯ ಉತ್ಸವವು' ಆಗಿದೆ. ಇಲ್ಲಿ ನಾಡಿನ ಕಲೆ, ನೃತ್ಯ, ಸಂಗೀತ ಮತ್ತು ನಾಟಕಗಳ ಪ್ರದರ್ಶನ ನಡೆಯುತ್ತದೆ. ಇತರರಿಗೂ ನಾಡಿನ ವೈವಿಧ್ಯತೆ ಪರಿಚಯವಾಗುತ್ತದೆ. ಚಾಲುಕ್ಯ ಉತ್ಸವವನ್ನು ಸಾಮಾನ್ಯವಾಗಿ ಫೆಬ್ರವರಿ ಆರಂಭದಲ್ಲಿ ಎರಡು ಅಥವಾ ಮೂರು ದಿನಗಳ ಕಾರ್ಯಕ್ರಮವಾಗಿ ಆಚರಿಸಲಾಗುತ್ತದೆ. ಆದರೆ ಕಳೆದ 2015ರಲ್ಲಿ ನಡೆದಿದ್ದೇ ಕೊನೆ. ಅದಾದ ಬಳಿಕ ಹತ್ತು ವರ್ಷಗಳ ನಂತರ ಈಗ ಮತ್ತೆ ನಡೆಸಲು ಸರ್ಕಾರ ಸಜ್ಜಾಗಿದೆ.
ಏನಿದು ಪ್ರಸಿದ್ಧ ಕೋನಾರ್ಕ್ ಉತ್ಸವ?
ಕೋನಾರ್ಕ್ ಡ್ಯಾನ್ಸ್ ಫೆಸ್ಟಿವಲ್ 05 ದಿನಗಳ ನೃತ್ಯ ಉತ್ಸವ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಆ ರಾಜ್ಯದಲ್ಲಿ ಇದು ಪ್ರತಿ ವರ್ಷ ಡಿಸೆಂಬರ್ ತಿಂಗಳಿನಲ್ಲಿ ಹೆಚ್ಚಾಗಿ 1 ರಿಂದ 5 ರವರೆಗೆ ಭಾರತದ ಒಡಿಶಾದ ಕೋನಾರ್ಕ್ನಲ್ಲಿರುವ ಸೂರ್ಯ ದೇವಾಲಯದ ಬಳಿ ನಡೆಯುತ್ತದೆ. ಇದು ಒಡಿಶಾ ರಾಜ್ಯದಲ್ಲೇ ನಡೆಯುವ ದೊಡ್ಡ ನೃತ್ಯ ಉತ್ಸವಗಳಲ್ಲಿ ಒಂದಾಗಿದೆ.
ಇಂದಿನ ಸಭೆಯಲ್ಲಿ ಅಬಕಾರಿ ಸಚಿವರೂ ಆದ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ, ಮಾಜಿ ಸಚಿವ ಎಚ್.ವೈ.ಮೇಟಿ, ವಿಧಾನ ಪರಿಷತ್ ಸದಸ್ಯರಾದ ಹನುಮಂತ ನಿರಾಣಿ, ಪಿ.ಎಚ್.ಪೂಜಾರ್, ಮಾಜಿ ಸಚಿವ ಉಮಾಶ್ರೀ, ಇಲಾಖೆ ನಿರ್ದೇಶಕಿ ಗಾಯಿತ್ರಿ ಹಾಗೂ ಅಧಿಕಾರಿಗಳು ಸಭೆಯಲ್ಲಿದ್ದರು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications