ಡ್ರೋನ್ ಕ್ಯಾಮರಾದಲ್ಲಿ ಸೆರೆಯಾಯ್ತು ಊರಿನ ಮಧ್ಯವಿರುವ ಕೆರೆಯಲ್ಲಿನ ಮೊಸಳೆ!
ಬಾಗಲಕೋಟೆ, ಅಕ್ಟೋಬರ್ 6: ಸಾಮಾನ್ಯವಾಗಿ ನದಿ ದಡದಲ್ಲಿ ಅಥವಾ ನದಿ ತೀರದ ಗ್ರಾಮದಲ್ಲಿ ಮೊಸಳೆ ಪ್ರತ್ಯಕ್ಷವಾಗುವುದನ್ನು ನೋಡಿರುತ್ತೇವೆ. ಆದರೆ ಊರ ಮಧ್ಯದಲ್ಲಿರುವ ಕೆರೆಯಲ್ಲಿ ಮೊಸಳೆಯೊಂದು ಪ್ರತ್ಯಕ್ಷ ಆಗಿದ್ದು, ಗ್ರಾಮಸ್ಥರಲ್ಲಿ ಆತಂಕವನ್ನುಂಟು ಮಾಡಿದೆ.
ಬಾಗಲಕೋಟೆ ತಾಲ್ಲೂಕಿನ ಮುರನಾಳ ಪುನರ್ವಸತಿ ಕೇಂದ್ರದಲ್ಲಿರುವ ಕೆರೆಯಲ್ಲಿ ಮೊಸಳೆ ಕಾಣಿಸಿಕೊಂಡು ಗ್ರಾಮಸ್ಥರಿಗೆ ಭಯದ ಜೊತೆಗೆ ಅಚ್ಚರಿ ಮೂಡಿಸಿದೆ. ಗ್ರಾಮದ ಯುವಕರು ಡ್ರೋನ್ ಮೂಲಕ ಕೆರೆಯನ್ನು ಚಿತ್ರೀಕರಿಸುವಾಗ ಮೊಸಳೆ ಡ್ರೋನ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ತಕ್ಷಣ ಯುವಕರು ಮೊಸಳೆ ಹೋಗುವುದನ್ನು ಕೆಲವು ಸೆಕೆಂಡುಗಳವರೆಗೆ ಸೆರೆ ಹಿಡಿದಿದ್ದಾರೆ. ಈ ಕೆರೆ ಊರ ಮದ್ಯದಲ್ಲೇ ಇರುವುದರಿಂದ ಗ್ರಾಮಸ್ಥರಲ್ಲಿ ಮೊಸಳೆ ಭಯ ಕಾಡತೊಡಗಿದೆ. ನಿತ್ಯ ಗ್ರಾಮದ ದನಕರುಗಳು ಇದೆ ಕೆರೆಯಲ್ಲೇ ನೀರು ಕುಡಿಯುತ್ತಿದ್ದವು. ಆದರೆ ಮೊಸಳೆ ಇವರೆಗೂ ಯಾವುದೇ ಹಸು-ಕರು, ಮೇಕೆ ಕುರಿ ಸೇರಿದಂತೆ ಯಾವುದೇ ಪಶುಗಳನ್ನು ಕೊಂದಿರುವ ಬಗ್ಗೆ ಯಾರಿಗೂ ಮಾಹಿತಿಯಿಲ್ಲ. ಹಾಗಾಗಿ ಮೊಸಳೆ ಇರುವ ವಿಚಾರ ಯಾರಿಗೂ ತಿಳಿದಿರಲಿಲ್ಲ.

ಇದೀಗ ಡ್ರೋನ್ನಲ್ಲಿ ಮೊಸಳೆ ಕಾಣಿಸಿಕೊಂಡಿದ್ದರಿಂದಾಗಿ ಗ್ರಾಮದ ಜನತೆಗೆ ಅಚ್ಚರಿ ಜೊತೆಗೆ ಆತಂಕವನ್ನುಂಟು ಮಾಡಿದೆ. ಅದೃಷ್ಟವಶಾತ್ ಕೆರೆಗೆ ಯಾರೂ ಕೂಡ ಇಳಿಯುತ್ತಿರಲಿಲ್ಲ. ಕೇವಲ ದನಕರುಗಳ ಬಳಕೆಗೆ ಮಾತ್ರ ಸಿಮೀತವಾಗಿತ್ತು. ಇನ್ನು ಅಚ್ಚರಿಯ ವಿಷಯವೆಂದರೆ ಊರಿನ ಮಧ್ಯೆ ಇರುವ ಕೆರೆಗೆ ಮೊಸಳೆ ಎಲ್ಲಿಂದ ಬಂತು ಎನ್ನುವುದೇ ಎಲ್ಲರ ಪ್ರಶ್ನೆಯಾಗಿದೆ.
ಕೆರೆಗೆ ನದಿ ನೀರು ಬರಲ್ಲ. ಅಲ್ಲದೇ ನದಿ ಸಹ ಗ್ರಾಮದಿಂದ ಹತ್ತು, ಹದಿನೈದು ಕಿಲೊ ಮೀಟರ್ ದೂರದಲ್ಲಿ ಇದೆ. ಹೀಗಾಗಿ ಗ್ರಾಮಸ್ಥರೆಲ್ಲಾ ಈ ಮೊಸಳೆ ಕೆರೆಗೆ ಹೇಗೆ ಬಂತು ಎಂಬುದರ ಬಗ್ಗೆ ಚರ್ಚೆ ಮಾಡುತ್ತಿದ್ದಾರೆ. ಸದ್ಯ ಗ್ರಾಮಸ್ಥರು ಈ ವಿಚಾರವನ್ನು ಅರಣ್ಯಾಧಿಕಾರಿಗಳ ಗಮನಕ್ಕೆ ತಂದಿದ್ದು, ಶೀಘ್ರದಲ್ಲಿ ಕಾರ್ಯಚರಣೆ ನಡೆಸಿ ,ಮೊಸಳೆಯನ್ನು ನದಿಗೆ ಬಿಡುವ ಕಾರ್ಯಕ್ಕೆ ಮುಂದಾಗುವುದಾಗಿ ತಿಳಿಸಿದ್ದಾರೆ.
ಕನಕಗಿರಿ ಕೆರೆಯಲ್ಲಿ ಮೊಸಳೆ ಪ್ರತ್ಯಕ್ಷ
ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಕೆ.ಕಾಟಾಪುರ ಗ್ರಾಮದ ಕೆರೆಯಲ್ಲಿ ಬೃಹತ್ ಮೊಸಳೆ ಪ್ರತ್ಯಕ್ಷವಾಗಿದ್ದು, ಜನರ ಆತಂಕಕ್ಕೆ ಕಾರಣವಾಗಿದೆ. ಯುವಕರು ಮೊಬೈಲ್ನಲ್ಲಿ ವಿಡಿಯೋ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ಹರಿದಾಡುತ್ತಿದೆ.

ಸರಕಾರದ ಕೆರೆ ತುಂಬಿಸುವ ಯೋಜನೆಯಡಿ ನೀರು ತುಂಬಿಸಲಾಗಿತ್ತು. ಮೀನುಗಾರರು ಕೆರೆಯಲ್ಲಿ ಮೀನುಗಾರಿಕೆ ಮಾಡುತ್ತಿದ್ದಾರೆ. ದನಗಾಹಿ, ಕುರಿಗಾಹಿಗಳಿಗೂ ಸಹಾ ಬಳಕೆಯಾಗುತ್ತಿದೆ. ಯುವಕರು, ಮಕ್ಕಳು ಕೆರೆಯಲ್ಲಿ ಈಜಾಡುತ್ತಾರೆ. ಆದರೆ ದಿಢೀರ್ ಮೊಸಳೆ ಕಾಣಿಸಿಕೊಂಡಿರುವುದು ಗ್ರಾಮಸ್ಥರಲ್ಲಿ ಭಯವನ್ನುಂಟು ಮಾಡಿದೆ.
ಗ್ರಾಮ ಪಂಚಾಯಿತಿಯಿಂದ ಡಂಗುರ ಸಾರಲಾಗಿದೆ. ಕೆರೆಯಲ್ಲಿ ಮೊಸಳೆಯಿರುವ ಕಾರಣ ನೀರಿಗೆ ಇಳಿಯದಂತೆ, ಭಿತ್ತಿ ಪತ್ರಗಳನ್ನು ಹಚ್ಚಿ ಜಾಗೃತಿ ಮೂಡಿಸಲಾಗಿದೆ. ಅನಾಹುತಕ್ಕೂ ಮುನ್ನ ಅರಣ್ಯ ಇಲಾಖೆ ಎಚ್ಚೆತ್ತು, ಮೊಸಳೆ ಹಿಡಿದು ಸ್ಥಳಾಂತರಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications