ಕಾಂಗ್ರೆಸ್ ಗೆಲುವಿನ ಮೂಲಕ ಸಿದ್ದು ನ್ಯಾಮಗೌಡ ಕನಸು ನನಸು: ಡಿಸಿಎಂ
ಬೆಂಗಳೂರು, ಅಕ್ಟೋಬರ್ 30: ಜಮಖಂಡಿ ಶಾಸಕರಾಗಿದ್ದ ದಿವಂಗತ ಸಿದ್ದು ನ್ಯಾಮಗೌಡ ಅವರು ಜಮಖಂಡಿಯನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಮಾಡುವ ಕನಸನ್ನು ಹೊಂದಿದ್ದರು, ಆ ಕನಸು ನನಸಾಗಬೇಕಾದರೆ ಅವರ ಪುತ್ರ ಆನಂದ ನ್ಯಾಮಗೌಡ ಅವರಿಗೆ ಮತ ಹಾಕಬೇಕು ಎಂದು ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ ಹೇಳಿದರು.
ಭವಿಷ್ಯದಲ್ಲಿ ಜಮಖಂಡಿಯನ್ನು ಜಿಲ್ಲೆಯನ್ನಾಗಿ ಮಾಡುವ ದೂರಾಲೋಚನೆ ಹೊಂದಿದ್ದ ಸಿದ್ದು ನ್ಯಾಮಗೌಡರು ಈ ಭಾಗದಲ್ಲಿ ದೊಡ್ಡ ಕಚೇರಿ ನಿರ್ಮಿಸಿದ್ದಾರೆ. ಅವರ ಕನಸನ್ನು ನನಸು ಮಾಡಲು ಆನಂದ ನ್ಯಾಮಗೌಡರಿಗೆ ಅವಕಾಶ ನೀಡಬೇಕು ಎಂದು ಪರಮೇಶ್ವರ ಸಾರ್ವಜನಿಕರಲ್ಲಿ ಮತಯಾಚನೆ ಮಾಡಿದ್ದಾರೆ.
ಜಮಖಂಡಿಯಲ್ಲಿ ಮಂಗಳವಾರವೂ ವಿವಿಧ ಬೀದಿಗಳಲ್ಲಿ ರ್ಯಾಲಿ ನಡೆಸಿ, ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಸಿದ್ದು ನ್ಯಾಮಗೌಡ ಅವರು ಈ ಕ್ಷೇತ್ರಕ್ಕೆ ಸಾಕಷ್ಟು ಕೆಲಸ ಮಾಡಿದ್ದಾರೆ. ಬಿಜೆಪಿಯ ಕುಲಕರ್ಣಿ ಅವರು ಕೊನೆಬಾರಿ ನಿಲ್ಲುತ್ತಿದ್ದೇನೆ ಎಂದು ಹೇಳಿಕೊಂಡು ಮತ ಕೇಳುತ್ತಿದ್ದಾರೆ.

70 ವರ್ಷದ ತರುಣ ಕುಲಕರ್ಣಿಗೆ ಆರು ಬಾರಿ ಸ್ಪರ್ಧೆ ಮಾಡಿ ಕೇವಲ ಒಂದೇ ಅವಧಿ ಗೆದ್ದವರು. ಆದರೆ ಅವರ ಐದು ವರ್ಷದ ಸಾಧನೆ ಮಾತ್ರ ಶೂನ್ಯ. ಸಿದ್ದು ನ್ಯಾಮಗೌಡರು ಹಾಗೂ ಕುಲಕರ್ಣಿ ಇಬ್ಬರ ಕೆಲಸ ಕಾರ್ಯಗಳನ್ನು ಪಟ್ಟಿ ಮಾಡಿದರೆ ಯಾರು ಹೆಚ್ಚು ಕೆಲಸ ಮಾಡಿದ್ದಾರೆ ಎಂಬ ಸತ್ಯ ಜನರಿಗೆ ಅರಿವಾಗಲಿದೆ. ಸಿದ್ದು ನ್ಯಾಮಗೌಡ ಅವರ ಮಾದರಿಯಲ್ಲೇ ಅವರ ಮಗ ಅಭಿವೃದ್ಧಿ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ. ಇವರಿಗೆ ಬೆನ್ನೆಲುಬಾಗಿ ನಾನು ನಿಲ್ಲುತ್ತೇನೆ ಎಂದರು.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications