ಕಾರು ಅಪಘಾತ: ಡಿಸಿಎಂ ಲಕ್ಷಣ್ ಸವದಿ ಪುತ್ರ ಚಿದಾನಂದ್ ಹೇಳಿದ್ದೇನು?
ಬಾಗಲಕೋಟೆ, ಜುಲೈ 06: ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಪುತ್ರ ಚಿದಾನಂದ್ ಕಾರು ಅಪಘಾತದ ಕುರಿತು ಮಾಹಿತಿ ನೀಡಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮ ಕ್ರಾಸ್ ಬಳಿಯ ಚಿತ್ರದುರ್ಗ-ಸೊಲ್ಹಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ.
ಕೊಡ್ಲೆಪ್ಪ ಬೋಳಿ ಮೃತ ಬೈಕ್ ಸವಾರ. ಕುಡ್ಲೆಪ್ಪ ಹೊಲದಿಂದ ಮನೆಗೆ ಹಿಂದಿರುಗುವಾಗ ಅಪಘಾತ ಸಂಭವಿಸಿದೆ. ಕಾರ್ ಡಿಕ್ಕಿಯಾಗುತ್ತಿದ್ದಂತೆ ಕೂಡ್ಲೆಪ್ಪ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೂಡ್ಲೆಪ್ಪ ಸಾವನ್ನಪ್ಪಿದ್ದಾರೆ.

ಏಕಾಏಕಿ ಬೈಕ್ ಅಡ್ಡಬಂದಿದ್ದರಿಂದ ಅಪಘಾತ ಸಂಭವಿಸಿದೆ ಎಂದು ಚಿದಾನಂದ್ ಹೇಳಿದ್ದಾರೆ. ಅಂಜನಾದ್ರಿ ಬೆಟ್ಟದಿಂದ ಹಿಂದಿರುಗುವಾಗ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಒಟ್ಟು ಎರಡು ಕಾರುಗಳಲ್ಲಿ ನಾವು 10 ಜನ ಅಂಜನಾದ್ರಿ ಬೆಟ್ಟಕ್ಕೆ ಹೋಗಿದ್ದೆವು.
ನನ್ನ ಕಾರ್ ಸುಮಾರು 30 ಕಿಲೋ ಮೀಟರ್ ದೂರದಲ್ಲಿತ್ತು, ಹಿಂದಿನಿಂದ ಬರುತ್ತಿದ್ದ ನನ್ನ ಕಾರ್ ಅಪಘಾತಕ್ಕೆ ಒಳಗಾಗಿದ್ದು, ಅದರಲ್ಲಿ ಸ್ನೇಹಿತರಿದ್ದರು. ನಮ್ಮ ಚಾಲಕನೇ ಕಾರ್ ಡ್ರೈವ್ ಮಾಡುತ್ತಿದ್ದ.
ಅಪಘಾತವಾದ ಕೂಡಲೇ ಚಾಲಕ ನನಗೆ ಫೋನ್ ಮಾಡಿದರು. ಆಗ ಕೂಡಲೇ ಬೈಕ್ ಸವಾರನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹಾಗೆಯೇ ಸ್ಥಳೀಯ ಪೊಲೀಸ್ ಠಾಣೆಗೆ ಮಾತನಾಡಿದ್ದೇನೆ. ನಮ್ಮ ಸ್ನೇಹಿತರಿಬ್ಬರಿಗೆ ಆಸ್ಪತ್ರೆ ವೆಚ್ಚ ನೀಡುವುದಾಗಿ ಹೇಳಿದ್ದೇನೆ ಎಂದು ಹೇಳಿದರು.
ಯಾರ ಕೊರಳ ಪಟ್ಟಿಯನ್ನು ನಾವು ಹಿಡಿದಿಲ್ಲ. ನನ್ನ ವಿರುದ್ಧ ಕೇಳಿ ಬಂದಿರುವ ಎಲ್ಲ ಆರೋಪಗಳು ಸುಳ್ಳು. ಯಾರಿಗೂ ಆವಾಜ್ ಹಾಕಿಲ್ಲ. ಕುಟುಂಬಸ್ಥರ ನಂಬರ್ ಇರಲಿಲ್ಲ ಹಾಗಾಗಿ ಯಾರನ್ನೂ ಸಂಪರ್ಕಿಸಿಲ್ಲ.
Recommended Video
ಆದರೆ ಕೂಡಲೇ ಕುಟುಂಬಸ್ಥರನ್ನು ಭೇಟಿಯಾಗುತ್ತೇನೆ. ಡ್ರೈವರ್ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಸದ್ಯ ಅಥಣಿಯಲ್ಲಿದ್ದಾರೆ. ಪೊಲೀಸರ ಮುಂದೆ ಹಾಜರಾಗ್ತಾರೆ ಎಂದು ಹೇಳಿದ್ದಾರೆ.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ












Click it and Unblock the Notifications