ರಾಹು-ಕೇತು ಎಂದಿದ್ದ ಈಶ್ವರಪ್ಪಗೆ ತಲೆ ಸರಿ ಇಲ್ಲ ಎಂದ ಪರಮೇಶ್ವರ
ಜಮಖಂಡಿ, ಅಕ್ಟೋಬರ್ 31: ನಾನು ರಾಹು ಅಲ್ಲ, ನನ್ನ ತಂದೆ ತಾಯಿ ಪರಮೇಶ್ವರ್ ಎಂದು ನಾಮಕರಣ ಮಾಡಿದ್ದಾರೆ ಎಂದು ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ ಈಶ್ವರಪ್ಪ ಅವರಿಗೆ ತಿರುಗೇಟು ನೀಡಿದರು.
ಜಮಖಂಡಿ ಪ್ರದೇಶ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಮಾಜಿ ಪ್ರಧಾನಿ ಇಂದಿರಾಗಾಂಧಿ ಪುಣ್ಯತಿಥಿ ಹಾಗೂ ಸರ್ದಾರ್ ವಲ್ಲಭಬಾಯ್ ಪಟೇಲರ ಜನ್ಮದಿನ ಹಿನ್ನೆಲೆಯಲ್ಲಿ ಇಂಧಿರಾಗಾಂಧಿ ಹಾಗೂ ಸರ್ದಾರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಬಳಿಕ ಮಾತನಾಡಿದರು.
ಈಶ್ವರಪ್ಪ ಅವರಿಗೆ ತಲೆ ಸರಿ ಇಲ್ಲದೇ ಬಾಯಿಗೆ ಬಂದ ಹಾಗೆ ಹೇಳಿಕೆ ನೀಡುತ್ತಿದ್ದಾರೆ, ಈಶ್ವರಪ್ಪ ಅವರ ಬಾಯಿ ಸರಿ ಇಲ್ಲ, ಬಾಯಿಗೆ ಬಂದ ಹಾಗೆ ಮಾತನಾಡುತ್ತಾರೆ. ಅವರು ನನ್ನನ್ನು ರಾಹು ಎಂದಿದ್ದಾರೆ. ನಾನೇನು ರಾಹು ಅಲ್ಲ. ನನ್ನ ತಂದೆ ತಾಯಿ ಪರಮೇಶ್ವರ ಎಂದು ನಾಮಕರಣ ಮಾಡಿದ್ದಾರೆ ಅವರಂತೆ ನಾನು ಬಾಯಿಗೆ ಬಂದಂತೆ ಮಾತನಾಡುವುದಿಲ್ಲ ಎಂದು ಟಾಂಗ್ ನೀಡಿದರು.

ಈ ಚುನಾವಣೆ ಬಳಿಕ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂಬುದು ಜಗದೀಶ್ ಶೆಟ್ಟರ್ ಅವರ ಕನಸು. ಕನಸಿಗೆ ಮಿತಿ ಇಲ್ಲ. ಹೀಗಾಗಿ ಅವರಿಷ್ಟದಂತೆ ಕನಸು ಕಾಣುತ್ತಿದ್ದಾರೆ. ಸಮ್ಮಿಶ್ರ ಸರ್ಕಾರ ಎಂದಿಗೂ ಪತನವಾಗುವುದಿಲ್ಲ. ಐದು ವರ್ಷ ಅವಧಿ ಪೂರ್ಣಗೊಳಿಸಲಿದೆ. ಯಾವುದೇ ಸ್ವಾಮೀಜಿಯ ಭವಿಷ್ಯವೂ ನಿಜವಾಗುವುದಿಲ್ಲ ಎಂದರು.
ಜಮಖಂಡಿಯಲ್ಲಿ ಬಿಜೆಪಿ ಗೆದ್ದರೂ 105 ಮಾತ್ರ ಆಗಲಿದೆ, ಹೀಗಿರುವಾಗ ಹೇಗೆ ಸರಕಾರ ರಚಿಸಿಬಿಡುತ್ತಾರೆ? ಶೆಟ್ಟರ್ ಅವರೇ ಆಪರೇಷನ್ ಕಮಲ ಮಾಡುವ ಗುಟ್ಟನ್ನು ಬಹಿರಂಗ ಪಡಿಸಿದ್ದಾರೆ ಎಂದು ಹೇಳಿದರು.
ಸಮ್ಮಿಶ್ರ ಸರ್ಕಾರ ಸುಭದ್ರವಾಗಿರುವ ಜೊತೆಗೆ ಈ ಚುನಾವಣೆ ಬಳಿಕ ಸಚಿವ ಸಂಪುಟ ಹಾಗೂ ನಿಗಮ ಮಂಡಳಿ ಅಧ್ಯಕ್ಷರ ನೇಮಕ ಮಾಡಲಾಗುವುದು ಎಂದರು. ಚುನಾವಣೆ ಪ್ರಚಾರದ ಭರದಲ್ಲಿ ಯಾರೂ ಕೂಡ ವೈಯಕ್ತಿಕ ನಿಂದನೆ ಮಾಡಬಾರದು. ಸಾರ್ವಜನಿಕ ಬದುಕಿನಲ್ಲಿರಿವವರು ರಾಜಕೀಯವಾಗಿ ಅಷ್ಟೇ ಟೀಕೆ ಮಾಡವೇಕು, ಅಭಿವೃದ್ಧಿ ವಿಚಾರ ಮುಂದಿಟ್ಟು ಪ್ರಚಾರ ಮಾಡಬೇಕೇ ವಿನಃ ವೈಯಕ್ತಿಕ ವಿಚಾರ ಅಲ್ಲ ಎಂದು ಹೇಳಿದರು.
ಇದಕ್ಕೂ ಮುನ್ನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಳೆದ ಕೆಲ ದಿನಗಳಿಂದ ಸಾಕಷ್ಟು ಪ್ರಚಾರ ನಡೆಸಿದ್ದು, ಕಾಂಗ್ರೆಸ್ ಪಕ್ಷವೇ ಗೆಲ್ಲಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಿದ್ದುನ್ಯಾಮಗೌಡ ನಿಧನ ಬಳಿಕ, ಇದೇ ಕುಟುಂಬದ ಯಾರೇ ಸ್ಪರ್ಧಿಸಿದರೂ ಚುನಾವಣೆಗೆ ನಿಲ್ಲುವುದಿಲ್ಲ ಎಂದು ಹೇಳಿದ್ದ ಬಿಜೆಪಿಯ ಕುಲಕರ್ಣಿ ಈಗ ಸ್ಪರ್ಧಿಸುವ ಮೂಲಕ ವಚನ ಭ್ರಷ್ಟರಾಗಿದ್ದಾರೆ.ಈ ಎಲ್ಲವನ್ನು ಜನರು ಗಮನಿಸುತ್ತಿದ್ದಾರೆ ಎಂದರು.
ಉತ್ತರ ಕರ್ನಾಟಕ ಭಾಗದ ಕೆಲ ಜಿಲ್ಲೆಗಳು ಬರಪೀಡಿತ ಜಿಲ್ಲೆ ಎಂದು ಘೋಷಿಸಿ, ಪರಿಹಾರಕ್ಕೆ ಕೇಂದ್ರದ ಮೊರೆ ಹೋದರೂ, ಕೇಂದ್ರ ಸರಕಾರ ನಯಾಪೈಸೆ ನೆರವು ನೀಡದೇ ಮಲತಾಯಿ ಧೋರಣೆ ಅನುಸರಿಸಿದೆ ಎಂದು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications