ಆಪರೇಷನ್ ಕಮಲಕ್ಕೆ ಡಿಕೆ ಶಿವಕುಮಾರ್ ಬಲಿಯಾಗಲ್ಲ :ಕೃಷ್ಣ ಬೈರೇಗೌಡ
ಬಾಗಲಕೋಟೆ, ನವೆಂಬರ್ 29: ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಸಚಿವ ಡಿಕೆ ಶಿವಕುಮಾರ್ ಭೇಟಿಯಲ್ಲಿ ಹಲವರು ಹಲವಾರು ರೀತಿಯಲ್ಲಿ ಅರ್ಥೈಸಿಕೊಂಡಿದ್ದಾರೆ ಆದರೆ ಅದು ಸತ್ಯ ಅಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.
ಯಡಿಯೂರಪ್ಪ ಅವರು ಬುಧವಾರ ಶಾಸಕ ಹಾಲಪ್ಪ ಹಾಗೂ ಬಿವೈ ರಾಘವೇಂದ್ರ ಅವರ ಜೊತೆ ಸಚಿವ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದರು.
ಅವರ ಭೇಟಿಯ ಉದ್ದೇಶವೇ ಬೇರೆಯಾಗಿದ್ದು ಸಾಗರದ ಸಿಗಂದೂರಿನಲ್ಲಿ ಸೇತುವೆ ನಿರ್ಮಾಣ ಹಾಗೂ ಜಿಲ್ಲೆಯ ನೀರಾವರಿಗೆ ಸಂಬಂಧಿಸಿದಂತೆ ಚರ್ಚಿಸಲು ಯಡಿಯೂರಪ್ಪ ಅವರು ತೆರಳಿದ್ದರು ಇನ್ಯಾವುದೇ ಉದ್ದೇಶ ಇರಲಿಲ್ಲ, ಡಿಕೆ ಶಿವಕುಮಾರ್ ಅವರು ಯಾವುದೇ ಆಪರೇಷನ್ ಕಮಲಕ್ಕೆ ಬಲಿಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಬಿಜೆಪಿ ಹಾಗೂ ಮಾಧ್ಯಮಗಳು ಆಪರೇಷನ್ ಕಮಲವನ್ನು ಆಕಾಶದ ಮಟ್ಟಕ್ಕೆ ಬೆಳೆಸಿವೆ, ಸಮ್ಮಿಶ್ರ ಸರ್ಕಾರ ಬಂದಾಗಿನಿಂದಲೂ ಕ್ಷಣಗಣನೆ ನಡೆಯುತ್ತಲಿದೆ. ಬಿಜೆಪಿ ಗಂಟೆ, ಈ ದಿನಾಂಕ, ಈ ಘಳಿಗೆ ಸಹಿತ ಗಡುವು ಕೊಡುತ್ತಾ ಬಂದಿವೆ. ಸರ್ಕಾರ ಆರು ತಿಂಗಳು ಪೂರೈಸಿದೆ. ಅದೇ ರೀತಿ ನಮ್ಮ ಕೆಲಸವನ್ನು ಐದು ವರ್ಷ ಮಾಡುತ್ತೇವೆ ನಮಗೆ ಭರವಸೆ ಇದೆ ಎಂದು ಹೇಳಿದರು.
ಜನರ ನಿರೀಕ್ಷೆಯಂತೆ ಸರ್ಕಾರವು ಇನ್ನೂ ಕೆಲಸ ಮಾಡಬೇಕಿದೆ, ಆಡಳಿತವನ್ನೂ ಚುರುಕುಗೊಳಿಸಬೇಕಿದೆ, ಬೆಳಗಾವಿ ಅಧಿವೇಶನಕ್ಕೂ ಮುನ್ನ ಸಂಪುಟ ವಿಸ್ತರಣೆ ಕಾರ್ಯ ನಡೆಯಲಿದೆ ಎಂದು ಹೇಳಿದರು.
-
ಒಡಿಶಾ ಕಾಂಗ್ರೆಸ್ ಶಾಸಕರಿಗೆ ತಲಾ ಐದು ಕೋಟಿ ಆಮಿಷ: ಡಿಸಿಎಂ ಡಿ.ಕೆ.ಶಿವಕುಮಾರ್ ಆರೋಪ -
ಕರ್ನಾಟಕದ ನೀರಾವರಿ ಯೋಜನೆಗೆ ಆಂಧ್ರ ಅಡ್ಡಗಾಲು: ಸಿಡಿದೆದ್ದ ಡಿಸಿಎಂ ಡಿ.ಕೆ.ಶಿವಕುಮಾರ್ -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ











Click it and Unblock the Notifications