'ಉಮಾಶ್ರೀಗೆ ಟಿಕೆಟ್ ಬೇಡ': ಸ್ವಪಕ್ಷದವರಿಂದಲೇ ಮನವಿ
ಬಾಗಲಕೋಟೆ, ಏಪ್ರಿಲ್ 07: ಕನ್ನಡ ಮತ್ತು ಸಂಸ್ಕತಿ ಇಲಾಖೆ ಸಚಿವರು ಹಾಗೂ ತೇರದಾಳ ಮತಕ್ಷೇತ್ರದ ಹಾಲಿ ಶಾಸಕಿ ಉಮಾಶ್ರೀ ಅವರಿಗೆ ಟಿಕೆಟ್ ನೀಡಬಾರದು ಎಂದು ಸ್ವಪಕ್ಷದವರೆ ನಾಯಕರಿಗೆ ಮನವಿ ಮಾಡಿದ್ದಾರೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | 2018ರ ನಿಮ್ಮ ಕನಸಿನ ಸಂಪುಟವನ್ನು ಆಯ್ಕೆ ಮಾಡಿ
ನವನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ತೇರದಾಳ ನಗರಸಭೆ ಸದಸ್ಯ ಆನಂದ ಬಕ್ರಿ ಮತ್ತು ಬೂತ್ ಕಮಿಟಿ ಅಧ್ಯಕ್ಷ ರವಿ ಕಾಂಬಳೇಕರ, ಉಮಾಶ್ರೀ ಅವರಿಗೆ ಕಾಂಗ್ರೆಸ್ ಪಕ್ಷದಲ್ಲಿ ನಾಯಕರು ಟಿಕೆಟ್ ನೀಡಿದರೆ ಸೋಲು ಕಟ್ಟಿಟ್ಟ ಬುತ್ತಿ ಎಂದರು.
ಈ ಬಾರಿಯ ವಿಧಾನಸಭೆಯ ಚುನಾವಣೆಯಲ್ಲಿ ಸ್ವ-ಕ್ಷೇತ್ರದವರಿಗೇ ಟಿಕೆಟ್ ನೀಡಬೇಕು. ಹೊರಗಿನವರಿಗೆ ಟಿಕೆಟ್ ನೀಡಿದರೆ ಚುನಾವಣೆಯಲ್ಲಿ ಕಾರ್ಯಕರ್ತರು ಕೆಲಸ ಮಾಡುವುದಿಲ್ಲ ಎಂದು ಹೆದರಿಸಿದರು.

ಉಮಾಶ್ರೀ ಅವರು ಐದು ವರ್ಷದಲ್ಲಿ ಕಾರ್ಯಕರ್ತರನ್ನು ಭೇಟಿಯಾಗಲಿಲ್ಲ, ಸರಿಯಾಗಿ ಮಾತನಾಡಿಸಿಯೂ ಇಲ್ಲ. ಇಂತಹವರು ನಮ್ಮ ಕ್ಷೇತ್ರಕ್ಕೆ ಬೇಡ ಟಿಕೆಟ್ ಕೊಟ್ಟರೂ ಬಂಡಾಯ ಏಳವ ಸಾಧ್ಯವಿದೆ ಎಂದರು.
ಎ.ಆರ್.ಬೆಳಗಲಿ, ಯುನಿಸ್ ಚೌಲಗಾ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಬೇಕು. ಇವರನ್ನು ಬಿಟ್ಟು ಉಮಾಶ್ರೀ ಅವರಿಗೆ ಟಿಕೆಟ್ ನೀಡಿದರೆ ಈಗಾಗಲೇ 75%ರಷ್ಟು ಕಾರ್ಯಕರ್ತರು ಬೇರೆ ಪಕ್ಷಕ್ಕೆ ಹೋಗಿದ್ದಾರರೆ. ಉಳಿದಿರುವ 25% ರಷ್ಟು ಕಾರ್ಯಕರ್ತರಾದರೂ ಕಾಂಗ್ರೆಸ್ನಲ್ಲಿ ಉಳಿಯಲು ನಾಯಕರು ದಿಟ್ಟ ನಿರ್ಧಾರ ಕೈಗೊಳ್ಳಬೇಕು ಎಂದರು.
-
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್












Click it and Unblock the Notifications