ಬಾಗಲಕೋಟೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಾಗಲಕೋಟೆ : ರಸ್ತೆ ಅಪಘಾತ, ಡಿವೈಎಸ್‌ಪಿ ಸೇರಿ ಮೂವರು ದುರ್ಮರಣ

By ಬಾಗಲಕೋಟೆ ಪ್ರತಿನಿಧಿ
|
Google Oneindia Kannada News

Recommended Video

ಬಾಗಲಕೋಟೆಯಲ್ಲಿ ದುರಂತ | ಪೊಲೀಸ್ ಅಧಿಕಾರಿಗಳ ದಾರುಣ ಅಂತ್ಯ | Oneindia Kannada

ಬಾಗಲಕೋಟೆ, ಮೇ 10 : ಲಾರಿ‌ ಮತ್ತು ಪೊಲೀಸ್ ಜೀಪ್ ಮುಖಾಮುಖಿ ಡಿಕ್ಕಿಯಾಗಿ, ಇಬ್ಬರು ಪೊಲೀಸ್ ಅಧಿಕಾರಿಗಳು ಸಾವನ್ನಪ್ಪಿದ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಬಾಗಲಕೋಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾಗಲಕೋಟೆ ತಾಲೂಕಿನ ಕೂಡಲ ಸಂಗಮ ಕ್ರಾಸ್ ಬಳಿ ಬುಧವಾರ ಮಧ್ಯರಾತ್ರಿ ಈ ಅಪಘಾತ ಸಂಭವಿಸಿದೆ. ಇಬ್ಬರು ಪೊಲೀಸ್ ಅಧಿಕಾರಿಗಳು, ಓರ್ವ ಚಾಲಕ ಸೇರಿ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಒನ್ಇಂಡಿಯಾ ಫೇಸ್ಬುಕ್ ಸಮೀಕ್ಷೆ: ಬಾದಾಮಿಯಲ್ಲೂ ಸಿದ್ದರಾಮಯ್ಯಗೆ ಸೋಲುಒನ್ಇಂಡಿಯಾ ಫೇಸ್ಬುಕ್ ಸಮೀಕ್ಷೆ: ಬಾದಾಮಿಯಲ್ಲೂ ಸಿದ್ದರಾಮಯ್ಯಗೆ ಸೋಲು

ಮೃತಪಟ್ಟವರನ್ನು ಸಿಐಡಿ ಡಿವೈಎಸ್ ಪಿ ಬಾಳೇಗೌಡ (55) , ಸಿಐಡಿ ಸಿಪಿಐ ಕೆ.ಹೆಚ್.ಶಿವಸ್ವಾಮಿ (55), ಚಾಲಕ ವೇಣು ಗೋಪಾಲ (23) ಎಂದು ಗುರುತಿಸಲಾಗಿದೆ. ಮೂವರು ಬೆಂಗಳೂರಿನಿಂದ ಬಾಗಲಕೋಟೆಗೆ ಚುನಾವಣೆ ಕರ್ತವ್ಯಕ್ಕಾಗಿ ತೆರಳುತ್ತಿದ್ದರು.

 DySP and 2 other killed in Road accident at Bagalkot

ಸ್ಥಳಕ್ಕೆ ಬಾಗಲಕೋಟೆ ಎಸ್‌ಪಿ ವಂಶಿಕೃಷ್ಣ ಹಾಗೂ ಡಿವೈಎಸ್ ಪಿ ಗಿರೀಶ ಸೇರಿದಂತೆ ಇತರ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಡಿವೈಎಸ್‌ಪಿ ಬಾಳೇಗೌಡ ಬೆಂಗಳೂರಿನ ಕೊಟ್ಟಿಗೆಪಾಳ್ಯದ ನಿವಾಸಿ. ಸಿಪಿಐ ಕೆ.ಎಚ್ ಶಿವಸ್ವಾಮಿ ಚಾಮರಾಜನಗರ ಜಿಲ್ಲೆಯವರು ಎಂದು ತಿಳಿದು ಬಂದಿದೆ. ಚಾಲಕ ಹೋಮ್ ಗಾರ್ಡ್ ಆಗಿದ್ದು, ವಿವರ ಲಭ್ಯವಾಗಿಲ್ಲ.

ಬಾಗಲಕೋಟೆ ಜಿಲ್ಲೆ: ಕ್ಷೇತ್ರವಾರು ಮತದಾರರ ಅಂತಿಮ ಪಟ್ಟಿಬಾಗಲಕೋಟೆ ಜಿಲ್ಲೆ: ಕ್ಷೇತ್ರವಾರು ಮತದಾರರ ಅಂತಿಮ ಪಟ್ಟಿ

ಮೃತದೇಹವನ್ನು ಬಾಗಲಕೋಟೆ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಪೊಲೀಸ್ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಜೀಪ್ ಲಾರಿಗೆ ಡಿಕ್ಕಿ ಹೊಡೆದು, ಈ ಅಪಘಾತ ಸಂಭವಿಸಿದೆ. ಲಾರಿ ಎಡ ಭಾಗದಲ್ಲಿಯೇ ಇದ್ದು, ಮೇಲ್ನೋಟಕ್ಕೆ ಪೊಲೀಸ್ ವಾಹನ ಚಾಲಕನ ನಿಯಂತ್ರ ತಪ್ಪಿ ಅಪಘಾತ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

 DySP and 2 other killed in Road accident at Bagalkot

ಬಾಗಲಕೋಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಲಾರಿ ಚಾಲಕ ಪರಾರಿಯಾಗಿದ್ದು ಆತನ ಪತ್ತೆಗೆ ಪೊಲೀಸರು ಹುಡುಕಾಟ ಮುಂದುವರೆಸಿದ್ದಾರೆ.

ಡಿವೈಎಸ್‌ಪಿ ಬಾಳೇಗೌಡರು ಅಪರಾಧ ವಿಭಾಗದಲ್ಲಿ ಹೆಚ್ಚು ಕೆಲಸ ಮಾಡಿದ್ದರು. ಖಡಕ್ ಅಧಿಕಾರಿಯಾಗಿ ರೌಡಿಗಳನ್ನು ಮಟ್ಟ ಹಾಕುವ ಕೆಲಸ ಮಾಡಿದ್ದರು. ತುಮಕೂರ,ಬೆಂಗಳೂರ ಸೇರಿದಂತೆ ಹಲವು ಕಡೆ ಅವರು ಕೆಲಸ ಮಾಡಿದ್ದರು.

English summary
Karnataka CID DySP Balegowda and two other killed in accident at Bagalkot. DySP Balegowda traveling from Bengaluru to Bagalkot for Karnataka assembly elections 2018 work.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X