ಬಾಗಲಕೋಟೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಿದ್ದರಾಮಯ್ಯನವರಿಗೆ ರಾಹು, ಕೇತು, ಶನಿ ಯಾರೆಂಬುದನ್ನು ಸ್ಪಷ್ಟಪಡಿಸಿದ ಈಶ್ವರಪ್ಪ

By ಬಾಗಲಕೋಟೆ ಪ್ರತಿನಿಧಿ
|
Google Oneindia Kannada News

Recommended Video

ಸಿದ್ದರಾಮಯ್ಯ ಹಾಗು ಜೆಡಿಎಸ್ ನಾಯಕರ ಮೇಲೆ ಹರಿಹಾಯ್ದ ಕೆ ಎಸ್ ಈಶ್ವರಪ್ಪ | Oneindia Kannada

ಬಾಗಲಕೋಟೆ, ಅಕ್ಟೋಬರ್.29: ಬೀಫ್ ತಿನ್ನುವ ಬಗ್ಗೆ ಸಿದ್ದರಾಮಯ್ಯ ಹೇಳಿಕೆಗೆ ಸಂಬಂಧಿಸಿದಂತೆ ಬಾಗಲಕೋಟೆ ನಗರದಲ್ಲಿ ಪ್ರತಿಕ್ರಯಿಸಿರುವ ಕೆ. ಎಸ್. ಈಶ್ವರಪ್ಪ ಸಿದ್ದರಾಮಯ್ಯ ದನದ ಮಾಂಸ ತಿಂತಾರೊ, ಎಮ್ಮೆ ಮಾಂಸ ತಿಂತಾರೋ ಅವರಿಗೆ ಬಿಟ್ಟಿದ್ದು. ಆದರೆ ಮನುಷ್ಯರು ತಿನ್ನೋದನ್ನು ತಿನ್ನಲಿ ಎಂದು ಟೀಕಿಸಿದ್ದಾರೆ.

ಸಿದ್ದರಾಮಯ್ಯನವರು ದೇವೆಗೌಡರ ಬೆನ್ನಿಗೆ ಚಾಕು ಹಿಡಿದು ನಿಂತಿದ್ದಾರೆ. ಸಿದ್ದರಾಮಯ್ಯ ಬೆನ್ನಿಗೆ ಕುಮಾರಸ್ವಾಮಿ ಚಾಕು ಹಿಡಿದು ನಿಂತಿದ್ದಾರೆ. ಯಾವಾಗ ಇವರು ಸಾಯುತ್ತಾರೊ ಗೊತ್ತಿಲ್ಲ. ಸಮ್ಮಿಶ್ರ ಸರಕಾರ ಮುಳುಗುತ್ತಿರುವ ಹಡಗು.

ಸಿದ್ದರಾಮಯ್ಯ ಜೊತೆ ರಾಹು, ಕೇತು, ಶನಿ ಪ್ರಚಾರ: ಈಶ್ವರಪ್ಪ ಲೇವಡಿ ಸಿದ್ದರಾಮಯ್ಯ ಜೊತೆ ರಾಹು, ಕೇತು, ಶನಿ ಪ್ರಚಾರ: ಈಶ್ವರಪ್ಪ ಲೇವಡಿ

ಕಾಂಗ್ರೆಸ್- ಜೆಡಿಎಸ್ ನವರು ಈಜು ಬಾರದವರು. ಒಬ್ಬರಿಗೊಬ್ಬರು ತಬ್ಬಿಕೊಂಡಿದ್ದಾರೆ. ಚುನಾವಣೆ ಮುಗಿಯುತ್ತಿದ್ದಂತೆ ಮುಳುಗಿ ಹೋಗುತ್ತಾರೆ. ಇದಕ್ಕೆ ಟೆಸ್ಟ್ ಡೋಜ್ ಜಮಖಂಡಿ ಉಪಚುನಾವಣೆ ಎಂದು ವ್ಯಂಗ್ಯವಾಡಿದರು.

ಕಾಂಗ್ರೆಸ್ ನವರು ಹೆಣ್ಣುಮಕ್ಕಳ ಬಗ್ಗೆ ಕೀಳಾಗಿ ಮಾತನಾಡುತ್ತಾರೆ. ಶೋಭಾಗೆ ಸಿದ್ದರಾಮಯ್ಯ ಅವಳು ಅಂತಾರೆ. ನನಗೆ ಸಿದ್ದರಾಮಯ್ಯ ಸವರ ಪತ್ನಿ ತಾಯಿ ಸಮಾನ. ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಕಾಲ ಕಸ ಎಂದರು ಕಾಂಗ್ರೆಸ್ ನವರು ಎಂದು ಈಶ್ವರಪ್ಪ ಆರೋಪಿಸಿದರು.

 ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗೋದಿಲ್ಲ

ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗೋದಿಲ್ಲ

ನಾನೇ ಮುಖ್ಯಮಂತ್ರಿ ಎಂದು ಸಿದ್ದರಾಮಯ್ಯ ಹಗಲು,ರಾತ್ರಿ ಕನಸು ಕಾಣುತ್ತಿದ್ದಾರೆ. ಬ್ರಹ್ಮ ಬಂದರೂ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗೋದಿಲ್ಲ. ಚಾಮುಂಡೇಶ್ವರಿ ಜನ ಸೋಲಿಸಿ ಇವರನ್ನು ಕಿತ್ತು ಬಿಸಾಕಿದ್ದಾರೆ ಎಂದು ಈಶ್ವರಪ್ಪ ಹೇಳಿದರು.

 ಹಗಲುಗನಸು ಕಾಣುತ್ತಿದ್ದಾರೆ ಸಿದ್ದರಾಮಯ್ಯ

ಹಗಲುಗನಸು ಕಾಣುತ್ತಿದ್ದಾರೆ ಸಿದ್ದರಾಮಯ್ಯ

ಮೈಸೂರಿನಿಂದ ಓಡಿಸಿದರು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ ಓಡಿಸಿದ್ದು ಯಾರು ಎಂದು ಅವರೇ ತಿಳಿಸಲಿ. ಸಿದ್ದರಾಮಯ್ಯ ಜಾತಿ-ಧರ್ಮ ಒಡೆದರು. ಸಾಲದೆಂಬಂತೆ ಯಡಿಯೂರಪ್ಪ ಅವರು ಸಿಎಂ ಆಗುತ್ತಾರೆಂದು ಹಗಲು ಕನಸು ಕಾಣುತ್ತಿದ್ದಾರೆ ಎಂದು ಟೀಕೆ ಮಾಡುತ್ತಾರೆ. ಆದರೆ ನಿಜವಾಗಿ ಹಗಲು ಕನಸು ಕಾಣುತ್ತಿರುವುದು ಸಿದ್ದರಾಮಯ್ಯನವರು ಎಂದು ಈಶ್ವರಪ್ಪ ವಾಗ್ದಾಳಿ ನಡೆಸಿದರು.

ರಾಹು, ಕೇತು, ಶನಿ... ಸಿದ್ದು ಹೇಳಿಕೆಗೆ ಮೌನವೇ ಉತ್ತರ ಎಂದ ಸಿಎಂ!ರಾಹು, ಕೇತು, ಶನಿ... ಸಿದ್ದು ಹೇಳಿಕೆಗೆ ಮೌನವೇ ಉತ್ತರ ಎಂದ ಸಿಎಂ!

 ಒಬ್ಬರಿಗೊಬ್ಬರಿಗೆ ಆಗೋದಿಲ್ಲ

ಒಬ್ಬರಿಗೊಬ್ಬರಿಗೆ ಆಗೋದಿಲ್ಲ

ಕಾಂಗ್ರೆಸ್ ಪಕ್ಷದಲ್ಲಿ ಒಬ್ಬರಿಗೊಬ್ಬರಿಗೆ ಆಗೋದಿಲ್ಲ. ಸಿದ್ದರಾಮಯ್ಯನವರ ರಾಹು ಕೇತು ಶನಿ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಯಿಸಿದ ಈಶ್ವರಪ್ಪ ಸಿದ್ದರಾಮಯ್ಯ ಗೆ ಜಿ. ಪರಮೇಶ್ವರ ರಾಹು, ದೇವೇಗೌಡ ಶನಿ, ರೇವಣ್ಣ ಕೇತು ಎಂದು ವ್ಯಂಗ್ಯವಾಡಿದರು.

ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಮೈತ್ರಿ: ಸಿದ್ದರಾಮಯ್ಯಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಮೈತ್ರಿ: ಸಿದ್ದರಾಮಯ್ಯ

 ರೇವಣ್ಣ ರಾವಣ, ಅಲ್ಲಲ್ಲ ರೇವಣ್ಣ

ರೇವಣ್ಣ ರಾವಣ, ಅಲ್ಲಲ್ಲ ರೇವಣ್ಣ

ಜನತಾದಳ ಶನಿ ಇದ್ದ ಹಾಗೆ. ಆ ಶನಿಗಳನ್ನು ಕಟ್ಟಿಕೊಂಡು ಸಿದ್ದರಾಮಯ್ಯ ಹೊರಟಿದ್ದಾರೆ. ರೇವಣ್ಣ ರಾವಣ ಅಲ್ಲಲ್ಲ ರೇವಣ್ಣ ಎಂದು ಈಶ್ವರಪ್ಪ ಅಣಕವಾಡಿದರು.

ಸಿದ್ದರಾಮಯ್ಯರ ಹೀನಾಯ ಸ್ಥಿತಿ ಯಾವ ರಾಜಕಾರಣಿಗೂ ಬೇಡ: ಈಶ್ವರಪ್ಪಸಿದ್ದರಾಮಯ್ಯರ ಹೀನಾಯ ಸ್ಥಿತಿ ಯಾವ ರಾಜಕಾರಣಿಗೂ ಬೇಡ: ಈಶ್ವರಪ್ಪ

English summary
Veteran BJP leader KS Eshwarappa has made some allegations against JDS and Former Chief Minister Siddaramaiah. Here's a detailed article about this
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X