ಬಾದಾಮಿಯಲ್ಲಿ ಪುನೀತ್ ರಾಜ್ ಕುಮಾರ್ ನೋಡಲು ಮುಗಿಬಿದ್ದ ಅಭಿಮಾನಿಗಳು
ಬಾಗಲಕೋಟೆ, ಜುಲೈ.16: ದಕ್ಷಿಣ ಕಾಶಿ ಎಂದೇ ಹೆಸರು ವಾಸಿಯಾಗಿರುವ ಐತಿಹಾಸಿಕ ಕೇಂದ್ರ ಮಹಾಕೂಟದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ನಟಸಾರ್ವಭೌಮ ಚಿತ್ರೀಕರಣ ಅದ್ದೂರಿಯಾಗಿ ನಡೆಯುತ್ತಿದೆ.
ಮಹಾಕೂಟೇಶ್ವರ ದೇವಾಲಯದ ಪಕ್ಕದಲ್ಲಿಯೇ ಇರುವ ಪುಷ್ಕರಣಿಯಲ್ಲಿ ಬೃಹತ್ ಸೆಟ್ ನಿರ್ಮಾಣ ಮಾಡಿ, ಚಿತ್ರೀಕರಣ ನಡೆಸಲಾಗುತ್ತಿದೆ. ಚಿತ್ರದ ಕೈಮಾಕ್ಸ್ ಹಂತದ ಶೂಟಿಂಗ್ ಐದು ದಿನಗಳ ಕಾಲ ನಡೆಸಲಾಗುತ್ತಿದೆ.
ರಾತ್ರಿ 9 ಗಂಟೆಯಿಂದ ಪ್ರಾರಂಭವಾದ ಶೂಟಿಂಗ್ ಬೆಳಗಿನ ಜಾವ 5 ಗಂಟೆಯವರೆಗೆ ಮಾಡಲಾಗುತ್ತಿದ್ದು, ನಟಿ ರಚಿತಾ ರಾಮ್ ಜೊತೆಗೆ ಕೊನೆಯ ಸೀನ್ ಚಿತ್ರೀಕರಣ ಮಾಡಲಾಗುತ್ತಿದೆ. ಪವನ ಒಡೆಯರ್ ಚಿತ್ರದ ನಿರ್ದೇಶನ ಮಾಡುತ್ತಿದ್ದಾರೆ.

ಚಿತ್ರೀಕರಣವನ್ನು ಇಡೀ ರಾತ್ರಿ ಮಾಡುತ್ತಿರುವುದು ವಿಶೇಷವಾಗಿದೆ. ಚಾಲುಕ್ಯರ ಕಾಲದಲ್ಲಿ ನಿರ್ಮಾಣವಾಗಿರುವ ಐತಿಹಾಸಿಕ ಪುಷ್ಕರಣಿಯಲ್ಲಿ ವಿವಿಧ ರೀತಿಯಲ್ಲಿ ಶೂಟಿಂಗ್ ಮಾಡಲಾಗುತ್ತಿದೆ. ರಾತ್ರಿ ಇಡೀ ಶೂಟಿಂಗ್ ನಲ್ಲಿ ಪಾಲ್ಗೊಂಡ ಪುನೀತ್ ಬಾದಾಮಿಯ ಕೃಷ್ಣ ಹೇರಿಟಿಜ್ ಹೋಟೆಲ್ ನಲ್ಲಿ ತಂಗಿದ್ದಾರೆ.
ಹೋಟೆಲ್ ಬಳಿ ತಮ್ಮ ಮೆಚ್ಚಿನ ನಟನನ್ನು ನೋಡಲು ಅಭಿಮಾನಿಗಳು ಮುಗಿಬೀಳುತ್ತಿದ್ದಾರೆ.

ಮಹಾಕೂಟದಲ್ಲಿ ಈ ಹಿಂದೆ ಬಾಲಿವುಡ್ ನಟಿ ಐಶ್ವರ್ಯ ರೈ ಅಭಿನಯದ 'ಗುರು' ಚಿತ್ರದ ಹಾಡಿನ ದೃಶ್ಯಾವಳಿ ಸಹ ಇದೇ ಪುಷ್ಕರಣಿಯಲ್ಲಿ ಸೆರೆ ಹಿಡಿಯಲಾಗಿತ್ತು. ಈಗ ಕನ್ನಡದ ಶ್ರೇಷ್ಠ ನಟ ಪುನೀತ್ ಅಭಿನಯದ 'ನಟಸಾರ್ವಭೌಮ' ಚಿತ್ರೀಕರಣ ನಡೆಸುತ್ತಿರುವುದು ವಿಶೇಷವಾಗಿದೆ.
ರಾತ್ರಿ ಶೂಟಿಂಗ್ ಇರುವುದರಿಂದ ಮಾಧ್ಯಮದವರಿಗೆ ಹಾಗೂ ಇತರ ವ್ಯಕ್ತಿಗಳಿಗೂ ಪ್ರವೇಶ ನಿರ್ಬಂಧ ಹೇರಲಾಗಿದೆ.

ಇದೀಗ ತಮ್ಮ ಮೆಚ್ಚಿನ ನಟನನ್ನು ನೋಡಲು ಅಭಿಮಾನಿಗಳು ಮುಗಿಬೀಳುತ್ತಿದ್ದಾರೆ.
-
Shiva Rajkumar: ಸೈನಿಕನ ದೇಶಪ್ರೇಮಮೇ ಚಿತ್ರದ ಜೀವಾಳ: ಧುರಂಧರ್-2 ಸಿನಿಮಾ, ರಣವೀರ್ ಸಿಂಗ್ ನಟನೆಗೆ ಶಿವಣ್ಣ ಫಿದಾ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು












Click it and Unblock the Notifications