ಬಿಜೆಪಿ ಶಾಸಕ ಗೋವಿಂದ ಕಾರಜೋಳ ಪುತ್ರನ ವಿರುದ್ಧ ಎಫ್ಐಆರ್
ಬಾಗಲಕೋಟೆ, ಜುಲೈ 16: ಶಾಸಕರ ಮಕ್ಕಳ ಗೂಂಡಾಗಿರಿ ಪ್ರಕರಣಗಳಿಗೆ ಕೊನೆಯೇ ಇದ್ದಂತಿಲ್ಲ. ಶಾಸಕ ಹ್ಯಾರಿಸ್ ಮಗನ ಪ್ರಕರಣದ ನಂತರ ಈಗ ಬಿಜೆಪಿ ಶಾಸಕ ಗೋವಿಂದ ಕಾರಜೋಳ ಮಗ ತನ್ನ ಗೂಂಡಾಗಿರಿಯಿಂದ ಸುದ್ದಿಯಲ್ಲಿದ್ದಾನೆ.
ಮುಧೋಳ ಕ್ಷೇತ್ರದ ಬಿಜೆಪಿ ಶಾಸಕ ಗೋವಿಂದ ಕಾರಜೋಳ ಅವರ ಪುತ್ರ ಅರುಣ್ ಕಾರಜೋಳ ಪೊಲೀಸ್ ಪೇದೆಯೊಬ್ಬನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು ಆತನ ವಿರುದ್ಧ ಬಾಗಲಕೋಟೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಅರುಣ್ ಕಾರಜೋಳ ಅವರು ನಿನ್ನೆ ರಾತ್ರಿ ನೋಪಾರ್ಕಿಂಗ್ನಲ್ಲಿ ಕಾರು ನಿಲ್ಲಿಸಿದ್ದರು. ಅದನ್ನು ತೆಗೆಯುವಂತೆ ಸಂಚಾರಿ ಪೊಲೀಸ್ ಕಾನ್ಸ್ಟೇಬಲ್ ಮಲ್ಲೇಶ್ ಲಮಾಣಿ ಸೂಚಿಸಿದ್ದಾರೆ. ಇದಕ್ಕೆ ಕೋಪಗೊಂಡ ಅರುಣ್ ಮಲ್ಲೇಶ್ ಅನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.

ಅರುಣ್ ಕಾರಜೋಳ ಅವರು ಪೊಲೀಸ್ ಪೇದೆ ಒಬ್ಬರ ಜೊತೆ ಅಸಭ್ಯವಾಗಿ ವರ್ತಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಪೇದೆ ಮಲ್ಲೇಶ್ ಅವರು ದೂರು ದಾಖಲಿಸಿದ್ದು ಎಫ್ಐಆರ್ ಕೂಡ ದಾಖಲಾಗಿದೆ.
ಆದರೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಶಾಸಕರ ಪುತ್ರ ಅರುಣ್ ಕಾರಜೋಳ ತಾವು ಅವಾಚ್ಯ ಶಬ್ದಗಳಿಂದ ಮಾತನಾಡಿಲ್ಲವೆಂದು, ಪೇದೆಯೇ ಅನಾಗರೀಕವಾಗಿ ವರ್ತಿಸಿದ್ದಾಗಿ ಹಾಗೂ ಎಫ್ಐಆರ್ ಕೂಡಾ ದುರುದ್ದೇಶಪೂರ್ವಕವಾಗಿ ಹಾಕಿರುವುದಾಗಿ ಹೇಳಿದ್ದಾರೆ.
ಬಿಜೆಪಿ ಶಾಸಕರಾಗಿರುವ ಗೋವಿಂದ ಕಾರಜೋಳ ಅವರು ಮುಧೋಳ ಕ್ಷೇತ್ರದಲ್ಲಿ ಕಾಂಗ್ರೆಸ್ ವಿರುದ್ಧ 16 ಸಾವಿರಕ್ಕೂ ಹೆಚ್ಚು ಮತಗಳಿಂದ ಜಯಗಳಿಸಿದ್ದಾರೆ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು












Click it and Unblock the Notifications