ಸತೀಶ್ ಜಾರಕಿಹೊಳಿ ಹೇಗಂತ ನನಗೆ ಗೊತ್ತು: ಎಚ್.ವೈ.ಮೇಟಿ
ಬಾಗಲಕೋಟೆ, ಸೆಪ್ಟೆಂಬರ್.06: ಸತೀಶ್ ಜಾರಕಿಹೊಳಿ ಕಾಂಗ್ರೆಸ್ ಪಕ್ಷ ಕಟ್ಟಿದವರು. ಅವರೊಂದಿಗೆ ಮೂವತ್ತು ವರ್ಷದಿಂದ ಸ್ನೇಹವಿದ್ದು ಅವರು ಹೇಗೆ ಅಂತ ನನಗೆ ಗೊತ್ತಿದೆ ಎಂದು ಮಾಜಿ ಶಾಸಕ ಎಚ್.ವೈ.ಮೇಟಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬೆಳಗಾವಿಯಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಜಾರಕಿಹೊಳಿ ನಡುವಿನ ಕಲಹದ ಬಗ್ಗೆ ಪ್ರಶ್ನೆಯೊಂದಕ್ಕೆ ಉತ್ತರಿಸಿ ಅದು ವೈಯಕ್ತಿಕವಾಗಿದ್ದು ಅದರ ಬಗ್ಗೆ ಪಕ್ಷದ ಮುಖಂಡರು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದರು.
ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಜಿಲ್ಲೆಯ 15 ನಗರ ಸ್ಥಳೀಯ ಸಂಸ್ಥೆಗಳ ಸದಸ್ಯರು ಮತದಾನ ಮಾಡುತ್ತಿದ್ದಾರೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನೀಲಗೌಡ ಪಾಟೀಲಗೆ ಉತ್ತಮ ಸ್ಪಂದನೆ ಸಿಕ್ಕಿದ್ದು, ಅಭ್ಯರ್ಥಿ ಗೆಲುವು ಖಚಿತ ಎಂದು ಎಚ್.ವೈ.ಮೇಟಿ ವಿಶ್ವಾಸ ವ್ಯಕ್ತಪಡಿಸಿದರು.
ನಗರ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಹಿನ್ನಡೆಯಾಗಿದೆ ಎಂದು ನಾನು ಒಪ್ಪಿಕೊಳ್ಳುವುದಿಲ್ಲ. ಬಾಗಲಕೋಟೆ ನಗರಸಭೆಯಲ್ಲಿ ಐದು ಸ್ಥಾನಗಳನ್ನು ಗೆದ್ದಿದ್ದು, ಇನ್ನು ಹೆಚ್ಚಿನ ಸ್ಥಾನ ಗೆಲ್ಲಬೇಕಿತ್ತು. ಆದರೆ ಮತದಾರರ ತೀರ್ಪಿಗೆ ತಲೆ ಬಾಗಲೇಬೇಕು.
ಜಿಲ್ಲೆಯಲ್ಲಿ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದೇವೆ. ಆದರೂ ಕಡಿಮೆ ಸ್ಥಾನ ಬಂದಿದೆ. ಬಿಜೆಪಿ ಎಲ್ಲಾ ಸಮಾಜದ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದ್ದರ ಫಲವಾಗಿ ಹೆಚ್ಚು ಸ್ಥಾನ ಗಳಿಸಿದೆ ಎಂದು ತಿಳಿಸಿದರು.
ಇಂದು ಗುರುವಾರ (ಸೆಪ್ಟೆಂಬರ್ 06) ವಿಜಯಪುರ-ಬಾಗಲಕೋಟೆ ಅವಳಿಯ ಒಂದು ಸ್ಥಾನಕ್ಕಾಗಿ ನಡೆಯುತ್ತಿರುವ ವಿಧಾನ ಪರಿಷತ್ ಚುನಾವಣೆ ಹಿನ್ನಲೆ, ಬಾಗಲಕೋಟೆ ಜಿಲ್ಲೆಯಲ್ಲಿರುವ ಪ್ರಮುಖ ಜನಪ್ರತಿನಿಧಿಗಳು ಮತ ಹಾಕುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸಿದರು. ಯಾರೆಲ್ಲಾ ಮತ ಚಲಾಯಿಸಿದರು? ದೂರ ಉಳಿದಿದ್ದು ಯಾರು? ಎಂಬ ಮಾಹಿತಿ ಇಲ್ಲಿದೆ...

ಮತ ಚಲಾಯಿಸಿದ ಶಾಸಕರು
ವಿಧಾನ ಪರಿಷತ್ ಸದಸ್ಯ, ಮಾಜಿ ಸಚಿವ ಎಸ್ ಆರ್ ಪಾಟೀಲ್ ಬೀಳಗಿ ತಾಲೂಕು ಪಂಚಾಯತ್ ನಲ್ಲಿ ಮತ ಚಲಾಯಿಸಿದ್ದು, ಶಾಸಕ ಮುರಗೇಶ ನಿರಾಣಿ, ಬಿಜೆಪಿ ಪಕ್ಷದ ಶಾಸಕ ವೀರಣ್ಣ ಚರಂತಿಮಠ ಸಹ ಮತ ಚಲಾಯಿಸಿದರು. ಇನ್ನು ಬಿಜೆಪಿ ಮುಖಂಡ ಹಾಗೂ ಶಾಸಕರಾದ ಗೋವಿಂದ ಕಾರಜೋಳ ಮುಧೋಳದಲ್ಲಿ ಮತ ಚಲಾಯಿಸಿದರು.

ಕಣದಲ್ಲಿರುವ ಅಭ್ಯರ್ಥಿಗಳು
ಅವಳಿ ಜಿಲ್ಲೆಗಳಲ್ಲಿ ಒಟ್ಟು 8,237 ಮತದಾರರಿದ್ದು, ಒಟ್ಟು 38 ಮತಗಟ್ಟೆಗಳಲ್ಲಿ ಮತದಾನ ನಡೆಯುತ್ತಿದೆ. ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೂ ಮತದಾನ ನಡೆಯಲಿದ್ದು, ಬಿಜೆಪಿಯ ಅಭ್ಯರ್ಥಿ ಗೂಳಪ್ಪ ಶಟಗಾರ, ಕಾಂಗ್ರೆಸ್ ನಿಂದ ಮಾಜಿ ಸಚಿವ ಎಂ.ಬಿ.ಪಾಟೀಲ ಸಹೋದರ ಸುನೀಲಗೌಡ ಪಾಟೀಲ ಕಣದಲ್ಲಿ ಇದ್ದಾರೆ.

ಬಿಜೆಪಿ ಅಭ್ಯರ್ಥಿ ಗೆಲುವು ಖಚಿತ
ಅಂದಹಾಗೆ ವಿದೇಶದಲ್ಲಿ ಇರುವ ಮಾಜಿ ಸಿಎಂ ಸಿದ್ದರಾಮಯ್ಯ ಬಾದಾಮಿಯಲ್ಲಿ ಮತದಾನದಿಂದ ದೂರ ಉಳಿದಿದ್ದಾರೆ. ಮತ ಚಲಾಯಿಸಿದ ನಂತರ ಸುದ್ದಿ ಗಾರರೊಂದಿಗೆ ಮಾತನಾಡಿದ ಶಾಸಕ ವೀರಣ್ಣ ಚರಂತಿಮಠ ಈ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಖಚಿತ ಎಂದರು.

ಪ್ರಬಲ ಅಭ್ಯರ್ಥಿ ನಾನಲ್ಲ
ನಾನು ಲೋಕಸಭೆಯ ಚುನಾವಣೆಯ ಆಕಾಂಕ್ಷಿಯಲ್ಲ. ಪಕ್ಷ ಸೂಚನೆ ನೀಡಿದರೂ ನಿಲ್ಲುವುದಿಲ್ಲ. ಈಗಾಗಲೇ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿದ್ದು ಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲ್ಲುತ್ತೇನೆ ಎಂಬ ವಿಶ್ವಾಸವಿಲ್ಲ. ಬಿಜೆಪಿ ವಿರುದ್ಧ ಪ್ರಬಲ ಅಭ್ಯರ್ಥಿ ನಾನಲ್ಲ.
ಹಾಗೆಯೇ ಮಾಜಿ ಸಿಎಂ ಸಿದ್ಧ ರಾಮಯ್ಯ ಬಾಗಲಕೋಟೆಯಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಮಾಹಿತಿ ಇಲ್ಲ ಎಂದು ಎಚ್.ವೈ.ಮೇಟಿ ಸ್ಪಷ್ಟಪಡಿಸಿದರು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications