ಬಾಗಲಕೋಟೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಾಧ್ಯಮಗಳ ವಿರುದ್ಧ ಹರಿಹಾಯ್ದ ಮಾಜಿ ಸಿಎಂ ಎಚ್ಡಿಕೆ

|
Google Oneindia Kannada News

ಬಾಗಲಕೋಟೆ, ಜನವರಿ 29: ದೃಶ್ಯ ಮಾಧ್ಯಮಗಳು ಜೆಡಿಎಸ್ ಪಕ್ಷದ ವರದಿ ಪ್ರಸಾರ ಮಾಡುತ್ತಿಲ್ಲ ಇದರಿಂದ ನಮಗೆ ತೀವ್ರ ಬೇಸರವಾಗಿದೆ ಎಂದು ಮಾಧ್ಯಮಗಳಿಗೆ ಕೈ ಮುಗಿದು ಸಂದರ್ಶನವೇ ಬೇಡ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ನಮ್ಮ ಪಕ್ಷದ ವರದಿಯನ್ನು ದೃಶ್ಯ ಮಾಧ್ಯಮದವರು ಬಿತ್ತರಿಸುತ್ತಿಲ್ಲ, ನಮ್ಮ ಸುದ್ದಿಗಳನ್ನು ಡಸ್ಟ್ ಬಿನ್ ಗೆ ಹಾಕಿ ಬಿಸಾಡಲಾಗುತ್ತಿದೆ. ಆದರೆ ಬಿಜೆಪಿ ಕಾಂಗ್ರೆಸ್ ಬಗ್ಗೆ ಮಾತ್ರ ಸುದ್ದಿ ಪ್ರಸಾರ ಮಾಡಲಾಗುತ್ತದೆ. ಹೀಗಾಗಿ ನಾನೇಕೆ ನಮ್ಮ ಸಮಯವನ್ನು ವ್ಯರ್ಥ ಮಾಡಲಿ ನಾನು ಸಂದರ್ಶನವನ್ನು ನೀಡುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಈ ಮಧ್ಯೆ ನಾವು ಪ್ರತಿಕ್ರಿಯೆ ನೀಡುವುದೇ ತಪ್ಪು ಎನಿಸಿದೆ, ಹಾಗಾಗಿ ನನ್ನನ್ನು ಹೇಳಿಕೆ ನೀಡುವಂತೆ ಬಲವಂತ ಮಾಡಬೇಡಿ, ನಾಣು ಈಗಾಗಲೇ ಮುಖ್ಯಮಂತ್ರಿಯಾಗಿ ಹೋಗಿದ್ದೇನೆ. ಈಗ ಎಲ್ಲಾ ಸುದ್ದಿ ವಾಹಿನಿಗಳು ಈ ರೀತಿ ಮಾಡುತ್ತಿರುವುದು ನನಗೆ ನೋವುಂಟು ಮಾಡಿದೆ ಎಂದು ತಮ್ಮ ನೋವನ್ನು ಹೇಳಿಕೊಂಡರು.

HDK blames media not telecasting his views
English summary
Former chief minister HD Kumaraswamy has been blamed the medias that they were not telecasting his party's news since he is not ready to waste his time to talk with news channels. He was talking to reporters in Bagalkot on Monday and said henceforth he will not give reactions to the channels concern.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X