ಬಾದಾಮಿಯಲ್ಲಿ ಮಳೆ: ಜಮೀನಿಗೆ ನೀರು ನುಗ್ಗಿ ನಷ್ಟ
ಬಾಗಲಕೋಟೆ, ಆಗಸ್ಟ್ 4: ಬಾಗಲಕೋಟೆ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ವರುಣನ ಆರ್ಭಟ ಮುಂದುವರಿದಿದೆ. ಜಿಲ್ಲೆಯ ರಬಕವಿ ಬನಹಟ್ಟಿ, ಮುಧೋಳ, ತೇರದಾಳ, ಬಾದಾಮಿ ಸೇರಿದಂತೆ ಎಲ್ಲಾ ತಾಲ್ಲೂಕುಗಳಲ್ಲಿ ಭರ್ಜರಿ ಮಳೆಯಾಗಿದೆ.
ಬಾದಾಮಿ ತಾಲೂಕಿನಲ್ಲಿ ನಿರಂತರ ಮಳೆಯಿಂದಾಗಿ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದು, ಸೇತುವೆ ಜಲಾವೃತ ಆಗಿದೆ. ಬಾದಾಮಿ- ಮಣಿನಾಗರ ಮಾರ್ಗದ ರಸ್ತೆ ಸಂಪರ್ಕ ಸಹ ಬಂದ್ ಆಗಿದೆ.
ಯಂಕಂಚಿ, ಮಣಿನಾಗರ ಬಳಿ ಇರುವ ಸೇತುವೆ ಮೇಲೆ ಮಳೆ ನೀರು ರಭಸವಾಗಿ ಹರಿಯುತ್ತಿದೆ. ಆದರೂ ಸಹಾ ಸ್ಥಳೀಯ ಯುವಕರು ಹುಚ್ಚು ಸಾಹಸಕ್ಕೆ ಮುಂದಾಗಿದ್ದು ಕಂಡುಬಂತು. ಅಪಾಯ ಮಟ್ಟದಲ್ಲಿ ನೀರು ಹರಿದು ಬರುತ್ತಿದ್ದರು ವೇಗವಾಗಿ ಹರಿಯುವ ನೀರಲ್ಲಿ ನಡೆದುಕೊಂಡು ಬರುವುದು, ಬೈಕ್ ತೆಗೆದುಕೊಂಡು ಹೋಗುವ ಹುಚ್ಚು ಸಾಹಸಕ್ಕೆ ಯುವಕರು ಮಾಡುತ್ತಿದ್ದಾರೆ.

ಇದಲ್ಲದೆ ತೇರದಾಳ ಬಸ್ ನಿಲ್ದಾಣದಲ್ಲಿ ಮಳೆಯಿಂದಾಗಿ ಪ್ರಯಾಣಿಕರ ಪರದಾಟ ನಡೆಸಿದರು. ಮಳೆಯಲ್ಲೇ ನೆನೆದು ಓಡೋಡಿ ಬಸ್ ಹತ್ತುತ್ತಿರೊ ದೃಶ್ಯಗಳು ಕಂಡುಬಂದವು. ನಿರಂತರ ಮಳೆಯಿಂದಾಗಿ ಮಳೆ ನೀರು ರಸ್ತೆ ಮೇಲೆ ಹರಿದು ಜನಜೀವನ ಅಸ್ತವ್ಯಸ್ತವಾಗಿದೆ.
ಮನೆಗೆ ನುಗ್ಗಿದ ಮಳೆ ನೀರು; ಗೋವಕೊಪ್ಪ, ಕುಳಗೇರಿ ಗ್ರಾಮಗಳಲ್ಲಿ ಮಳೆಯ ನೀರು ಮನೆಗಳಿಗೆ ನುಗ್ಗಿದ್ದು, ನೀರು ಹೊರ ಹಾಕುವುದಕ್ಕೆ ಹರಸಾಹಸ ಪಡುತ್ತಿದ್ದಾರೆ. ಗುಡಿಸಲು ಹಾಗೂ ತಗಡಿನ ಶೆಡ್ನಲ್ಲಿ ವಾಸ ಮಾಡುತ್ತಿರುವ ನೀರು ಹೊರ ಹಾಕುವ ಕೆಲಸದಲ್ಲಿ ನಿರತರಾಗಿದ್ದರು. ಜೊತೆಗೆ ಚಿಮ್ಮನಕಟ್ಟಿ ಗ್ರಾಮ ಶಾಲೆಯ ಆವರಣದಲ್ಲಿ ನೀರು ನುಗ್ಗಿ ಶಾಲಾ ಮಕ್ಕಳು ಹಾಗೂ ಶಿಕ್ಷಕರು ಪರದಾಡುವಂತಾಗಿದೆ.
ಪರಿಹಾರಕ್ಕಾಗಿ ರೈತರ ಮನವಿ; ಇಳಕಲ್ ತಾಲೂಕಿನಲ್ಲೂ ವಿವಿಧೆಡೆ ಬುಧರಾತ್ರಿ ಮಳೆಯಾಗಿದೆ. ಕೋಡಿಹಾಳ ಗ್ರಾಮದಲ್ಲಿ ರಸ್ತೆಗಳಲ್ಲಿ ನೀರು ನಿಂತು ಕೆರೆಯಾಗಿವೆ. ಮನೆಗೆ ನೀರು ನುಗ್ಗಿ ದವಸ ಧಾನ್ಯಗಳು ಹಾಳಾಗಿವೆ. ಹಳ್ಳಗಳು ತುಂಬಿದ್ದ ನೀರು ಜಮೀನುಗಳು ಜಲಾವೃತಗೊಂಡಿದ್ದು, ಎಳ್ಳು, ಸಜ್ಜೆ,ತೊಗರಿ, ಸೂರ್ಯಕಾಂತಿ ಬೆಳೆಗಳು ನೀರಿನಲ್ಲಿ ನಿಂತು ಹಾಳುಗುವ ಹಂತ ತಲುಪಿವೆ. ರೈತರು ಪರಿಹಾರ ಒದಗಿಸಿಕೊಡಬೇಕೆಂದಯ ಸರಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.

ಬಾಗಲಕೋಟೆ ಯಲ್ಲಿ ಕಳೆದ 24 ಗಂಟೆಗಳಲ್ಲಿ ರಾಜ್ಯದ ನಾನಾ ಕಡೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆ ಬಿದ್ದಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಂಗಳೂರು, ಬಳ್ಳಾರಿ, ಮಂಡ್ಯ ಜಿಲ್ಲೆಗಳಲ್ಲೂ ಮಳೆ ಅಬ್ಬರ ಜೋರಾಗಿದೆ.
-
Bengaluru Weather: ಬೆಂಗಳೂರಲ್ಲಿ ಬೇಸಿಗೆ ಆರಂಭದಲ್ಲೇ 40 ಡಿಗ್ರಿಯತ್ತ ತಾಪಮಾನ: ಉರಿ ಬಿಸಿಲು, ಸೆಕೆಯಿಂದ ಹೈರಾಣಾದ ಜನ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು











Click it and Unblock the Notifications