ಬಾದಾಮಿಯಲ್ಲಿ ಮಳೆ: ಜಮೀನಿಗೆ ನೀರು ನುಗ್ಗಿ ನಷ್ಟ
ಬಾಗಲಕೋಟೆ, ಆಗಸ್ಟ್ 4: ಬಾಗಲಕೋಟೆ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ವರುಣನ ಆರ್ಭಟ ಮುಂದುವರಿದಿದೆ. ಜಿಲ್ಲೆಯ ರಬಕವಿ ಬನಹಟ್ಟಿ, ಮುಧೋಳ, ತೇರದಾಳ, ಬಾದಾಮಿ ಸೇರಿದಂತೆ ಎಲ್ಲಾ ತಾಲ್ಲೂಕುಗಳಲ್ಲಿ ಭರ್ಜರಿ ಮಳೆಯಾಗಿದೆ.
ಬಾದಾಮಿ ತಾಲೂಕಿನಲ್ಲಿ ನಿರಂತರ ಮಳೆಯಿಂದಾಗಿ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದು, ಸೇತುವೆ ಜಲಾವೃತ ಆಗಿದೆ. ಬಾದಾಮಿ- ಮಣಿನಾಗರ ಮಾರ್ಗದ ರಸ್ತೆ ಸಂಪರ್ಕ ಸಹ ಬಂದ್ ಆಗಿದೆ.
ಯಂಕಂಚಿ, ಮಣಿನಾಗರ ಬಳಿ ಇರುವ ಸೇತುವೆ ಮೇಲೆ ಮಳೆ ನೀರು ರಭಸವಾಗಿ ಹರಿಯುತ್ತಿದೆ. ಆದರೂ ಸಹಾ ಸ್ಥಳೀಯ ಯುವಕರು ಹುಚ್ಚು ಸಾಹಸಕ್ಕೆ ಮುಂದಾಗಿದ್ದು ಕಂಡುಬಂತು. ಅಪಾಯ ಮಟ್ಟದಲ್ಲಿ ನೀರು ಹರಿದು ಬರುತ್ತಿದ್ದರು ವೇಗವಾಗಿ ಹರಿಯುವ ನೀರಲ್ಲಿ ನಡೆದುಕೊಂಡು ಬರುವುದು, ಬೈಕ್ ತೆಗೆದುಕೊಂಡು ಹೋಗುವ ಹುಚ್ಚು ಸಾಹಸಕ್ಕೆ ಯುವಕರು ಮಾಡುತ್ತಿದ್ದಾರೆ.

ಇದಲ್ಲದೆ ತೇರದಾಳ ಬಸ್ ನಿಲ್ದಾಣದಲ್ಲಿ ಮಳೆಯಿಂದಾಗಿ ಪ್ರಯಾಣಿಕರ ಪರದಾಟ ನಡೆಸಿದರು. ಮಳೆಯಲ್ಲೇ ನೆನೆದು ಓಡೋಡಿ ಬಸ್ ಹತ್ತುತ್ತಿರೊ ದೃಶ್ಯಗಳು ಕಂಡುಬಂದವು. ನಿರಂತರ ಮಳೆಯಿಂದಾಗಿ ಮಳೆ ನೀರು ರಸ್ತೆ ಮೇಲೆ ಹರಿದು ಜನಜೀವನ ಅಸ್ತವ್ಯಸ್ತವಾಗಿದೆ.
ಮನೆಗೆ ನುಗ್ಗಿದ ಮಳೆ ನೀರು; ಗೋವಕೊಪ್ಪ, ಕುಳಗೇರಿ ಗ್ರಾಮಗಳಲ್ಲಿ ಮಳೆಯ ನೀರು ಮನೆಗಳಿಗೆ ನುಗ್ಗಿದ್ದು, ನೀರು ಹೊರ ಹಾಕುವುದಕ್ಕೆ ಹರಸಾಹಸ ಪಡುತ್ತಿದ್ದಾರೆ. ಗುಡಿಸಲು ಹಾಗೂ ತಗಡಿನ ಶೆಡ್ನಲ್ಲಿ ವಾಸ ಮಾಡುತ್ತಿರುವ ನೀರು ಹೊರ ಹಾಕುವ ಕೆಲಸದಲ್ಲಿ ನಿರತರಾಗಿದ್ದರು. ಜೊತೆಗೆ ಚಿಮ್ಮನಕಟ್ಟಿ ಗ್ರಾಮ ಶಾಲೆಯ ಆವರಣದಲ್ಲಿ ನೀರು ನುಗ್ಗಿ ಶಾಲಾ ಮಕ್ಕಳು ಹಾಗೂ ಶಿಕ್ಷಕರು ಪರದಾಡುವಂತಾಗಿದೆ.
ಪರಿಹಾರಕ್ಕಾಗಿ ರೈತರ ಮನವಿ; ಇಳಕಲ್ ತಾಲೂಕಿನಲ್ಲೂ ವಿವಿಧೆಡೆ ಬುಧರಾತ್ರಿ ಮಳೆಯಾಗಿದೆ. ಕೋಡಿಹಾಳ ಗ್ರಾಮದಲ್ಲಿ ರಸ್ತೆಗಳಲ್ಲಿ ನೀರು ನಿಂತು ಕೆರೆಯಾಗಿವೆ. ಮನೆಗೆ ನೀರು ನುಗ್ಗಿ ದವಸ ಧಾನ್ಯಗಳು ಹಾಳಾಗಿವೆ. ಹಳ್ಳಗಳು ತುಂಬಿದ್ದ ನೀರು ಜಮೀನುಗಳು ಜಲಾವೃತಗೊಂಡಿದ್ದು, ಎಳ್ಳು, ಸಜ್ಜೆ,ತೊಗರಿ, ಸೂರ್ಯಕಾಂತಿ ಬೆಳೆಗಳು ನೀರಿನಲ್ಲಿ ನಿಂತು ಹಾಳುಗುವ ಹಂತ ತಲುಪಿವೆ. ರೈತರು ಪರಿಹಾರ ಒದಗಿಸಿಕೊಡಬೇಕೆಂದಯ ಸರಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.

ಬಾಗಲಕೋಟೆ ಯಲ್ಲಿ ಕಳೆದ 24 ಗಂಟೆಗಳಲ್ಲಿ ರಾಜ್ಯದ ನಾನಾ ಕಡೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆ ಬಿದ್ದಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಂಗಳೂರು, ಬಳ್ಳಾರಿ, ಮಂಡ್ಯ ಜಿಲ್ಲೆಗಳಲ್ಲೂ ಮಳೆ ಅಬ್ಬರ ಜೋರಾಗಿದೆ.
-
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Bengaluru Rain: ಬೆಂಗಳೂರಲ್ಲಿ ಮಳೆ ಬಂದಾಗ ಪವರ್ ಕಟ್ ಆಗುವುದ್ಯಾಕೆ, ಡಾಕ್ಟರ್ ಪ್ರಶ್ನೆಗೆ ನೆಟ್ಟಿಗರು ಹೇಳಿದ್ದೇನು -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ












Click it and Unblock the Notifications