Breaking: ಬಾಗಲಕೋಟೆಯಲ್ಲಿ ಪಿಯು ಕಾಲೇಜಿನ ಮೇಲೆ ಕಲ್ಲುತೂರಾಟ
ಬಾಗಲಕೋಟೆ, ಫೆಬ್ರವರಿ 8: ಕರ್ನಾಟಕದ ಕರಾವಳಿಯಲ್ಲಿ ಹೊತ್ತಿಕೊಂಡ ಹಿಜಾಬ್ V/s ಕೇಸರಿ ಶಾಲು ವಿವಾದ ಕ್ರಮೇಣವಾಗಿ ಇಡೀ ರಾಜ್ಯಕ್ಕೆ ವ್ಯಾಪಿಸುತ್ತಿದೆ. ಬಾಗಲಕೋಟೆ ಜಿಲ್ಲೆ ರಬಕವಿ ಬನಹಟ್ಟಿ ಪಟ್ಟಣದ ಪಿಯು ಕಾಲೇಜಿನ ಮೇಲೆ ಕಲ್ಲುತೂರಾಟ ನಡೆದಿದೆ.
ನಗರದ ಪದವಿ ಪೂರ್ವ ಕಾಲೇಜಿನ ಎದುರಿನಲ್ಲಿ ಒಂದು ಗುಂಪಿನ ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಪ್ರತಿಭಟನೆ ನಡೆಸುತ್ತಿದ್ದರೆ, ಇನ್ನೊಂದು ಕಡೆಯಲ್ಲಿ ಕೇಸರಿ ಶಾಲುಗಳನ್ನು ಹಾಕಿಕೊಂಡು ಬಂದು ಘೋಷಣೆಗಳನ್ನು ಕೂಗುತ್ತಿದ್ದಾರೆ.
Recommended Video

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ಪಟ್ಟಣದಲ್ಲಿರುವ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಗುಂಪು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಮಧ್ಯೆ ಕೆಲವು ಕಿಡಿಗೇಡಿಗಳು ಕಾಲೇಜಿನ ಮೇಲೆ ಕಲ್ಲು ತೂರಾಟ ನಡೆಸಿದ್ದು, ಒಬ್ಬ ವಿದ್ಯಾರ್ಥಿ ಗಾಯಗೊಂಡಿದ್ದಾರೆ.
ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ಪೋಷಕರ ಸಾಥ್:
ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ಪದವಿ ಪೂರ್ವ ಕಾಲೇಜಿನ ಬಳಿ ಕೆಲವು ಹಿಜಾಬ್ ಧರಿಸಿದ್ದರೆ, ಇನ್ನೂ ಕೆಲವು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿಕೊಂಡು ಕಾಲೇಜಿನ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆ ಹಿಜಾಬ್ ಧರಿಸಿ ಬಂದಿರುವ ವಿದ್ಯಾರ್ಥಿನಿಯರಿಗೆ ಪೋಷಕರು ಸಾಥ್ ನೀಡಿದ್ದಾರೆ.
ಮಂಗಳವಾರ ಹೈಕೋರ್ಟ್ ವಿಚಾರಣೆ:
ರಾಜ್ಯ ಸರ್ಕಾರ ಸಮವಸ್ತ್ರ ಕಡ್ಡಾಯಗೊಳಿಸಿ ಆದೇಶಿಸಿದ್ದರೂ ರಾಜ್ಯದ ಅನೇಕ ಜಿಲ್ಲೆಗಳ ಕಾಲೇಜುಗಳಲ್ಲಿ ಹಿಜಾಬ್ ಕೇಸರಿ ಶಾಲು ಬಿಸಿ ಇನ್ನೂ ಹೆಚ್ಚಾಗಿದೆ. ಇದರ ನಡುವೆ ಹಿಜಾಬ್ ನಿರ್ಬಂಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಮಂಗಳವಾರ ಹೈಕೋರ್ಟ್ ವಿಚಾರಣೆ ನಡೆಸಲಿದೆ.
ರಾಜ್ಯದ ಇತರ ಭಾಗಗಳಲ್ಲಿಯೂ ಪ್ರತಿಭಟನೆಗಳು ಹರಡಿದ್ದು, ಮಂಡ್ಯ ವಿಶ್ವವಿದ್ಯಾನಿಲಯದ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಘೋಷಣೆ ಕೂಗಿದರು. ಕಳೆದ ಒಂದು ವಾರದಿಂದ ಕೆಲವು ವಿದ್ಯಾರ್ಥಿಗಳು ಹಿಜಾಬ್ ಧರಿಸುತ್ತಿದ್ದಾರೆ ಎಂದು ಹೇಳಿರುವ ಅವರು, ಹುಡುಗಿಯರು ಹಿಜಾಬ್ ಅನ್ನು ದೂರವಿಡುವವರೆಗೂ ನಾವು ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಹೇಳಿದರು.
-
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
SSLC ಪರೀಕ್ಷೆಗೆ ಹಾಜರಾತಿ ಶಾಕ್: ನಿಯಮ ಉಲ್ಲಂಘಿಸಿದ 35,000 ವಿದ್ಯಾರ್ಥಿಗಳು ಪರೀಕ್ಷೆಯಿಂದ ವಂಚಿತ -
ಹನುಮ ಜಯಂತಿ ಮುನ್ನವೇ ಅಯೋಧ್ಯೆಗೆ ಗೌತಮ್ ಅದಾನಿ ಭೇಟಿ: ಪ್ರಾಚೀನ ಗುರುಕುಲಕ್ಕೆ AI ಲ್ಯಾಬ್ ಘೋಷಣೆ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ?












Click it and Unblock the Notifications