ಇದೇ ಕೊನೆ ಚುನಾವಣೆ, ಪಕ್ಷೇತರನಾಗಿ ಸ್ಪರ್ಧಿಸುವೆ: ಪ್ರಮೋದ್ ಮುತಾಲಿಕ್
ಬಾಗಲಕೋಟೆ, ನವೆಂಬರ್ 04: 2023ರ ವಿಧಾನಸಭೆ ಚುನಾವಣೆ ನನ್ನ ಕೊನೆಯ ಪ್ರಯತ್ನ, ಈ ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪಧೆ ಮಾಡುತ್ತೇನೆ, ಯಾವ ಕ್ಷೇತ್ರದಲ್ಲಿ ಸ್ಪರ್ಧಿಸುತ್ತೇನೆಂದು ಮುಂದಿನ ತಿಂಗಳ ಮೊದಲ ವಾರದಲ್ಲಿ ಘೋಷಣೆ ಮಾಡುತ್ತೇನೆಂದು ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ತಿಳಿಸಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, 2023ರ ವಿಧಾನ ಸಭೆ ಚುನಾವಣೆಗೆ ಖಂಡಿತ ಸ್ಫರ್ಧೆ ಮಾಡುತ್ತೇನೆ. ಆದರೆ ಯಾವುದೇ ಕಾರಣಕ್ಕೂ ಶ್ರೀರಾಮಸೇನೆ ಚುನಾವಣೆಯಲ್ಲಿ ಸ್ಫರ್ಧೆ ಮಾಡುವುದಿಲ್ಲ, ಅದೊಂದು ಸಾಂಸ್ಕೃತಿಕ ಮತ್ತು ಹಿಂದೂ ಸಂಘಟನೆ. ಆದ್ದರಿಂದ ನಾನು ಯಾವುದೇ ಪಕ್ಷದ ಟಿಕೆಟ್ ಪಡೆಯದೇ, ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಮುತಾಲಿಕ್ ಸ್ಪಷ್ಟ ಪಡಿಸಿದ್ದಾರೆ.
ಯಾವ ಕ್ಷೇತ್ರದಿಂದ ಸ್ಪರ್ಧೆ ಅಂತ ಇನ್ನೂ ನಿರ್ಧಾರ ಆಗಿಲ್ಲ. ಡಿಸೆಂಬರ್ ಮೊದಲ ವಾರದಲ್ಲಿ ಡಿಕ್ಲೇರ್ ಮಾಡುತ್ತೇನೆ. ಈಗಾಗಲೇ ನಾವು ಎಲ್ಲಿ ನಿಲ್ಲಬೇಕೆಂದು ಕಾರ್ಯಕರ್ತರು ಐದಾರು ಕ್ಷೇತ್ರದಲ್ಲಿ ಸರ್ವೆ ಮಾಡುತ್ತಿದ್ದಾರೆ. ತೇರದಾಳ, ಜಮಖಂಡಿ, ಪುತ್ತೂರು, ಕಾರ್ಕಳ ಉಡುಪಿ ಸೇರಿದಂತೆ ಎಂಟತ್ತು ಕ್ಷೇತ್ರಗಳಲ್ಲಿ ಸರ್ವೆ ನಡೆಯುತ್ತಿದೆ ಎಂದು ಮುತಾಲಿಕ್ ಮಾಹಿತಿ ನೀಡಿದರು.

ಸಮಗ್ರವಾಗಿ ತನಿಖೆಯಾಗಲಿ
ಇದೇ ಸಮಯದಲ್ಲಿ ರೇಣುಕಾಚಾರ್ಯ ಸಹೋದರ ಪುತ್ರನ ಸಾವು ಹಿನ್ನೆಲೆ ಬಗ್ಗೆ ಪ್ರತಿಕ್ರಿಯೆ ನೀಡಿದ ಮುತಾಲಿಕ್, 24 ವರ್ಷದ ಯುವಕನ ಸಾವು ದುರಂತದಲ್ಲಿ ಆಗಬಾರದಿತ್ತು. ಇದೊಂದು ನಿಗೂಢ ರೀತಿಯ ಸಾವಾಗಿದೆ. ರೇಣುಕಾಚಾರ್ಯ ಅವರೇ ಈಗಾಗಲೇ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಸರಕಾರ ಪೊಲೀಸ್ ಇಲಾಖೆ ಸಮಗ್ರವಾಗಿ ತನಿಖೆ ಮಾಡಬೇಕು ಎಂದು ತಿಳಿಸಿದ ಅವರು,ಇದರ ಹಿಂದೆ ಯಾರು ಇದ್ದಾರೆ ಅಂತ ಕಂಡು ಹಿಡಿದು ಶಿಕ್ಷೆ ಕೊಡಿಸಬೇಕು. ರೇಣುಕಾಚಾರ್ಯ ಅವರು ನೇರವಾಗಿ ಹಿಂದೂತ್ವದ ಪ್ರತಿಪಾದಕರು. ಹಿಂದೂ ಧರ್ಮದ ಕುರಿತು ಸತ್ಯದ ವಿಚಾರ ಹೇಳುತ್ತಾ ಇದ್ದರು. ಹಾಗಾಗಿ ಆ ಆಯಾಮದಲ್ಲೂ ತನಿಖೆ ಆಗಬೇಕು ಎಂದು ಮುತಾಲಿಕ ಆಗ್ರಹಿಸಿದರು.

ಎರಡು ದಿನಗಳಲ್ಲಿ ಐದು ಬೆದರಿಕೆ ಕರೆ
ಇದೇ ಸಮಯದಲ್ಲಿ ಜೀವಬೆದರಿಕೆ ಕರೆಗಳ ಆರೋಪ ಬಗ್ಗೆ ಮಾತನಾಡಿದ ಮುತಾಲಿಕ, ಎರಡು ದಿನಗಳಲ್ಲಿ ಐದು ಬೆದರಿಕೆ ಕರೆಗಳು ಬಂದಿದೆ. ಎರಡು ಕರೆ ಸ್ವೀಕರಿಸಿದಾಗ ಧಮಕಿ ಹಾಕಿ, ಕೊಲೆ ಬೆದರಿಕೆ ಹಾಕಿದ್ದಾರೆ. ಎರಡು ದಿನ ಹುಕ್ಕೇರಿಯಲ್ಲಿ ಇದ್ದಾಗ ಐದು ಕರೆಗಳು ಬಂದಿದ್ದವು, ಈ ಬಗ್ಗೆ ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ ಎಂದು ಮಾಹಿತಿ ನೀಡಿದರು.

ಬೆದರಿಕೆಯಿಂದ ನಾನು ಹೆದರುವವನಲ್ಲ
ಕೊಲೆ ಬೆದರಿಕೆ ಹಾಕುವವರಿಕೆಗೆ ಎಚ್ಚರಿಕೆ ಕೊಡುತ್ತೇನೆ. ಈ ರೀತಿಯ ಬೊಗಳುವಿಕೆ ನಿಲ್ಲಿಸಬೇಕು. ನಿಮ್ಮ ಬೆದರಿಕೆಯಿಂದ ನಾನು ಹೆದರುವವನಲ್ಲ. ನಾನು ಸಾಯೋವರೆಗೂ ಹಿಂದುತ್ವ ಹಾಗೂ ದೇಶದ ಕೆಲಸ ಮಾಡುತ್ತೇನೆ. ನಿಮ್ಮ ಕೊಲೆ ಬೆದರಿಕೆಗಳಿಗೆ ನಾನು ಆತಂಕಗೊಳ್ಳುವುದಿಲ್ಲ.ನಾನು ನಿರಂತರವಾಗಿ ಹಿಂದುತ್ವದ ಕೆಲಸ ಮಾಡಿ ತೋರಿಸುತ್ತೇನೆ ಎಂದರು.

ಕರೆ ಮಾಡಿರುವವರ ವಿರುದ್ಧ ದೂರು
ನಾವು ಸಂವಿಧಾನ, ಕಾನೂನು, ಪ್ರಜಾಪ್ರಭುತ್ವ ಆಧಾರದ ಮೇಲೆ ಸಂಘಟನೆ ಮಾಡುತ್ತಿದ್ದೇವೆ. ಕೊಲೆ ಬೆದರಿಕೆಗೆ ಹೆದರುವವ ನಾನಲ್ಲ, ನಾನು ಕಂಪ್ಲೆಂಟ್ ಲಾರ್ಜ್ ಮಾಡಿದ್ದೇನೆ. ಮುಂದಿನ ಕೆಲಸ ಪೊಲೀಸ್ ಇಲಾಖೆಗೆ ಬಿಟ್ಟದ್ದು. ಅವರು ಇದನ್ನು ಶೋಧಿಸಬೇಕು. ಫೋನ್ ಮಾಡಿದ್ದು ಯಾರು? ಏನು ? ಬೆದರಿಕೆ ಕರೆ ಮಾಡಿದ್ದು ಯಾರೂ ಏನು ಗೊತ್ತಿಲ್ಲ. ಫೋನ್ ನಂಬರ್ ಪೊಲೀಸರಿಗೆ ಕೊಟ್ಟಿದ್ದೇನೆ ಎಂದು ಮುತಾಲಿಕ್ ತಿಳಿಸಿದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications