ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಮಗನ ಮೇಲೆ ಆಣೆ ಮಾಡಿ ರೈತರಲ್ಲಿ ಭರವಸೆ ಮೂಡಿಸಿದ ಕುಮಾರಸ್ವಾಮಿ
ಬಾಗಲಕೋಟೆ, ಡಿಸೆಂಬರ್ 28: ಇರುವ ಒಬ್ಬ ಮಗನ ಮೇಲೆ ಆಣೆ ಮಾಡಿ ಹೇಳುತ್ತೇನೆ ಸಾಲಮನ್ನಾ ಮಾಡಿಯೇ ತೀರುತ್ತೇನೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
ಸಾಲ ಮನ್ನಾ : ಅರ್ಹ ರೈತರೇ ವಾಣಿಜ್ಯ ಬ್ಯಾಂಕ್ ಗಳಲ್ಲಿ ನೋಂದಾಯಿಸಿಕೊಳ್ಳಿ
ಬಾಗಲಕೋಟೆಯಲ್ಲಿ ಕಲಾಭವನದಲ್ಲಿ ರೈತರಿಗೆ ಋಣಮುಕ್ತ ಪತ್ರ ವಿತರಿಸಿ ಮಾತನಾಡಿದ ಅವರು, ಸಾಲಮನ್ನಾ ಮಾಡುವ ವಿಷಯದಲ್ಲಿ ಯಾರಿಗೂ ಮೋಸ ಮಾಡುವುದಿಲ್ಲ ಎಂದು ಅವರು ಹೇಳಿದರು.
ನಾನು ಉ.ಕರ್ನಾಟಕ ವಿರೋಧಿ ಎಂದು ಬಿಂಬಿಸಲಾಗುತ್ತಿದೆ: ಕುಮಾರಸ್ವಾಮಿ
ಸರ್ಕಾರ ನಡೆಸುವ ಶಕ್ತಿಯನ್ನು ನೀವು ಕೊಟ್ಟಿದ್ದೀರಿ, ಅದೇ ಶಕ್ತಿಯನ್ನು ನಾನು ನಿಮಗೆ ಪುನಃ ಧಾರೆ ಎರೆಯುತ್ತೇನೆ ಎಂದರು. ಮಗನ ಮೇಲೆ ಆಣೆ ಇರಿಸಿದ ಕುಮಾರಸ್ವಾಮಿ, ಸಾಲಮನ್ನಾ ಮಾಡುವುದು ಪಕ್ಕಾ ಎಂದರು.
ಇತ್ತೀಚೆಗೆ ಮುಗಿದ ಚಳಿಗಾಲದ ಅಧಿವೇಶನದಲ್ಲಿ ಬಿಜೆಪಿಯು ಸಾಲಮನ್ನಾ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಕಾರಣ ಕುಮಾರಸ್ವಾಮಿ ಅವರು, ಸಾಲಮನ್ನಾ ಮಾಡುವುದು ಪಕ್ಕಾ ಎಂದು ಪದೇ-ಪದೇ ಹೇಳುತ್ತಿದ್ದಾರೆ.
Comments
English summary
CM Kumaraswamy took swear on his son that he will waive off farmers loan. He talked in a government program organized in Bagalkote.
Story first published: Friday, December 28, 2018, 19:15 [IST]