ಶಿವಾಜಿ ಇಲ್ಲದಿದ್ದರೆ ಹಿಂದೂಗಳು ಇಸ್ಲಾಂಗೆ ಮತಾಂತರವಾಗುತ್ತಿದ್ದರು: ಕೆ.ಎಸ್.ಈಶ್ವರಪ್ಪ
ಬಾಗಲಕೋಟೆ, ಆಗಸ್ಟ್ 28: ಬಾಗಲಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ತೆರವು ವಿಚಾರದಲ್ಲಿ ಕರ್ನಾಟಕ ಸರ್ಕಾರ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ. ಶಿವಾಜಿ ಮಹಾರಾಜರಿಲ್ಲದಿದ್ದರೆ ಹಿಂದೂಗಳೆಲ್ಲ ಇಸ್ಲಾಂಗೆ ಮತಾಂತರವಾಗುತ್ತಿದ್ದರು ಎಂದು ಮಾಜಿ ಸಚಿವ, ಬಿಜೆಪಿ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಸೋಮವಾರ ಹೇಳಿಕೆ ನೀಡಿದ್ದಾರೆ.
ಜಿಲ್ಲಾಡಳಿತದಿಂದ ಶಿವಾಜಿ ಮಹಾರಾಜರ ಪ್ರತಿಮೆ ತೆರವು ಮಾಡಿದ್ದನ್ನು ಸೋಮವಾರ ಬಾಗಲಕೋಟೆಯಲ್ಲಿ ಬಿಜೆಪಿಯ ಫೈರ್ಬ್ರಾಂಡ್ ಮುಖಂಡ ಕೆಎಸ್ ಈಶ್ವರಪ್ಪ ಖಂಡಿಸಿದರು.

ಛತ್ರಪತಿ ಶಿವಾಜಿ ಮಹಾರಾಜರಿಲ್ಲದಿದ್ದರೆ ನಾನು ಮತ್ತು ನೀವು ಹಿಂದೂಗಳಾಗಿ ಉಳಿಯಲು ಸಾಧ್ಯವಾಗುತ್ತಿರಲಿಲ್ಲ. ನಾವು ಸಹ ಕತ್ತರಿಸಲ್ಪಡುತ್ತಿದ್ದೆವು (ಸುನ್ನತ್). ನಾನು ಗಂಭೀರವಾಗಿ ಮಾತನಾಡುತ್ತಿದ್ದೇನೆ, ಅಲ್ಲದೆ ನಾನು ಪ್ರಕರಣಗಳಿಗೆ ಹೆದರುವುದಿಲ್ಲ. ಅವರು ನಮ್ಮನ್ನು ತುಂಡುಗಳಾಗಿ ಕತ್ತರಿಸುತ್ತಿದ್ದರು. ಸಾವರ್ಕರ್ ಸೇರಿದಂತೆ ಇಂತಹ ವ್ಯಕ್ತಿಗಳನ್ನು ಅವಮಾನಿಸಿ ಮುಸ್ಲಿಂ ಮತಗಳನ್ನು ಪಡೆಯುತ್ತೇವೆ ಎಂಬ ಭ್ರಮೆಯಲ್ಲಿ ಕಾಂಗ್ರೆಸ್ ಸರ್ಕಾರ ಇದೆ. ಕಾಂಗ್ರೆಸ್ ದೇಶವಿರೋಧಿಗಳಿಗೆ ಬೆಂಬಲ ನೀಡುತ್ತಿದೆ ಎಂದು ಬಹಿರಂಗವಾಗಿ ಹೇಳುತ್ತೇನೆ ಎಂದು ಈಶ್ವರಪ್ಪ ಹೇಳಿದರು.
ಯಾರ ಆದೇಶದ ಮೇರೆಗೆ ಜಿಲ್ಲಾಡಳಿತ ಶಿವಾಜಿ ಪ್ರತಿಮೆಯನ್ನು ತೆಗೆದಿದೆ ಎಂದು ಪ್ರಶ್ನಿಸಿದರು. ಎರಡು ದಿನಗಳ ನಂತರ ಪ್ರತಿಮೆಯನ್ನು ಏಕೆ ತೆಗೆದುಹಾಕಲಾಯಿತು? ಯಾವ ಕಾಂಗ್ರೆಸ್ ನಾಯಕ ಅವರಿಗೆ ಬೆದರಿಕೆ ಹಾಕಿದ್ದಾರೆ ಇಲ್ಲ ಬ್ಲಾಕ್ ಮೇಲ್ ಮಾಡಿದ್ದಾರೆ? ತನಿಖೆ ನಡೆಸಿ, ಘಟನೆಯ ಹಿಂದೆ ಇರುವ ಸಚಿವರು ರಾಜೀನಾಮೆ ನೀಡಬೇಕು. ಇದು ಬಾಗಲಕೋಟೆಗೆ ಮಾಡಿದ ಅವಮಾನವಲ್ಲ ದೇಶದ ಹಿಂದೂಗಳಿಗೆ ಮಾಡಿದ ಅವಮಾನ ಎಂದು ಹಿರಿಯ ಮುಖಂಡರು ಹೇಳಿದರು.
ಆಗಸ್ಟ್ 13 ರಂದು ಬಾಗಲಕೋಟೆಯ ಸೋನಾರ್ ಲೇಔಟ್ನಲ್ಲಿ ಜನರ ಗುಂಪು ಶಿವಾಜಿ ಮಹಾರಾಜರ ಪ್ರತಿಮೆಯನ್ನು ಸ್ಥಾಪಿಸಿತ್ತು. ಅನುಮತಿ ಪಡೆಯದೆ ಅಕ್ರಮವಾಗಿ ಅಳವಡಿಸಲಾಗಿದೆ ಎಂದು ಜಿಲ್ಲಾಡಳಿತ ಆರೋಪಿಸಿ ಆಗಸ್ಟ್ 15ರಂದು ತೆರವು ಮಾಡಿತ್ತು. ಹಿಂದೂ ಪರ ಸಂಘಟನೆಗಳು ಪ್ರತಿಭಟನೆ ನಡೆಸಿ ಆಗಸ್ಟ್ 19ರಂದು ಬಂದ್ ಆಚರಿಸಿದ್ದವು.
ಪ್ರತಿಮೆ ತೆರವಿಗೆ ಕಾಂಗ್ರೆಸ್ ನಾಯಕರೇ ಕಾರಣ ಎಂದು ಬಿಜೆಪಿ ಆರೋಪಿಸಿತ್ತು. ಮಹಾರಾಷ್ಟ್ರದ ಸಾಂಸ್ಕೃತಿಕ ವ್ಯವಹಾರಗಳ ಸಚಿವ ಸುಧೀರ್ ಮುಂಗಂಟಿವಾರ್ ಅವರು ಪ್ರತಿಮೆಯನ್ನು ಮರುಸ್ಥಾಪಿಸುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications