ಬಾಗಲಕೋಟೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಆನಂದ್ ಸಿಂಗ್ ಗೆ ಸೇರಿದ ಬಾದಾಮಿಯ ರೆಸಾರ್ಟ್ ಮೇಲೆ ಐಟಿ ದಾಳಿ

By ಬಾಗಲಕೋಟೆ ಪ್ರತಿನಿಧಿ
|
Google Oneindia Kannada News

ಬಾಗಲಕೋಟೆ, ಮೇ 8: ಚುನಾವಣೆಗೂ ಮುನ್ನ ಬಾದಾಮಿಯಲ್ಲಿ ಕಾಂಗ್ರೆಸಿಗೆ ಐಟಿ ಇಲಾಖೆ ದೊಡ್ಡ ಆಘಾತವನ್ನೇ ನೀಡಿದೆ.

ವಿಜಯನಗರದ ಕಾಂಗ್ರೆಸ್ ಅಭ್ಯರ್ಥಿ ಆನಂದ್ ಸಿಂಗ್ ಅವರಿಗೆ ಸೇರಿದ, ಬಾದಾಮಿ ಹೊರವಲಯದಲ್ಲಿರುವ ಕೃಷ್ಣ ಹೆರಿಟೇಜ್ ರೆಸಾರ್ಟ್ ಮೇಲೆ ಐಟಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

117 ಕೋಟಿ ಆಸ್ತಿ ಘೋಷಿಸಿದ ವಿಜಯನಗರ ಕಾಂಗ್ರೆಸ್ ಅಭ್ಯರ್ಥಿ ಆನಂದ್ ಸಿಂಗ್117 ಕೋಟಿ ಆಸ್ತಿ ಘೋಷಿಸಿದ ವಿಜಯನಗರ ಕಾಂಗ್ರೆಸ್ ಅಭ್ಯರ್ಥಿ ಆನಂದ್ ಸಿಂಗ್

ಸೋಮವಾರ ಮಧ್ಯರಾತ್ರಿ ಐಟಿ ಇಲಾಖೆ ಅಧಿಕಾರಿಗಳು ರೆಸಾರ್ಟ್ ಮೇಲೆ ದಾಳಿ ನಡೆಸಿದರು ಎಂದು ತಿಳಿದು ಬಂದಿದೆ. ಈ ವೇಳೆ ರೆಸಾರ್ಟ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ, ವಿಧಾನ ಪರಿಷತ್ ಸದಸ್ಯ ಸಿಎಂ ಇಬ್ರಾಹಿಂ ಇದ್ದರು ಎಂದು ತಿಳಿದು ಬಂದಿದೆ.

IT raid on resort in Badami, owned by Congressman Anand Singh

ಐಟಿ ಇಲಾಖೆ ಜಂಟಿ ನಿರ್ದೇಶಕರ ನೇತೃತ್ವದಲ್ಲಿ ದಾಳಿ ನಡೆದಿದ್ದು, ದಾಳಿ ಸಮಯದಲ್ಲಿ ಮೂರು ಗಂಟೆಗೂ ಹೆಚ್ಚು ಕಾಲ ಸಿಎಂ ಇಬ್ರಾಹಿಂ ರೆಸಾರ್ಟ್ ನಲ್ಲಿದ್ದರು. ನಂತರ ರಾತ್ರಿ ಎರಡು ಗಂಟೆ ಸುಮಾರಿಗೆ ರೆಸಾರ್ಟ್ ನಿಂದ ಸಿಎಂ ಇಬ್ರಾಹಿಂ ಹೊರ ನಡೆದರು ಎಂದು ಗೊತ್ತಾಗಿದೆ.

ಸಿಆರ್ ಪಿಎಫ್ ಹಾಗೂ ಬಾದಾಮಿ ಸಿವಿಲ್ ಪೊಲೀಸ್ ರಿಂದ ರೆಸಾರ್ಟ್ ಗೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಸುಮಾರು 8 ರಿಂದ 10 ಜನರ ತಂಡ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದೆ.

English summary
Karnataka assembly elections 2018: Income tax department officials conduct raid at Krishna Heritage Resort located in outskirts of Badami. The resort is said to be belongs to Vijayanagara congress candidate Anand Singh.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X