ಬ್ರಾಹ್ಮಣರ ಆಕ್ರೋಶಕ್ಕೆ ಕಾರಣವಾದ ಆನಂದ್ ನ್ಯಾಮಗೌಡ ಹೇಳಿಕೆ
Recommended Video

ಬಾಗಲಕೋಟೆ, ನವೆಂಬರ್ 14 : ಜಮಖಂಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಆನಂದ್ ನ್ಯಾಮಗೌಡ ಅವರ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ನವೆಂಬರ್ 3ರಂದು ನಡೆದ ಉಪ ಚುನಾವಣೆಯಲ್ಲಿ ಅವರು ಶಾಸಕರಾಗಿ ಆಯ್ಕೆಯಾಗಿದ್ದಾರೆ.
ಬುಧವಾರ ಜಮಖಂಡಿಯ ಅಲ್ಪಸಂಖ್ಯಾತ ಸಮುದಾಯದ ವತಿಯಿಂದ ಆನಂದ್ ನ್ಯಾಮಗೌಡ ಅವರಿಗೆ ಅಭಿನಂದನಾ ಸಮಾರಂಭ ಆಯೋಜಿಸಲಾಗಿತ್ತು. ಸಮಾರಂಭದಲ್ಲಿ ಭಾಷಣ ಮಾಡುವ ಭರದಲ್ಲಿ ಶಾಸಕರು ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ.
ಆನಂದ್ ನ್ಯಾಮಗೌಡ ಅವರು ನವೆಂಬರ್ 3ರಂದು ನಡೆದ ಉಪ ಚುನಾವಣೆಯಲ್ಲಿ ಬಿಜೆಪಿಯ ಶ್ರೀಕಾಂತ್ ಕುಲಕರ್ಣಿ ಅವರನ್ನು 39,480 ಮತಗಳ ಅಂತರದಿಂದ ಸೋಲಿಸಿದ್ದಾರೆ. ಚುನಾವಣೆ ಗೆಲುವಿನ ಬಳಿಕ ಜಾತಿಯ ಮಾತುಗಳನ್ನು ಆಡಿದ್ದಾರೆ.
ಶಾಸಕ ಆನಂದ್ ನ್ಯಾಮಗೌಡ ಅವರ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬ್ರಾಹ್ಮಣ ಸಮುದಾಯದ ಮುಖಂಡರು ಶಾಸಕರ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶ್ರೀಕಾಂತ್ ಕುಲಕರ್ಣಿ ಅವರು ಸಹ ಹೇಳಿಕೆಯನ್ನು ಖಂಡಿಸಿದ್ದಾರೆ....

ಆನಂದ್ ನ್ಯಾಮಗೌಡ ಹೇಳಿದ್ದೇನು?
ಸಮಾರಂಭದಲ್ಲಿ ಮಾತನಾಡಿದ ಆನಂದ್ ನ್ಯಾಮಗೌಡ ಅವರು, '1990ರಲ್ಲಿ ನಮ್ಮ ತಂದೆ ಸಿದ್ದು ನ್ಯಾಮಗೌಡ ಅವರು ಬ್ರಾಹ್ಮಣ ಸಮುದಾಯದ ರಾಮಕೃಷ್ಣ ಹೆಗಡೆ ಅವರನ್ನು ಸೋಲಿಸಿ ದೇಶಕ್ಕೆ ಚಿರಪರಿಚಿತರಾಗಿದ್ದರು. ಸದ್ಯ, ನಾನೂ ಬ್ರಾಹ್ಮಣ ವ್ಯಕ್ತಿಯನ್ನ ಸೋಲಿಸಿದ್ದೇನೆ' ಎಂದು ಹೇಳಿದರು.

ಶ್ರೀಕಾಂತ್ ಕುಲಕರ್ಣಿ ಸ್ಪರ್ಧೆ
ಸಿದ್ದು ನ್ಯಾಮಗೌಡ ಅವರ ನಿಧನದಿಂದಾಗಿ ಜಮಖಂಡಿ ಕ್ಷೇತ್ರಕ್ಕೆ ಉಪ ಚುನಾವಣೆ ಎದುರಾಗಿತ್ತು. ನವೆಂಬರ್ 3ರಂದು ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿದ್ದು ನ್ಯಾಮಗೌಡ ಪುತ್ರ ಆನಂದ್ ನ್ಯಾಮಗೌಡ, ಬಿಜೆಪಿ ಅಭ್ಯರ್ಥಿಯಾಗಿ ಬ್ರಾಹ್ಮಣ ಸಮುದಾಯಕ್ಕೆ ಸೇರಿದ ಶ್ರೀಕಾಂತ್ ಕುಲಕರ್ಣಿ ಅವರು ಸ್ಪರ್ಧೆ ಮಾಡಿದ್ದರು.

ಬ್ರಾಹ್ಮಣ ಸಮುದಾಯದ ಆಕ್ರೋಶ
ಜಮಖಂಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಆನಂದ್ ನ್ಯಾಮಗೌಡ ಅವರು ಬ್ರಾಹ್ಮಣ ಸಮುದಾಯದ ಬಗ್ಗೆ ಲಘುವಾಗಿ ಮಾತನಾಡಿದ್ದಾರೆ ಎಂದು ಸಮುದಾಯದ ಮುಖಂಡರು ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಪಸಂಖ್ಯಾತರ ಸಮಾರಂಭದಲ್ಲಿ ಈ ರೀತಿ ಮಾತನಾಡುವ ಮೂಲಕ ಸಮಯದಾಯವನ್ನು ಓಲೈಸುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.

ಮೊದಲು ಕ್ಷಮೆ ಕೇಳಲಿ
ಶಾಸಕ ಆನಂದ್ ನ್ಯಾಮಗೌಡ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ನಾಯಕ ಶ್ರೀಕಾಂತ್ ಕುಲಕರ್ಣಿ ಅವರು, 'ಈ ಸೊಕ್ಕು, ದರ್ಪ ಬಹಳ ದಿನ ಉಳಿಯುವುದಿಲ್ಲ. ಆನಂದ್ ನ್ಯಾಮಗೌಡ ಅವರು ಮೊದಲ ಬಾರಿಗೆ ಶಾಸಕರಾಗಿದ್ದಾರೆ ಎಂಬುದನ್ನು ಮರೆಯಬಾರದು. ಅವರಿಗೆ ಗೆಲುವಿನ ಸೊಕ್ಕು ಬಂದಿದೆ. ಸಜ್ಜನಿಕೆ ಇದ್ದರೆ ಮೊದಲು ಅವರು ತಮ್ಮ ಹೇಳಿಕೆ ಬಗ್ಗೆ ಕ್ಷಮೆ ಕೇಳಬೇಕು' ಎಂದು ಆಗ್ರಹಿಸಿದ್ದಾರೆ.

ಪಡೆದ ಮತಗಳು
ಜಮಖಂಡಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಆನಂದ್ ನ್ಯಾಮಗೌಡ ಅವರು 97017 ಮತಗಳನ್ನು ಪಡೆದು 39,480 ಮತಗಳ ಅಂತರದಿಂದ ಜಯಗಳಿಸಿದ್ದರು. ಬಿಜೆಪಿಯ ಶ್ರೀಕಾಂತ್ ಕುಲಕರ್ಣಿ ಅವರು 57,537 ಮತಗಳನ್ನು ಪಡೆದಿದ್ದಾರೆ.
-
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ












Click it and Unblock the Notifications