ಸದಾಶಿವ ಆಯೋಗ ವರದಿ ಭವಿಷ್ಯ ಜ14ಕ್ಕೆ ನಿರ್ಧಾರ?
ಬಾಗಲಕೋಟೆ, ಜನವರಿ 11: ರಾಜ್ಯದ ದಲಿತ ಸಮುದಾಯಗಳಲ್ಲಿ ಹೆಪ್ಪುಗಟ್ಟಿರುವ ಆಕ್ರೋಶದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜನವರಿ 14 ರಂದು ಮಹತ್ವದ ಸಭೆ ನಡೆಸಲಿದ್ದಾರೆ. ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಅನುಷ್ಠಾನ ಕುರಿತಂತೆ ದಲಿತ ಸಮುದಾಯದ ಎಡ ಮತ್ತು ಬಲ ಪಂಗಡಗಳ ಮುಖಂಡರೊಂದಿಗೆ ಮಾತುಕತೆ ನಡೆಸಲಿದ್ದಾರೆ.
ಈ ಕುರಿತು ಗುರುವಾರ ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ಸದಾಶಿವ ಆಯೋಗದ ವರದಿ ಕುರಿತಂತೆ ಚರ್ಚಿಸಲು ಮುಖ್ಯಮಂತ್ರಿಗಳು ಸಭೆ ಕರೆದಿದ್ದಾರೆ ಎಂದು ತಿಳಿಸಿದ್ದಾರೆ.
ಚಿತ್ರದುರ್ಗ ರಾಜಕಾರಣ : ಎಚ್.ಆಂಜನೇಯ ಕ್ಷೇತ್ರ ಬದಲಾವಣೆ?
ರಾಜ್ಯಕ್ಕೆ ಮೋದಿಯೇ ಬರಲಿ, ಅಮಿತ್ ಶಾ ಬರಲಿ ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಆಗಲಿದ್ದಾರೆ. ಇವರಿಬ್ಬರು ಏನೇ ಪ್ರಚೋದನೆ ನೀಡಿದರೂ ಏನೂ ಮಾಡಲು ಸಾಧ್ಯವಿಲ್ಲ. ಜನರನ್ನು ಕೆಳಿಸುವ, ವಾಮಮಾರ್ಗದ ಮೂಲಕ ಮುಂದಾದರೂ ರಾಜ್ಯದಲ್ಲಿ ಬದಲಾವಣೆ ಅಸಾಧ್ಯ ಎಂದರು.
ರಾಜ್ಯದ ಜನರು ಕಾಂಗ್ರೆಸ್ ಪರವಾಗಿದ್ದಾರೆ. ರಾಜ್ಯದಲ್ಲಿ ಜನರಿಗೆ ನೀಡಿದ ಜನಪರ ಕಾರ್ಯಗಳೇ ನಮ್ಮ ಕೈ ಹಿಡಿಯಲಿದೆ. ಜನವರಿ 14 ರಂದು ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ಕರೆಯಲಾಗಿದೆ. ಸಭೆಯಲ್ಲಿ ಚರ್ಚಿಸಿ ಸಿದ್ದರಾಮಯ್ಯ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ.